ಸೋಲಾರ್ ಸಂಸ್ಥೆಗೆ ಜಮೀನು ನೀಡಿದ ರೈತರಿಗೆ ಪರದಾಟ ತಪ್ಪಿಲ್ಲ!
ಚಾಮರಾಜನಗರ, ಡಿಸೆಂಬರ್ 28: ರೈತರಿಂದ ಜಮೀನು ಪಡೆಯುವಾಗ ಜಮೀನು ಕಳೆದುಕೊಳ್ಳುವ ರೈತರಿಗೆ ಉದ್ಯೋಗ ನೀಡುವ ಭರವಸೆ ನೀಡಿದ ಸೋಲಾರ್ ಸಂಸ್ಥೆ ಇದೀಗ ಕೆಲವರಿಗೆ ಭದ್ರತಾ ಸಿಬ್ಬಂದಿ ಸೇರಿದಂತೆ ಸಣ್ಣಪುಟ್ಟ ಉದ್ಯೋಗ ನೀಡಿದ್ದರೆ, ಮತ್ತೆ ಕೆಲವರಿಗೆ ಉದ್ಯೋಗವನ್ನು ನೀಡದೆ ವಂಚಿಸಿದೆ. ಜೊತೆಗೆ ಉದ್ಯೋಗ ಪಡೆದಿರುವ ಸಿಬ್ಬಂದಿಗೆ ಅನಗತ್ಯ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದ ಸಮೀಪದಲ್ಲಿ ಸುಮಾರು 150ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಮೀರಾ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಿದ್ದು, ಇಲ್ಲಿ ಕಳೆದ ಒಂದು ವರ್ಷದಿಂದ ಹಲವರು ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.
ರೈತರ ಭೂಮಿಯನ್ನು ಖರೀದಿಸುವ ವೇಳೆ ತಮ್ಮ ಭೂಮಿಯನ್ನು ಮಾರಾಟ ಮಾಡಲೊಪ್ಪದ ಕುಟುಂಬಗಳಿಗೆ ಉದ್ಯೋಗ ಕೊಡುವ ಭರವಸೆ ನೀಡಿ ಖರೀದಿಸಲಾಗಿತ್ತು. ಕುಟುಂಬದ ಒಬ್ಬರಿಗೆ ಉದ್ಯೋಗ ದೊರಕುವ ಆಸೆಯಿಂದ ರೈತರು ತಮ್ಮ ಭೂಮಿಯನ್ನು ಮಾರಾಟ ಮಾಡಿದ್ದರು.

ನಂತರ ಇಲ್ಲಿ ಕಳೆದ ಒಂದು ವರ್ಷದಿಂದ ಕೆಲವರು ಭದ್ರತಾ ಸಿಬ್ಬಂದಿಯಾಗಿ ಕೆಲಸಮಾಡುತ್ತಿದ್ದರೆ, ಇನ್ನು ಕೆಲವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತೆ ಕೆಲವರು ಕೆಲಸ ನೀಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಹೀಗಿರುವಾಗ ಇತ್ತೀಚೆಗೆ ಬದಲಾದ ಆಡಳಿತ ಮಂಡಳಿಯು ಸಿಬ್ಬಂದಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ.
ಹಿಂದಿಯಲ್ಲಿ ಮಾತನಾಡುವ ಮೇಲ್ವಿಚಾರಕರು ಸ್ಥಳೀಯ ಸಿಬ್ಬಂದಿಗಳನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದು, ಕಳೆದ ತಿಂಗಳಿನಿಂದ ಕೆಲಸವನ್ನೂ ಕೊಡದೆ ಸಂಬಳವನ್ನೂ ನೀಡಿಲ್ಲ. ಬಿಹಾರ ಮೂಲದ ಕಾರ್ಮಿಕರನ್ನು ಕರೆತಂದು ಭದ್ರತಾ ಕೆಲಸಕ್ಕೆ ನಿಯೋಜಿಸಿದ್ದರಿಂದ ಕಳೆದ ವರ್ಷದಿಂದ ಕಾರ್ಯನಿರ್ವಹಿಸಿ ತಮ್ಮ ಕುಟುಂಬವನ್ನು ನಿರ್ವಹಿಸುತ್ತಿದ್ದ ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ.

ಇದ್ದ ಭೂಮಿಯನ್ನು ಮಾರಿ ಮಾಡಲು ಬೇರಾವುದೇ ಉದ್ಯೋಗವಿಲ್ಲದೆ ಜೀವನೋಪಾಯಕ್ಕೆ ಪರದಾಡುವಂತಾಗಿದೆ. ಆದ್ದರಿಂದ ಹಿಂದೆ ಮಾಡಿಕೊಂಡಿದ್ದ ಒಪ್ಪಂದದಂತೆ ತಮ್ಮನ್ನು ಉದ್ಯೋಗದಲ್ಲಿ ಮುಂದುವರೆಸಲು ನೆರವಾಗಬೇಕು ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ದೂರು ಸ್ವೀಕರಿಸಿರುವ ಪೊಲೀಸರು ಸರ್ಕಲ್ ಇನ್ಸ್ಪೆಕ್ಟರ್ ಸಮ್ಮುಖದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications