ಚಾಮರಾಜನಗರ ಕಾಡಂಚಿನಲ್ಲಿ ಹಕ್ಕು ಚಲಾಯಿಸಿದ ಸೋಲಿಗರು
ಚಾಮರಾಜನಗರ, ಏಪ್ರಿಲ್ 18:ಜಿಲ್ಲೆಯ ಕಾಡಂಚಿನಲ್ಲಿ ವಾಸವಾಗಿರುವ ಸೋಲಿಗರನ್ನು ಮತಗಟ್ಟೆಯತ್ತ ಕರೆತರುವ ಮತ್ತು ಆ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಮಾಡುವಲ್ಲಿ ಚಾಮರಾಜನಗರ ಜಿಲ್ಲಾಡಳಿತ ಯಶಸ್ವಿಯಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚಾಮರಾಜನಗರ ಜಿಲ್ಲೆಯು ರಾಜ್ಯದಲ್ಲಿಯೇ ಅತೀಹೆಚ್ಚು ಬುಡಕಟ್ಟು ಸಮುದಾಯದವರನ್ನು ಒಳಗೊಂಡಿದ್ದು, ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 36 ಸಾವಿರ ಸೋಲಿಗರು ಕಾಡುಕುರುಬ ಜೇನುಕುರುಬ ಬುಡಕಟ್ಟು ಜನಾಂಗದವರು ವಾಸಿಸುತ್ತಾರೆ. ಇದರಲ್ಲಿ 23 ಸಾವಿರ ಮಂದಿ ಮತದಾರರಿದ್ದಾರೆ.
ಭಾರತ ಚುನಾವಣಾ ಆಯೋಗದ ಆದೇಶದಂತೆ ಈ ಬಾರಿ ಬುಡಕಟ್ಟು ಜನಾಂಗದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚು ಮಾಡುವ ದೃಷ್ಟಿಯಿಂದ ಜಿಲ್ಲಾ ಚುನಾವಣಾ ಆಯೋಗವು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕೆ.ಗುಡಿ ಆಶ್ರಮ ಶಾಲೆಯಲ್ಲಿ 127 ಸಂಖ್ಯೆ ಮತಗಟ್ಟೆಯನ್ನು ಸ್ಥಾಪಸಿದ್ದು, ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಪುರಾಣಿ ಪೋಡುವಿನಲ್ಲಿ 197 ಸಂಖ್ಯೆಯ ಮತಗಟ್ಟೆಯನ್ನು ಸ್ಥಾಪಿಸಿದ್ದು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಮದ್ದೂರು ಕಾಲೋನಿ ಗಿರಿಜನ ಆಶ್ರಮ ಶಾಲೆಯಲ್ಲಿ 180 ಸಂಖ್ಯೆಯ ಮತಗಟ್ಟೆಯನ್ನು ಸ್ಥಾಪಿಸಿದ್ದು, ಹನೂರು ವಿಧಾನಸಭಾ ಕ್ಷೇತ್ರದ ಕೋಣನಕೆರೆ ಗಿರಿಜನ ಆಶ್ರಮ ಶಾಲೆಯಲ್ಲಿ 152 ಸಂಖ್ಯೆಯ ಮತಗಟ್ಟೆಯನ್ನು ಸ್ಥಾಪಿಸಲಾಗಿತ್ತು.

ಸಿಂಗಾರಗೊಂಡಿದ್ದ ಮತಗಟ್ಟೆಗಳು
ಎಂದಿನಂತೆ ಗಿರಿಜನರು ಈ ಮತಗಟ್ಟೆಗೆ ಸಂಸ್ಕೃತಿಯನ್ನು ಬಿಂಬಿಸುವ ತಳಿರು ತೋರಣಗಳಿಂದ ಸಾಂಸ್ಕೃತಿಕ ಮತಗಟ್ಟೆಗಳನ್ನು ಚಪ್ಪರದಿಂದ ಶೃಂಗರಿಸಿದ್ದರಲ್ಲದೇ, ಮತಗಟ್ಟೆಗೆ ತಮ್ಮದೇ ಆದ ಸಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ತೊಟ್ಟು, ಗೊರುಕನ ನೃತ್ಯದ ಮೂಲಕ ಮತದಾನ ಕೇಂದ್ರಕ್ಕೆ ತೆರಳಿ, ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮೆಹಂದಿ ಹಚ್ಚಿ ಮತದಾನಕ್ಕೆ ಸ್ವಾಗತ
ಗಿರಿಜನರನ್ನು ಪ್ರೋತ್ಸಾಹಿಸಲು ಕೆಲವು ಮಹಿಳೆಯರು ಅವರ ಕೈಗಳ ಮೇಲೆ ಮೆಹಂದಿ ಹಚ್ಚಿ ಮತದಾನಕ್ಕೆ ಸ್ವಾಗತ ಕೋರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹಾಗೆ ನೋಡಿದರೆ ಚಾಮರಾಜನಗರ ಜಿಲ್ಲೆಯಲ್ಲಿ ಶೇ.49ರಷ್ಟು ಅರಣ್ಯ ಪ್ರದೇಶನ್ನು ಶೇ.51ರಷ್ಟು ಬಯಲು ಸೀಮೆಯನ್ನು ಒಳಗೊಂಡಿದೆ.

ಜಿಲ್ಲೆಯ ಮತದಾರರ ಸಂಖ್ಯೆ
ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿರಂಗನಬೆಟ್ಟ, ಸೇರಿದಂತೆ ಎರಡು ಹುಲಿ ಸಂರಕ್ಷಿತ ಪ್ರದೇಶಗಳಿದ್ದು, ಮಲೈಮಹದೇಶ್ವರ ವನ್ಯಜೀವಿಧಾಮ ಹಾಗೂ ಕಾವೇರಿ ವನ್ಯ ಜೀವಿ ಧಾಮ ಜಿಲ್ಲೆಯ ವ್ಯಾಪ್ತಿಗೆ ಸೇರಿದೆ. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಚಾಮರಾಜನಗರ, ಗುಂಡ್ಲುಪೇಟೆ, ಹನೂರು, ಕೊಳ್ಳೇಗಾಲ, ಟೀ.ನರಸೀಪುರ, ನಂಜನಗೂಡು, ಹೆಗ್ಗಡದೇವನಕೋಟೆ, ವರುಣಾ, ವಿಧಾನಸಭಾ ಕ್ಷೇತ್ರಗಳು ಒಳಪಡಲಿದ್ದು, ಮತದಾರರ ಅಂತಿಮ ಪಟ್ಟಿಯಲ್ಲಿ ಈವರೆಗೆ 8 ಲಕ್ಷ 42 ಸಾವಿರ 872 ಪುರುಷರು 8 ಲಕ್ಷ 43 ಸಾವಿರ 379 ಮಹಿಳೆಯರು ಮತ್ತು 113 ತೃತೀಯ ಲಿಂಗ ಮತದಾರರಿದ್ದಾರೆ.

ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ
ಈ ಬಾರಿ ವಿಶೇಷವಾಗಿ ಜಿಲ್ಲಾ ಚುನಾವಣಾ ಆಯೋಗವು ಅಂಗವಿಕಲರಿಗೆ ರಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಮತದಾರರಿಗೆ ಕಲ್ಪಿಸಿದ್ದು, ಅದನ್ನು ಕ್ಷೇತ್ರದ ಮತದಾರರು ಸದುಪಯೋಗಪಡಿಸಿಕೊಂಡು ತಮ್ಮ ಹಕ್ಕು ಚಲಾಯಿಸುತ್ತಿರುವ ದೃಶ್ಯ ಕಂಡು ಬರುತ್ತಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications