ಕಾಡಲ್ಲಿ ಪ್ರಾಣಾಪಾಯ ಉಂಟಾದರೇ ಬಚಾವಾಗುವುದು ಹೇಗೆ? ಅರಣ್ಯ ಇಲಾಖೆ ಸಿಬ್ಬಂದಿಗೆ ತರಬೇತಿ
ಚಾಮರಾಜನಗರ, ಜೂನ್ 26: ಕಾಡಿನಲ್ಲಿ ಅಪಾಯ ಉಂಟಾದರೆ ಬದುಕುಳಿಯುವುದು ಹೇಗೆ, ಅರಣ್ಯದಲ್ಲಿ ದಾರಿ ತಪ್ಪಿದರೇ ಏನು ಮಾಡಬೇಕು, ಪ್ರಥಮ ಚಿಕಿತ್ಸೆ ಕೊಡುವುದು ಹೇಗೆ ಎಂಬುದರ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ತಜ್ಞರು ತರಬೇತಿ ಕೊಡಿಸಲಾಗಿದೆ.
ಬಿಆರ್ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಪ್ರಾಕೃತಿಕ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಯಲ್ಲಿ ತೊಡಗಿರುವ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಕರ್ತವ್ಯದ ವೇಳೆ ಪ್ರಾಣಾಪಾಯ ಸಂಭವಿಸಿದರೆ ಕಾಡಿನಲ್ಲಿ ಬದುಕುಳಿಯಲು ತಂತ್ರವನ್ನು ಕೆ.ಗುಡಿಯಲ್ಲಿ ತಜ್ಞರ ಮೂಲಕ ಮಾಹಿತಿ ಒದಗಿಸಿಕೊಡಲಾಯಿತು.
ಕೆ.ಗುಡಿ ವಲಯದ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕ್ಷೇತ್ರ ಸಿಬ್ಬಂದಿಗಳಿಗೆ ಸಂಪನ್ಮೂಲ ವ್ಯಕ್ತಿ ವಿನಯ್ ಶಿರ್ಸಿ ವಿಶೇಷ ತರಬೇತಿ ನೀಡಿದ್ದಾರೆ. ಕಳ್ಳಬೇಟೆ ಶಿಬಿರ, ಫಾರೆಸ್ಟ್ ಗಾರ್ಡ್ಗಳು, ಡಿಆರ್ಎಫ್ಒಗಳು ಮತ್ತು ಇತರರಿಗೆ ತಂತ್ರಗಾರಿಕೆಯ ಪಾಠ ಹೇಳಿಕೊಟ್ಟಿದ್ದಾರೆ. ಭೋಧನೆ, ವಿವರಣೆಯ ಜೊತೆಗೆ ಸಮಸ್ಯೆಗಳಿಗೆ ಹೇಗೆ ಪರಿಹಾರ ಕೊಂಡುಕೊಳ್ಳಬೇಕೆಂದು ಪ್ರಾಯೋಗಿಕ ವಿಧಾನದಲ್ಲೂ ವಿವರಿಸಿದ್ದಾರೆ.

ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ತನ್ನನ್ನು ತಾನು ಹೇಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕೆಂಬ ತಂತ್ರಗಳನ್ನು ಹೇಳಿಕೊಡಲಾಗಿದೆ. ಅರಣ್ಯಾಕಾರಿಗಳು ಮತ್ತು ಸಿಬ್ಬಂದಿ ಕ್ಷೇತ್ರದಲ್ಲಿದ್ದಾಗ ಕಾಡುಪ್ರಾಣಿಗಳು ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚು. ಇದರಿಂದ ತಪ್ಪಿಸಿಕೊಳ್ಳುವ ಮಾರ್ಗೋಪಾಯಗಳೇನು?, ಒಂದು ವೇಳೆ ಕಾಡು ಪ್ರಾಣಿಗಳ ದಾಳಿಯಿಂದ ಗಾಯಗಳಾದರೆ ಅವರನ್ನು ಹೇಗೆ ರಕ್ಷಣೆ ಮಾಡಬೇಕು. ಬೆಟ್ಟಗುಡ್ಡ ಹತ್ತಿದಾಗ ಉಸಿರಾಟದ ತೊಂದರೆ ಅನುಭವಿಸುವವರು, ತಲೆ ಸುತ್ತುಬಂದು ಬೀಳುವವರು ಮತ್ತು ಇತರ ಸಮಸ್ಯೆಗಳಿರುವವರಿಗೆ ನೀಡಬೇಕಾದ ಪ್ರಥಮ ಚಿಕಿತ್ಸೆ ನೀಡುವ ವಿಧಾನಗಳ ಬಗ್ಗೆ ತಿಳಿಸಿಕೊಡಲಾಯಿತು
ಫಾರೆಸ್ಟ್ ಗಾರ್ಡ್ಗಳು ಕೆಲವೊಮ್ಮೆ ಒಬ್ಬರೇ ಕಾಡಿನಲ್ಲಿ ಕೆಲಸ ಮಾಡುತ್ತಿರುತ್ತಾರೆ. ಈ ವೇಳೆಯಲ್ಲಿ ದಾರಿ ತಪ್ಪಿದರೆ ಮುಂದೆ ಅನುಸರಿಸಬೇಕಾದ ವಿಧಾನಗಳನ್ನು ವಿವರಿಸಲಾಗಿದೆ. ನೆಟ್ವರ್ಕ್ ಇರುವ ಕಡೆಗಳಲ್ಲಿ ದಾರಿ ತಪ್ಪಿದರೆ ಮೊಬೈಲ್ನಲ್ಲಿ ಲೊಕೇಷನ್ ಹಾಕಿಕೊಂಡು ತಲುಪಬೇಕಾದ ಜಾಗಕ್ಕೆ ಬಂದು ಸೇರಬಹುದು. ಆದರೆ ಕಾಡಿನಲ್ಲಿ ನೆಟ್ವರ್ಕ್ ಇರುವುದಿಲ್ಲ. ಮೊಬೈಲ್ ಬಳಕೆ ಮಾಡಲು ಸಾಧ್ಯವಾಗಲ್ಲ. ಈ ಪರಿಸ್ಥಿತಿ ಎದುರಾಗುವುದನ್ನು ಮೊದಲೇ ಮನಗಂಡು ಸಿಬ್ಬಂದಿ ಬಳಿ ಸದಾ ಸರ್ವೆ ಮ್ಯಾಪ್ ಇಟ್ಟುಕೊಂಡಿರಬೇಕು. ಅದನ್ನು ಅನುಸರಿಸಿ ಹತ್ತಿರದಲ್ಲೇ ಇರುವ ಅರಣ್ಯ ಇಲಾಖೆಯ ಶಿಬಿರ ತಲುಪಬೇಕು ಎಂದು ಹೇಳಿಕೊಟ್ಟರು.

ಗ್ರಾಮೀಣ ಪ್ರದೇಶದ ಜನರಂತೆಯೇ ಅರಣ್ಯ ಇಲಾಖೆಯ ಸಿಬ್ಬಂದಿಯೂ ವನ್ಯಜೀವಿಗಳ ದಾಳಿಗೆ ಒಳಗಾಗುತ್ತಾರೆ. ಬಲಿಯಾದರೆ ಅವರನ್ನು ನಂಬಿರುವ ಕುಟುಂಬಕ್ಕೆ ನಷ್ಟ ಭರಿಸಲು ಸಾಧ್ಯವಿಲ್ಲ. ಹೀಗೆ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವವರಿಗೆ ಬದುಕುಳಿಯುವ ತಂತ್ರಗಳನ್ನು ಕಲಿಯುವು ಅಗತ್ಯತೆ ಮತ್ತು ಅನಿವಾರ್ಯತೆ ಇದೆ. ಈ ಕಾರ್ಯಗಾರ ಅವರಿಗೆ ನೆರವಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications