ಸುಳ್ವಾಡಿ ವಿಷಪ್ರಸಾದ ಪ್ರಕರಣ: ವಿಚಾರಣೆ ಮುಂದೂಡಿಕೆ
ಚಾಮರಾಜನಗರ, ಜೂನ್ 06: ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆಯನ್ನು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೂ.25ಕ್ಕೆ ಮುಂದೂಡಿದೆ.
ಇಮ್ಮಡಿ ಮಹದೇವಸ್ವಾಮಿಗೆ ಖಾತೆ ಮಾಡಿಕೊಟ್ಟವರ ಅಮಾನತು
ಪ್ರಕರಣದ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ಅವರನ್ನು ಪೊಲೀಸರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಿ. ಬಸವರಾಜ ಅವರ ಮುಂದೆ ಹಾಜರುಪಡಿಸಲಾಯಿತು. ಈ ಬಾರಿಯೂ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ನ್ಯಾಯಾಧೀಶರು, ನೀವು ಬೇಗ ವಕೀಲರನ್ನು ನೇಮಕ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸರಕಾರಿ ವಕೀಲರನ್ನು ನೇಮಿಸಲಾಗುವುದು ಎಂದು ಹೇಳಿದರಲ್ಲದೇ ವಿಚಾರಣೆಯನ್ನು ಮುಂದೂಡಿದರು.
ಜೈಲಿನಲ್ಲಿದ್ದೇ ಜಮೀನು ಖಾತೆ ಮಾಡಿಸಿಕೊಂಡ ಇಮ್ಮಡಿ ಮಹದೇವಸ್ವಾಮಿ
ಸುಳವಾಡಿಯಲ್ಲಿ ಕಳೆದ ಡಿ.14ರಂದು ವಿಷ ಪ್ರಸಾದ ದುರ್ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಡಿ.19ರಂದು ಬಂಧಿತರಾಗಿರುವ ನಾಲ್ವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.