ರಾಜ್ಯದಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ: ಶಿಕ್ಷಣ ಸಚಿವ
ಚಾಮರಾಜನಗರ, ಫೆಬ್ರವರಿ 06: ಕರ್ನಾಟಕ ರಾಜ್ಯದಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಈ ವರ್ಷ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಹಾಗೂ ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ.
ನಗರದ ದೀನಬಂಧು ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ಸಂಕೀರ್ಣವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, "ಸರಿ ಸುಮಾರು ಶೇಕಡಾ 99ರಷ್ಟು ಶಾಲೆಗಳು ತೆರೆದಿದ್ದವು. ಮಕ್ಕಳ ಹಾಜರಾತಿಯೂ ಉತ್ತಮವಾಗಿದೆ. ಈ ಹಿನ್ನೆಲೆಯಿಂದಾಗಿ ನಿಗದಿಯಂತೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳು ನಡೆಯಲಿದೆ," ಎಂದು ತಿಳಿಸಿದರು.
"ಪರೀಕ್ಷೆಯ ದಿನವನ್ನು ಒಂದು ದಿನವೂ ಕೂಡಾ ಹೆಚ್ಚು ಕಡಿಮೆ ಮಾಡುವುದಿಲ್ಲ. ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಅನೇಕ ರಾಜ್ಯಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆದರೆ ದೇವದ ದಯೆಯಿಂದ ನಮ್ಮ ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಬಂದಿಲ್ಲ. ಶೇಕಡಾ 99ರಷ್ಟು ಶಾಲೆಗಳು ತೆರೆದಿದ್ದವು," ಎಂದು ವಿವರಿಸಿದ್ದಾರೆ.

ಕಳೆದ ತಿಂಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 28ರಂದು ಪರೀಕ್ಷೆಗಳು ಆರಂಭವಾಗುತ್ತದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ.
ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆ ಆರಂಭದಲ್ಲಿ ನೀಡಲಾಗುತ್ತದೆ. ಅಂಧ, ಕಿವುಡ ಮತ್ತು ಮೂಗ ಹಾಗೂ ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ, ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಸಮಯದ ಜೊತೆಗೆ 1 ಗಂಟೆಯ ಸಮಯವನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ. (ಒನ್ಇಂಡಿಯಾ ಸುದ್ದಿ)
Recommended Video
-
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications