Darshan Thoogudeepa: ಮಲೆ ಮಾದಪ್ಪನ ಬಳಿ ವಿಶೇಷ ಬೇಡಿಕೆ ಇಟ್ಟ ನಟ ದರ್ಶನ್ ಅಭಿಮಾನಿಗಳು
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಗ್ ಜೈಲು ಸೇರಿದೆ. ಇನ್ನು ಪೊಲೀಸರು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹ ಮಾಡುತ್ತಲೇ ಇದ್ದು, ಇದರ ನಡುವೆಯೇ ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ದರ್ಶನ್ ಹೊರತರಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಷ್ಟೆ ಅಲ್ಲದೆ, ಅಭಿಮಾನಿಗಳು ಸಹ ವಿಶೇಷ ಪೂಜೆಗಳನ್ನು ಮಾಡಿಸುತ್ತಲೇ ಇದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ಗಾಗಿ ಪತ್ನಿ ವಿಜಯಲಕ್ಷ್ಮಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಮಾಡಿಸುತ್ತಲೇ ಇದ್ದಾರೆ. ಇತ್ತೀಚೆಗಷ್ಟೇ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀರಿ ವಿಶೇಷ ಪೂಜೆ ಮಾಡಿಸಿ ಪ್ರಸಾದ ತಂದಿದ್ದರು. ಇದೀಗ ಭೀಮನ ಅಮಾವಾಸ್ಯೆ ಹಿನ್ನೆಲೆ ಇಂದು (ಆಗಸ್ಟ್ 04) ಅಭಿಮಾನಿಗಳು ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿತ ಚಿತ್ರನಟ ದರ್ಶನ್ ಫೋಟೋಗೆ ಪೂಜೆ, ಆರತಿ ಮಾಡಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ದರ್ಶನ್ ಅಭಿಮಾನಿ ಭರತ್ ಎಂಬುವವರು ಹಾಗೂ ಇನ್ನಿತರ ಯುವಕರು ತೆಂಗಿನಕಾಯಿ ಆರತಿ ಬೆಳಗಿ ಪೂಜೆ ಮಾಡಿಸಿದ್ದಾರೆ. ಇದೇ ವೇಳೆ ಅಣ್ಣ ಬೇಗ ಹೊರಗಡೆ ಬರಲಿ ಎಂದು ಬೇಡಿಕೊಂಡಿದ್ದಾರೆ. ಇನ್ನು ಕೆಲ ಅಭಿಮಾನಿಗಳಂತೂ ಫ್ಯಾನ್ ವಾರ್ ಮಾಡುತ್ತಾ ಅಂಧಾಭಿಮಾನ ಮೆರೆಯುವ ಕೆಲಸವನ್ನು ಮಾಡುತ್ತಿದ್ದಾರೆ.
ಕುಮಾರ್ ಬಂಗಾರಪ್ಪ ಏನ್ ಹೇಳಿದ್ದೇನು?: ರೇಣುಕಾಸ್ವಾಮಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ನನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಹೊರತರಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೊಂದೆಡೆ ಪೊಲೀಸರು ಬಲವಾದ ಸಾಕ್ಷ್ಯಗಳನ್ನು ಸಂಗ್ರಹ ಮಾಡಲು ಮುಂದಾಗಿದ್ದಾರೆ. ಇನ್ನು ಕೆಲವರು ದರ್ಶನ್ ಪರ, ಇನ್ನು ಕೆಲವರು ವಿರೋಧವಾಗಿ ಚರ್ಚೆಗಳನ್ನು ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಕುಮಾರ್ ಬಂಗಾರಪ್ಪ ಕೂಡ ಪ್ರತಿಕ್ರಿಯಿಸಿ ಶಾಕಿಂಗ್ ಹೇಳಿಕೆಯೊದನ್ನು ನೀಡಿದ್ದಾರೆ.
ರಾಜ್ಯದಲ್ಲಿ ಇಂತಹ ಘಟನೆ ನಡೆಯಲೇಬಾರದಿತ್ತು, ಆದರೆ ನಡೆದುಬಿಟ್ಟಿದೆ. ಚಿತ್ರರಂಗದಲ್ಲಿ ಹೊಗಳುವುದರ ಜೊತೆ ತೆಗಳುವ ಸನ್ನಿವೇಶಗಳು ಇರುತ್ತದೆ ಎಂದು ನಟ ಕುಮಾರ್ ಬಂಗಾರಪ್ಪ ಹೇಳಿದರು. ಅಲ್ಲದೆ, ರೇಣುಕಾಸ್ವಾಮಿ ಕುಟುಂಬಕ್ಕೆ ತುಂಬಲಾರದ ನಷ್ಟ ಆಗಿದೆ ಎಂದು ಹೇಳಿದರು.
ಇದೀಗ ಈ ಪ್ರಕರಣ ಕೋರ್ಟ್ನಲ್ಲಿದ್ದು, ಈ ಬಗ್ಗೆ ಮಾತಾಡುವುದು ಅಷ್ಟು ಸರಿಯಲ್ಲ. ದರ್ಶನ್ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ತನಿಖೆ ನಡೆಯುತ್ತಿದೆ. ನ್ಯಾಯಾಲಯ ಇದೆ, ಕಾನೂನಿದೆ ಎಲ್ಲಾವನ್ನು ನೋಡಿಕೊಳ್ಳುತ್ತಾರೆ. ಚಿತ್ರರಂಗದಲ್ಲಿ ಯಾರಿಗೇ ನೋವಾದರೂ ಕುಟುಂಬದ ಎಲ್ಲಾರಿಗೂ ನೋವಾಗುತ್ತದೆ. ಈ ಘಟನೆ ದರ್ಶನ್ ಅವರಿಂದಲೇ ಆಗಿದ್ದರೆ, ಅದನ್ನು ನ್ಯಾಯಾಲಯ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ದೇವರು ಇದ್ದಾನೆ, ತಪ್ಪು ಮಾಡಿದವರಿಗೆ ಶಿಕ್ಷೆ ಕೊಟ್ಟು, ಅನ್ಯಾಯ ಆದವರಿಗೆ ನ್ಯಾಯ ಕೊಡಿಸುತ್ತಾನೆ. ನಾನು ಸಹ ದರ್ಶನ್ ಜೊತೆ ಒಂದು ಸಿನಿಮಾ ಮಾಡಿದ್ದೀನಿ. ಒಂದು ತಿಂಗಳ ದರ್ಶನ್ ಜೊತೆ ಕೆಲಸ ಮಾಡಿದೆ. ದರ್ಶನ್ಗೆ ಅವರದ್ದೇ ಆದಂತಹ ಆ್ಯಟಿಟ್ಯೂಡ್ ಇದೆ. ದರ್ಶನ್ ತನ್ನದೇ ಶ್ರಮದಿಂದ ಬೆಳೆದು ಸ್ಟಾರ್ ಆದವರು ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications