ಸೋರುತ್ತಿರುವ ನೀರಿನ ಟ್ಯಾಂಕ್: ಕಳಪೆ ಕಾಮಗಾರಿಗೆ ಸಾಕ್ಷಿ
ಗುಂಡ್ಲುಪೇಟೆ: ಮೇಲ್ನೋಟಕ್ಕೆ ಅಭಿವೃದ್ಧಿ ಕಾಮಗಾರಿ ನಡೆಸಿದ್ದೇವೆ ಎಂದು ಬಿಂಬಿಸಿ ಅದರಲ್ಲಿ ಒಂದಷ್ಟು ಹಣ ಕೊಳ್ಳೆ ಹೊಡೆದು ಜೇಬು ತುಂಬಿಸಿಕೊಳ್ಳುವವರ ಸಂಖ್ಯೆ ಹೆಚ್ಚಾದ ಕಾರಣ ಅಭಿವೃದ್ಧಿ ಕಾಮಗಾರಿಗಳು ಯಾವುದೂ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ ಎಂಬುದಕ್ಕೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ಇತ್ತೀಚೆಗೆ ನಿರ್ಮಿಸಿದ ನೀರಿನ ಟ್ಯಾಂಕ್ ಸಾಕ್ಷಿಯಾಗಿದೆ.
ಜನರಿಗೆ ನೀರು ಕಲ್ಪಿಸುವ ಉದ್ದೇಶದಿಂದ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ಇತ್ತೀಚೆಗೆ ನಿರ್ಮಿಸಿದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮೊದಲೇ ಸೋರುತ್ತಿದ್ದು, ಸಮೀಪದ ಗೇಟ್ ವಾಲ್ವ್ ಚೇಂಬರ್ ಒಡೆದುಹೋಗಿರುವುದು ಕಳಪೆ ಕಾಮಗಾರಿಗೆ ನಿದರ್ಶನವಾಗಿದೆ.

ಸುಮಾರು 13 ಲಕ್ಷ ರೂಪಾಯಿ ವೆಚ್ಚದಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ಗೆ ನೀರು ತುಂಬಿಸಲಾಗುತ್ತಿದ್ದು, ಟ್ಯಾಂಕ್ನಲ್ಲಿ ನೀರು ಸಂಗ್ರಹವಾಗದೆ ಸೋರುತ್ತಿದೆ. ಅಲ್ಲದೆ ಮಳೆಗೆ ಸಮೀಪದಲ್ಲಿ ನಿರ್ಮಿಸಿದ್ದ ಗೇಟ್ ವಾಲ್ವ್ ನ ಸುತ್ತುಗೋಡೆ ಬಿರುಕುಬಿಟ್ಟಿದೆ.

ನಿರ್ಮಾಣ ಸಂದರ್ಭದಲ್ಲಿ ಗುಣಮಟ್ಟ ನಿರ್ವಹಣೆ ಮಾಡದೆ ಮಣ್ಣಿನ ಮೇಲೆಯೇ ಗೋಡೆ ಕಟ್ಟಿದ್ದರಿಂದ ಮಳೆ ನೀರಿನ ತೇವಾಂಶಕ್ಕೆ ಗೋಡೆ ಕುಸಿದಿದೆ. ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಕೆ ಮಾಡಿದ್ದರಿಂದ ಬಳಕೆಗೂ ಮೊದಲೇ ಬಿರುಕುಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಸಂಪೂರ್ಣ ನೀರು ತುಂಬಿದ ನಂತರ ಟ್ಯಾಂಕ್ ಕುಸಿದು ಬಿದ್ದರೆ ಅನಾಹುತವಾಗಲಿರುವುದರಿಂದ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications