ಚಾಮರಾಜನಗರ: ರೈತ ಸಂಘಟನೆ ವಿರುದ್ಧ ಕನ್ನಡಪರ ಹೋರಾಟಗಾರರ ದಿಢೀರ್ ಪ್ರತಿಭಟನೆ-ಕಾರಣ ಏನು?

ಚಾಮರಾಜನಗರ, ಜುಲೈ, 13: ಹೋರಾಟದ ವಿರುದ್ಧ ಹೋರಾಟ ಎಂಬಂತೆ ರೈತ ಸಂಘಟನೆ(ಡಾ.ಗುರುಪ್ರಸಾದ್ ಬಣ)ದ ವಿರುದ್ಧ ಕನ್ನಡಪರ ಹೋರಾಟಗಾರರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರದ ಜಿಲ್ಲಾಡಳಿತ ಭವನ ಮುಂಭಾಗ ನಡೆಯಿತು.

ಶನಿವಾರ ಸಂಜೆ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಕೆಂಪೇಗೌಡರ ಜಯಂತಿ ನಡೆಯಲಿದ್ದು, ಇದಕ್ಕೆ ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಬರುತ್ತಿದ್ದಾರೆ.

Sudden protest by pro-Kannada activists against farmers organization in Chamarajangar

ವಿಚಾರ ತಿಳಿದ ರೈತರು, ಸಿಎಂ ಕಾರ್ಯಕ್ರಮದಲ್ಲಿ ಕೊಟ್ಟ ಮನವಿ ಪತ್ರಗಳನ್ನು ಬಿಸಾಡಿ ಹೋಗಿದ್ದರ ಸಂಬಂಧ ಸ್ಪಷ್ಟನೆ ಕೇಳಲು ಜಿಲ್ಲಾಡಳಿತ ಭವನ ಮುಂಭಾಗ ಕುಳಿತಾಗ ಕನ್ನಡಪರ ಹೋರಾಟಗಾರರು ರೈತ ಸಂಘಟನೆ ವರ್ತನೆ ವಿರುದ್ಧ ಪ್ರತಿಭಟನೆ ನಡೆಸಿದರು.

ಕೆಂಪೇಗೌಡರ ಜಯಂತಿ ಸುಸೂತ್ರವಾಗಿ ನಡೆಯಲು ಬಿಡದೇ ಘೆರಾವ್ ಹಾಕಲು ಬಂದಿದ್ದಾರೆ ಎಂದು ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ, ಪೊಲೀಸರು ಎರಡು ಗುಂಪುಗಳನ್ನು ಸಮಾಧಾನ ಪಡಿಸಿದರು.

ಸಚಿವ ವೆಂಕಟೇಶ್ ಸ್ಪಷ್ಣನೆ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಟ್ಟ ಮನವಿ ಪತ್ರಗಳು ಕಸದರಾಶಿಯಲ್ಲಿ ಪತ್ತೆ ಆದ ಬಗ್ಗೆ ರೈತ ಮುಖಂಡ ಡಾ.ಗುರುಪ್ರಸಾದ್ ಸಚಿವ ಕೆ.ವೆಂಕಟೇಶ್ ಬಳಿ ಸ್ಪಷ್ಟನೆ ಕೇಳಿದರು. ಸಿಎಂ ಮರೆತು ಹೋಗಿರಬಹುದು, ಆದರೆ ಕಸದ ಬುಟ್ಟಿಗೆ ಎಸೆದಿರುವುದಿಲ್ಲ ಎಂದು ರೈತರಿಗೆ ಸಚಿವ ಕೆ.ವೆಂಕಟೇಶ್ ಸಮಾಜಾಯಿಷಿ ನೀಡಲು ಹೆಣಗಾಡಿದರು.

ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿ ಎಂಬ ಉದ್ದೇಶದಿಂದ ಮನವಿ ಪತ್ರ ಕೊಡುತ್ತಾರೆ. ಅಂತಹದರಲ್ಲಿ ಬಿಸಾಡಿ ಹೋದರೇ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲಾವಾ? ಎಂದು ಸಚಿವರನ್ನು ಪ್ರಶ್ನಿಸುವ ಮೂಲಕ ರೈತರು ತರಾಟೆಗೆ ತೆಗೆದುಕೊಂಡರು. ಸಿದ್ದರಾಮಯ್ಯ ರೈತರ ಕ್ಷಮೆ ಕೇಳಬೇಕು. ಸಂಬಂಧಪಟ್ಟ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿ ಮನವಿ ಕಸದರಾಶಿಯಲ್ಲಿ ಸಿಕ್ಕಿದ್ದ ಮನವಿ ಪತ್ರದ ಜೆರಾಕ್ಸ್ ಪ್ರತಿಯನ್ನು ಸಚಿವರಿಗೆ ನೀಡಿದರು.

ನ್ಯಾಯ ಕೊಡಿ..‌ ಇಲ್ಲಾ ದಯಾ ಮರಣ ಕೊಡಿ: ಕೊರೊನಾ ಕಾಲದಲ್ಲಿ ಆಕ್ಸಿಜನ್ ದುರಂತ ನಡೆದು ಕುಟುಂಬದ ಆಧಾರಸ್ತಂಭ ಕಳೆದುಕೊಂಡ ಸಂತ್ರಸ್ತರು ನ್ಯಾಯ ಸಿಗದಿದ್ದಕ್ಕೆ ತಮಗೆ ದಯಾ ಮರಣ ಕೊಡಿ ಎಂದು ಕಣ್ಣೀರು ಇಟ್ಟಿದ್ದಾರೆ.

ಚಾಮರಾಜನಗರದಲ್ಲಿ ಸಂತ್ರಸ್ತ ಮಹಿಳೆಯರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಳಲು ತೋಡಿಕೊಂಡಿದ್ದು, ಈ ವೇಳೆ ಉಮ್ಮಳಿಸಿ ಬಂದ ದುಃಖ‌ ತಾಳಲಾರದೇ ಕಣ್ಣೀರಿಟ್ಟರು.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ 3 ವರ್ಷದ ಹಿಂದೆ ನಡೆದ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಇನ್ನೂ ಕೂಡ ಸರಿಯಾದ ನ್ಯಾಯ ಸಿಗದೇ, ಪರಿಹಾರ ಸಿಗದೇ ಅಲೆದಾಡುತ್ತಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೌಕರಿಗೂ ಈಗ ಕುತ್ತು ಬಂದಿದೆ.

ತಾಲೂಕು ಕಚೇರಿ, ಸ್ಥಳೀಯ ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರನ್ನು ಏಕಾಏಕಿ ಸಿಮ್ಸ್‌ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿ ಎಂದು ಸೂಚಿಸಿದ್ದು, ತಮ್ಮವರನ್ನು ಕಳೆದುಕೊಂಡ ಆಸ್ಪತ್ರೆಯಲ್ಲಿ ತಾವು ಕೆಲಸ ಮಾಡುವುದಿಲ್ಲ. ಬೇರೆ ಕಡೆ ತಮಗೆ ಖಾಯಂ ಉದ್ಯೋಗ ಕೊಡಿ ಎಂದು ಸಂತ್ರಸ್ತರು ಮನವಿ ಮಾಡಿಕೊಂಡಿದ್ದಾರೆ.

ಆಕ್ಸಿಜನ್ ದುರಂತಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನಮ್ಮ ಕುಟುಂಬಗಳಿಗೆ ನ್ಯಾಯ ಕೊಡಿಸಬೇಕು. ಇದು ಸಾಧ್ಯವಿಲ್ಲ ಎಂದಾದರೇ ತಮಗೆ ದಯಾ ಮರಣ ಕೊಡಿ ಎಂದು ಸಂತ್ರಸ್ತ ಮಹಿಳೆಯರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಸಂತ್ರಸ್ತ ಕುಟುಂಬಗಳನ್ನು ರಾಹುಲ್ ಗಾಂಧಿ ಭೇಟಿ ಮಾಡಿ ಖಾಯಂ ಉದ್ಯೋಗದ ಭರವಸೆ ಕೊಟ್ಟಿದ್ದರು. ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ, ಸರ್ಕಾರ ಬಂದು ಒಂದು ವರ್ಷವಾದರೂ ಯಾವುದೂ ಈಡೇರಿಲ್ಲ ಎಂದು ಸಂತ್ರಸ್ತ ಕಣ್ಣೀರು ಹಾಕಿದರು.

ನೆಪ ಮಾತ್ರಕ್ಕೆ 9 ಮಂದಿಗೆ ಗ್ರೂಪ್ ಡಿ ಹೊರ ಗುತ್ತಿಗೆ ಆದಾರದ ಮೇಲೆ ಕೆಲಸ ನೀಡಲಾಗಿತ್ತು. ಆದರೆ ಈಗ ಅದು ಕೂಡ ಇಲ್ಲದಂತಾಗಿದೆ. ಅತ್ತ ಕೂಲಿ ಕೆಲಸಕ್ಕೂ ಹೋಗಲಾಗದೆ, ಇತ್ತ ಹೊರ ಗುತ್ತಿಗೆ ಕೆಲಸವನ್ನು ಮಾಡಲಾಗದೆ, ತಾವು ಅತಂತ್ರರಾಗಿದ್ದೇವೆ ಎಂದು ಸಂತ್ರಸ್ತೆಯರು ಪರಿತಪಿಸಿದ್ದಾರೆ. ಇನ್ನಾದರೂ ಸರ್ಕಾರ ಇವರಿಗೆ ನ್ಯಾಯ ಕೊಡುವುದೇ ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+