Get Updates
Get notified of breaking news, exclusive insights, and must-see stories!

ಕಾಡಲ್ಲಿ ಪ್ರಾಣಾಪಾಯ ಉಂಟಾದರೇ ಬಚಾವಾಗುವುದು ಹೇಗೆ? ಅರಣ್ಯ ಇಲಾಖೆ ಸಿಬ್ಬಂದಿಗೆ ತರಬೇತಿ

ಚಾಮರಾಜನಗರ, ಜೂನ್ 26: ಕಾಡಿನಲ್ಲಿ ಅಪಾಯ ಉಂಟಾದರೆ ಬದುಕುಳಿಯುವುದು ಹೇಗೆ, ಅರಣ್ಯದಲ್ಲಿ ದಾರಿ ತಪ್ಪಿದರೇ ಏನು ಮಾಡಬೇಕು, ಪ್ರಥಮ ಚಿಕಿತ್ಸೆ ಕೊಡುವುದು ಹೇಗೆ ಎಂಬುದರ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ತಜ್ಞರು ತರಬೇತಿ ಕೊಡಿಸಲಾಗಿದೆ.

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಪ್ರಾಕೃತಿಕ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಯಲ್ಲಿ ತೊಡಗಿರುವ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಕರ್ತವ್ಯದ ವೇಳೆ ಪ್ರಾಣಾಪಾಯ ಸಂಭವಿಸಿದರೆ ‌ಕಾಡಿನಲ್ಲಿ ಬದುಕುಳಿಯಲು ತಂತ್ರವನ್ನು ಕೆ.ಗುಡಿಯಲ್ಲಿ ತಜ್ಞರ ಮೂಲಕ ಮಾಹಿತಿ ಒದಗಿಸಿಕೊಡಲಾಯಿತು.

ಕೆ.ಗುಡಿ ವಲಯದ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕ್ಷೇತ್ರ ಸಿಬ್ಬಂದಿಗಳಿಗೆ ಸಂಪನ್ಮೂಲ ವ್ಯಕ್ತಿ ವಿನಯ್ ಶಿರ್ಸಿ ವಿಶೇಷ ತರಬೇತಿ ನೀಡಿದ್ದಾರೆ. ಕಳ್ಳಬೇಟೆ ಶಿಬಿರ, ಫಾರೆಸ್ಟ್ ಗಾರ್ಡ್‌ಗಳು, ಡಿಆರ್‌ಎಫ್‌ಒಗಳು ಮತ್ತು ಇತರರಿಗೆ ತಂತ್ರಗಾರಿಕೆಯ ಪಾಠ ಹೇಳಿಕೊಟ್ಟಿದ್ದಾರೆ. ಭೋಧನೆ, ವಿವರಣೆಯ ಜೊತೆಗೆ ಸಮಸ್ಯೆಗಳಿಗೆ ಹೇಗೆ ಪರಿಹಾರ ಕೊಂಡುಕೊಳ್ಳಬೇಕೆಂದು ಪ್ರಾಯೋಗಿಕ ವಿಧಾನದಲ್ಲೂ ವಿವರಿಸಿದ್ದಾರೆ.

Special Training for Forest Officials to Survive when stuck in Jungle

ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ತನ್ನನ್ನು ತಾನು ಹೇಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕೆಂಬ ತಂತ್ರಗಳನ್ನು ಹೇಳಿಕೊಡಲಾಗಿದೆ. ಅರಣ್ಯಾಕಾರಿಗಳು ಮತ್ತು ಸಿಬ್ಬಂದಿ ಕ್ಷೇತ್ರದಲ್ಲಿದ್ದಾಗ ಕಾಡುಪ್ರಾಣಿಗಳು ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚು. ಇದರಿಂದ ತಪ್ಪಿಸಿಕೊಳ್ಳುವ ಮಾರ್ಗೋಪಾಯಗಳೇನು?, ಒಂದು ವೇಳೆ ಕಾಡು ಪ್ರಾಣಿಗಳ ದಾಳಿಯಿಂದ ಗಾಯಗಳಾದರೆ ಅವರನ್ನು ಹೇಗೆ ರಕ್ಷಣೆ ಮಾಡಬೇಕು. ಬೆಟ್ಟಗುಡ್ಡ ಹತ್ತಿದಾಗ ಉಸಿರಾಟದ ತೊಂದರೆ ಅನುಭವಿಸುವವರು, ತಲೆ ಸುತ್ತುಬಂದು ಬೀಳುವವರು ಮತ್ತು ಇತರ ಸಮಸ್ಯೆಗಳಿರುವವರಿಗೆ ನೀಡಬೇಕಾದ ಪ್ರಥಮ ಚಿಕಿತ್ಸೆ ನೀಡುವ ವಿಧಾನಗಳ ಬಗ್ಗೆ ತಿಳಿಸಿಕೊಡಲಾಯಿತು

ಫಾರೆಸ್ಟ್ ಗಾರ್ಡ್‌ಗಳು ಕೆಲವೊಮ್ಮೆ ಒಬ್ಬರೇ ಕಾಡಿನಲ್ಲಿ ಕೆಲಸ ಮಾಡುತ್ತಿರುತ್ತಾರೆ. ಈ ವೇಳೆಯಲ್ಲಿ ದಾರಿ ತಪ್ಪಿದರೆ ಮುಂದೆ ಅನುಸರಿಸಬೇಕಾದ ವಿಧಾನಗಳನ್ನು ವಿವರಿಸಲಾಗಿದೆ. ನೆಟ್‌ವರ್ಕ್ ಇರುವ ಕಡೆಗಳಲ್ಲಿ ದಾರಿ ತಪ್ಪಿದರೆ ಮೊಬೈಲ್‌ನಲ್ಲಿ ಲೊಕೇಷನ್ ಹಾಕಿಕೊಂಡು ತಲುಪಬೇಕಾದ ಜಾಗಕ್ಕೆ ಬಂದು ಸೇರಬಹುದು. ಆದರೆ ಕಾಡಿನಲ್ಲಿ ನೆಟ್‌ವರ್ಕ್ ಇರುವುದಿಲ್ಲ. ಮೊಬೈಲ್ ಬಳಕೆ ಮಾಡಲು ಸಾಧ್ಯವಾಗಲ್ಲ. ಈ ಪರಿಸ್ಥಿತಿ ಎದುರಾಗುವುದನ್ನು ಮೊದಲೇ ಮನಗಂಡು ಸಿಬ್ಬಂದಿ ಬಳಿ ಸದಾ ಸರ್ವೆ ಮ್ಯಾಪ್ ಇಟ್ಟುಕೊಂಡಿರಬೇಕು. ಅದನ್ನು ಅನುಸರಿಸಿ ಹತ್ತಿರದಲ್ಲೇ ಇರುವ ಅರಣ್ಯ ಇಲಾಖೆಯ ಶಿಬಿರ ತಲುಪಬೇಕು ಎಂದು ಹೇಳಿಕೊಟ್ಟರು.

Special Training for Forest Officials to Survive when stuck in Jungle

ಗ್ರಾಮೀಣ ಪ್ರದೇಶದ ಜನರಂತೆಯೇ ಅರಣ್ಯ ಇಲಾಖೆಯ ಸಿಬ್ಬಂದಿಯೂ ವನ್ಯಜೀವಿಗಳ ದಾಳಿಗೆ ಒಳಗಾಗುತ್ತಾರೆ. ಬಲಿಯಾದರೆ ಅವರನ್ನು ನಂಬಿರುವ ಕುಟುಂಬಕ್ಕೆ ನಷ್ಟ ಭರಿಸಲು ಸಾಧ್ಯವಿಲ್ಲ. ಹೀಗೆ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವವರಿಗೆ ಬದುಕುಳಿಯುವ ತಂತ್ರಗಳನ್ನು ಕಲಿಯುವು ಅಗತ್ಯತೆ ಮತ್ತು ಅನಿವಾರ್ಯತೆ ಇದೆ. ಈ ಕಾರ್ಯಗಾರ ಅವರಿಗೆ ನೆರವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+