ಚಾಮರಾಜನಗರ: ಇದ್ದಕ್ಕಿದ್ದಂತೆ ಕಾಡುಹಂದಿಗಳ ಸಾವು, ಕಾಡಂಚಿನ ರೈತರಲ್ಲಿ ಆತಂಕ
ಚಾಮರಾಜನಗರ , ಡಿ.11: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಗೋಪಾಲಸ್ವಾಮಿ ಬೆಟ್ಟ ವಲಯ ಮೇಲುಕಾಮನಹಳ್ಳಿ ಗ್ರಾಮದ ಸುತ್ತಮುತ್ತ 50 ಕ್ಕೂ ಹೆಚ್ಚಿನ ಕಾಡು ಹಂದಿಗಳು ಮೃತಪಟ್ಟಿವೆ. ನಿತ್ಯವೂ ಕಾಡುಹಂದಿಗಳ ಸಾವು ಮರುಕಳಿಸುತ್ತಿರುವುದರಿಂದ ಅಲ್ಲಿನ ಗಿರಿಜನರು ಹಾಗೂ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹಾಗೂ ಗಿರಿಜನ ಕಾಲೋನಿಯ ಮನೆ ಮತ್ತು ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಪ್ರತಿನಿತ್ಯ ಹಂದಿಗಳು ಇರುತ್ತಿದ್ದವು. ಇದ್ದಕ್ಕಿದ್ದಂತೆ ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಮೂರ್ನಾಲ್ಕು ಹಂದಿಗಳ ಅಲ್ಲಲ್ಲಿ ಸತ್ತು ಬೀಳುತ್ತಿವೆ. ಕೆಲವೊಮ್ಮೆ ಹಂದಿಗಳ ಸಾವು ತಕ್ಷಣವೇ ಸಾರ್ವಜನಿಕರಿಗೆ ತಿಳಿದು ಬಂದಿವೆ. ಮತ್ತೆ ಹಲವು ಕೊಳೆತು ವಾಸನೆ ಬಂದ ಮೇಲೆ ಹಂದಿಗಳು ಸತ್ತಿದೆ ಎಂಬುದು ತಿಳಿಯುತ್ತಿದೆ.

ಹಂದಿಗಳು ಕಾಯಿಲೆಯಿಂದ ಸಾವನ್ನಪ್ಪುತ್ತಿವೆ ಎಂಬ ಅನುಮಾನ ಶುರುವಾಗಿದ್ದು, ಈ ಕಾಯಿಲೇ ಜನ ಮತ್ತು ಜಾನುವಾರುಗಳಿಗೆ ತಗುಲುತ್ತದೆ ಎಂಬ ಭಯ ಸ್ಥಳೀಯರಲ್ಲಿ ಆವರಿಸಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಂದಿಗಳು ಸಾಯುತ್ತಿದೆ. ಈ ಭಾಗದಲ್ಲಿ ವಿಷ ಪ್ರಾಷನವಾಗಲಿ, ಬೇಟೆಯಾಡುವವರು ಬಳಸುವ ನಾಡಮದ್ದಾಗಲಿ ತಿಂದು ಮೃತಪಟ್ಟಿವೆ ಎಂದಯ ಮೇಲ್ನೋಟಕ್ಕೆ ಕಣಿಸಿಲ್ಲ. ಇದು ಇತರೆ ವನ್ಯಜೀವಿಗಳಿಗೆ ಏನಾದರೂ ತೊಂದರೆಯಾಗಲಿದೆಯೇ ಎಂಬ ಚಿಂತೆಯಲ್ಲಿ ಅರಣ್ಯ ಇಲಾಖೆಯಿದೆ.

ಪಶುವೈದ್ಯರು ಹಾಗೂ ಸಿಬ್ಬಂದಿಗಳು ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿ ಮೃತ ಹಂದಿಯನ್ನು ಮರಣೋತ್ತರ ಪರೀಕ್ಷೆ ನಡೆಸಿ ಅದರ ಅಂಗಾಂಗಗಳನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಕಾಲುಬಾಯಿ ಜ್ವರ ಬಂದರೆ ಮೊದಲು ಜಾನುವಾರುಗಳಿಗೆ ಕಾಣಿಸಿಕೊಳ್ಳುತ್ತದೆ. ಬಳಿಕ ಹಂದಿಗಳಿಗೆ ಬರುತ್ತದೆ. ಹಂದಿಗಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿರುವುದರಿಂದ ಈ ರೋಗಗಳಿಂದ ಮೃತ ಪಟ್ಟಿರಲು ಸಾಧ್ಯವಿಲ್ಲ, ಪ್ರಯೋಗಾಲಯದ ವರದಿ ಬಂದ ಬಳಿಕ ನಿಜಾಂಶ ತಿಳಿಯಲಿದೆ ಎಂದು ಬಂಡೀಪುರ ಸಿಎಫ್ಒ ರಮೇಶ್ ಕುಮಾರ್ ತಿಳಿಸಿದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications