ಇಮ್ಮಡಿ ಮಹದೇವಸ್ವಾಮಿಗೆ ಖಾತೆ ಮಾಡಿಕೊಟ್ಟವರ ಅಮಾನತು
ಚಾಮರಾಜನಗರ, ಜೂನ್ 1: ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿರುವ ಇಮ್ಮಡಿ ಮಹದೇವಸ್ವಾಮಿ ಹೆಸರಿಗೆ ಜಾಗದ ಖಾತೆ ಮಾಡಿಕೊಟ್ಟಿದ್ದ ಕಂದಾಯ ಇಲಾಖೆಯ ಮೂವರು ನೌಕರರನ್ನು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಹೆಸರಿಗೆ ಅಕ್ರಮವಾಗಿ ಆಸ್ತಿ ವರ್ಗಾವಣೆಯಾಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಅಲ್ಲದೆ ಜೈಲಿನಲ್ಲಿದ್ದುಕೊಂಡೇ ಆತ ಹೇಗೆ ಜಾಗದ ಖಾತೆಯನ್ನು ಮಾಡಿಕೊಂಡ ಎಂಬ ಬಗ್ಗೆಯೂ ಚರ್ಚೆಗಳು ನಡೆದಿದ್ದವು.
ಈ ಕುರಿತಂತೆ ತನಿಖೆ ನಡೆಸಿದಾಗ ಕಂದಾಯ ಇಲಾಖೆ ನೌಕರರ ಪಾತ್ರ ಇರುವುದು ಸಾಬೀತಾಗಿರುವುದರಿಂದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಕೊಳ್ಳೇಗಾಲ ತಾಲ್ಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಂದಾಯ ನಿರೀಕ್ಷಕ ನಿರಂಜನ್, ಗ್ರಾಮಲೆಕ್ಕಿಗರಾದ ಸತೀಶ್ ಹಾಗೂ ಹೇಮಾ ಎಂಬ ಮೂವರು ನೌಕರರನ್ನು ಅಮಾನತು ಮಾಡಿದ್ದಾರೆ.

ಮಹದೇಶ್ವರ ಬೆಟ್ಟದ ಸಾಲೂರು ಮಠಕ್ಕೆ ಸೇರಿದ ಜಮೀನು, ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಹೆಸರಿಗೆ ವರ್ಗಾವಣೆಯಾಗಿತ್ತು. ಇದು ಮೇ 5ರಂದು ಬೆಳಕಿಗೆ ಬಂದಿತ್ತಲ್ಲದೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಈ ಅಕ್ರಮಕ್ಕೆ ಕಾರಣಕರ್ತರು ಯಾರು ಎಂಬುದು ಸಾಬೀತಾಗಿರುವ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಆರೋಪಿ ಇಮ್ಮಡಿ ಮಹದೇವ ಸ್ವಾಮಿ ಸೇರಿದಂತೆ ನಾಲ್ವರು ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯವನ್ನು ತಮ್ಮ ವಶಕ್ಕೆ ಪಡೆಯುವ ಸಲುವಾಗಿ ಪ್ರಸಾದದಲ್ಲಿ ವಿಷಬೆರೆಸಿ ಸಾವು ನೋವಿಗೆ ಕಾರಣರಾಗಿದ್ದರು. ಈ ಸಂಬಂಧ ಇವರು ಜೈಲು ಪಾಲಾಗಿದ್ದು, ಇನ್ನೂ ಜಾಮೀನು ಸಿಕ್ಕಿಲ್ಲ. ಹೀಗಿರುವಾಗಲೇ ಮಹದೇವಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಠದ ಜಮೀನನ್ನು ತನ್ನ ಹೆಸರಿಗೆ ಮಾಡಿಸಿಕೊಳ್ಳುವ ಮೂಲಕ ತನ್ನ ಕರಾಮತ್ತು ತೋರಿಸಿದ್ದನು. ಇದೀಗ ಈತನೊಂದಿಗೆ ಶಾಮೀಲಾಗಿರುವ ಕಂದಾಯ ಇಲಾಖೆ ಮೂವರು ನೌಕರರು ಅಮಾನತಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications