ಹನೂರು: ಹೃದಯಾಘಾತದಿಂದ ಪಂಜಾಬ್ ಗಡಿಯಲ್ಲಿ ಮೃತಪಟ್ಟಿದ್ದ ಗಡಿಜಿಲ್ಲೆ ಯೋಧನ ಅಂತ್ಯಕ್ರಿಯೆ
ಚಾಮರಾಜನಗರ, ಆಗಸ್ಟ್, 25: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಯೋಧರ ಗ್ರಾಮ ಎಂದೇ ಪ್ರಸಿದ್ಧ ಆಗಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಹೃದಯಘಾತದಿಂದ ಕರ್ತವ್ಯದಲ್ಲಿರುವಾಗಲೇ ಮೃತಪಟ್ಟಿರುವ ಘಟನೆ ಆಗಸ್ಟ್ 22ರಂದು ನಡೆದಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು (ಆಗಸ್ಟ್ 25) ನೆರವೇರಿಸಲಾಯಿತು.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಯೋಧ ಜ್ಞಾನಪ್ರಕಾಶ್ ಕಳೆದ 13 ವರ್ಷಗಳ ಹಿಂದೆ ಭಾರತೀಯ ಸೇನೆಗೆ ಆಯ್ಕೆಯಾಗಿ ಪಂಜಾಬ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಅವರು ಕಳೆದ ಎರಡು ದಿನಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು.
ಇನ್ನು ಇವರ ಸಾವಿನ ಮಾಹಿತಿಯನ್ನು ಕುಟುಂಬಸ್ಥರಿಗೆ ತಿಳಿಸಿ, ಕುಟುಂಬಸ್ಥರು ಪಂಜಾಬ್ಗೆ ತೆರಳಿ ಅಲ್ಲಿಂದ ಮೃತ ದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ತಂದು ಅಲ್ಲಿಂದ ಆಂಬುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ತರಲಾಯಿತು.
ನಂತರ ಕ್ರಿಶ್ಚಿಯನ್ ಸಮಾಜದ ಸಂಪ್ರದಾಯದಂತೆ ಪಾರ್ಥಿವ ಶರೀರವನ್ನು ಸುಳ್ವಾಡಿ ಗ್ರಾಮದ ಚರ್ಚ್ನಲ್ಲಿಟ್ಟು ಫಾ ಟೆನ್ನಿ ಕುರಿಯನ್ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.
ಸುತ್ತಮುತ್ತಲಿನ ಗ್ರಾಮಗಳ ನಿವೃತ್ತ ಸೈನಿಕರಗಳು, ಸಾರ್ವಜನಿಕರು ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದರು. ಅದಾದ ಬಳಿಕ ಕ್ರೈಸ್ಥ ಮತದನುಸರವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪತ್ನಿ ನಿಧನದ ಸುದ್ದಿ ಕೇಳಿ ಪತಿಗೆ ಹೃದಯಾಘಾತ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂತಹ ಪ್ರಕರಣಗಳಲ್ಲಿ ಯುವಕರ ಸಂಖ್ಯೆಯೇ ಹೆಚ್ಚಾಗಿದೆ ಎನ್ನಬಹುದು. ಇದೀಗ ಪತ್ನಿ ನಿಧನದ ಸುದ್ದಿ ಕೇಳಿ ಪತಿಯೂ ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.
ಮಂಗಲ ಗ್ರಾಮದ ಶೇಖರ್ (70) ಹಾಗೂ ಸುಮಿತ್ರಮ್ಮ (65) ಎಂದು ಮೃತ ದಂಪತಿಗಳು. ಈ ದಂಪತಿಗಳು ಕೃಷಿಕರಾಗಿದ್ದು, ಮಂಗಲ ಸಮೀಪದ ರಾಮನಗುಡ್ಡ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಶೇಖರ್ ರವರ ಪತ್ನಿ ಸುಮಿತ್ರಮ್ಮಗೆ ಶುಕ್ರವಾರ (ಆಗಸ್ಟ್ 23) ಮುಂಜಾನೆ ಎದೆ ನೋವು ಕಾಣಿಸಿಕೊಂಡಿದೆ. ಆಗ ಕೂಡಲೇ ಅವರನ್ನು ಕಾಮಗೆರೆ ಬಳಿ ಇರುವ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುಮಿತ್ರಮ್ಮ ಚಿಕಿತ್ಸೆ ಫಲಿಸದೆ, ಶುಕ್ರವಾರ (ಆಗಸ್ಟ್ 23) ರಾತ್ರಿ ಮೃತಪಟ್ಟಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಪತಿ ಶೇಖರ್ ಕೂಡ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಜೀವನ ಜಂಜಾಟದಲ್ಲಿ ಒಂದಾಗಿದ್ದ ದಂಪತಿಗಳು ಸಾವಿನಲ್ಲೂ ಒಂದಾಗಿರುವುದು ಇವರ ಆದರ್ಶ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications