ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೋಷಕರು ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕೊಳ್ಳೇಗಾಲದ ಎಸ್ ಎಸ್ ಎಲ್ಸಿ ವಿದ್ಯಾರ್ಥಿನಿ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಮೇ 20: ಮೊಬೈಲ್‌ ಬಳಸದಂತೆ ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಎಸ್ ಎಸ್ ಎಲ್ಸಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಇಲ್ಲಿಗೆ ಸಮೀಪದ ಕೊಳ್ಳೇಗಾಲದಲ್ಲಿ ಮಂಗಳವಾರ ನಡೆದಿದೆ.

ಪಟ್ಟಣದ ದೇವಾಂಗಪೇಟೆಯ ಚೌಡೇಶ್ವರಿ ಗುಡಿ ಬೀದಿಯ ನಿವಾಸಿ ಲೋಕೇಶ್ ಎಂಬುವರ ಪುತ್ರಿ ದರ್ಶಿನಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

SSLC Student Commits Suicide In Kollegala

 ಚಿತ್ರದುರ್ಗ: ಸೆಲ್ಫೀ ವಿಡಿಯೋ ಮಾಡಿಟ್ಟು ಸರ್ಕಾರಿ ನೌಕರ ಆತ್ಮಹತ್ಯೆ ಚಿತ್ರದುರ್ಗ: ಸೆಲ್ಫೀ ವಿಡಿಯೋ ಮಾಡಿಟ್ಟು ಸರ್ಕಾರಿ ನೌಕರ ಆತ್ಮಹತ್ಯೆ

ಎರಡು ತಿಂಗಳಿನಿಂದ ಆರಾಮಾಗಿದ್ದೀಯ. ಇದೀಗ ಎಸ್ ಎಸ್ ಎಲ್ಸಿ ಪರೀಕ್ಷೆ ದಿನಾಂಕ ನಿಗದಿ ಆಗಿದೆ. ಓದಿಕೊಳ್ಳುವುದನ್ನು ಬಿಟ್ಟು ಬರೀ ಮೊಬೈಲ್ ನಲ್ಲೇ ಆಟವಾಡಿಕೊಂಡಿದ್ದರೆ ಪರೀಕ್ಷೆ ಹೇಗೆ ಪಾಸ್ ಮಾಡುತ್ತೀಯ ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಇಷ್ಟಕ್ಕೇ ಬೇಸರಗೊಂಡ ಈಕೆ ಮನೆಯೊಳಗೆ ಹೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

English summary
SSLC student in kollegala Commits suicide as her parents scolded her not using mobile phone
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X