ಇಮ್ಮಡಿ ಮಹದೇವಸ್ವಾಮಿಗೆ ಖಾತೆ ಮಾಡಿಕೊಟ್ಟವರ ಅಮಾನತು
ಚಾಮರಾಜನಗರ, ಜೂನ್ 1: ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿರುವ ಇಮ್ಮಡಿ ಮಹದೇವಸ್ವಾಮಿ ಹೆಸರಿಗೆ ಜಾಗದ ಖಾತೆ ಮಾಡಿಕೊಟ್ಟಿದ್ದ ಕಂದಾಯ ಇಲಾಖೆಯ ಮೂವರು ನೌಕರರನ್ನು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಹೆಸರಿಗೆ ಅಕ್ರಮವಾಗಿ ಆಸ್ತಿ ವರ್ಗಾವಣೆಯಾಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಅಲ್ಲದೆ ಜೈಲಿನಲ್ಲಿದ್ದುಕೊಂಡೇ ಆತ ಹೇಗೆ ಜಾಗದ ಖಾತೆಯನ್ನು ಮಾಡಿಕೊಂಡ ಎಂಬ ಬಗ್ಗೆಯೂ ಚರ್ಚೆಗಳು ನಡೆದಿದ್ದವು.
ಈ ಕುರಿತಂತೆ ತನಿಖೆ ನಡೆಸಿದಾಗ ಕಂದಾಯ ಇಲಾಖೆ ನೌಕರರ ಪಾತ್ರ ಇರುವುದು ಸಾಬೀತಾಗಿರುವುದರಿಂದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಕೊಳ್ಳೇಗಾಲ ತಾಲ್ಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಂದಾಯ ನಿರೀಕ್ಷಕ ನಿರಂಜನ್, ಗ್ರಾಮಲೆಕ್ಕಿಗರಾದ ಸತೀಶ್ ಹಾಗೂ ಹೇಮಾ ಎಂಬ ಮೂವರು ನೌಕರರನ್ನು ಅಮಾನತು ಮಾಡಿದ್ದಾರೆ.

ಮಹದೇಶ್ವರ ಬೆಟ್ಟದ ಸಾಲೂರು ಮಠಕ್ಕೆ ಸೇರಿದ ಜಮೀನು, ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಹೆಸರಿಗೆ ವರ್ಗಾವಣೆಯಾಗಿತ್ತು. ಇದು ಮೇ 5ರಂದು ಬೆಳಕಿಗೆ ಬಂದಿತ್ತಲ್ಲದೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಈ ಅಕ್ರಮಕ್ಕೆ ಕಾರಣಕರ್ತರು ಯಾರು ಎಂಬುದು ಸಾಬೀತಾಗಿರುವ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಆರೋಪಿ ಇಮ್ಮಡಿ ಮಹದೇವ ಸ್ವಾಮಿ ಸೇರಿದಂತೆ ನಾಲ್ವರು ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯವನ್ನು ತಮ್ಮ ವಶಕ್ಕೆ ಪಡೆಯುವ ಸಲುವಾಗಿ ಪ್ರಸಾದದಲ್ಲಿ ವಿಷಬೆರೆಸಿ ಸಾವು ನೋವಿಗೆ ಕಾರಣರಾಗಿದ್ದರು. ಈ ಸಂಬಂಧ ಇವರು ಜೈಲು ಪಾಲಾಗಿದ್ದು, ಇನ್ನೂ ಜಾಮೀನು ಸಿಕ್ಕಿಲ್ಲ. ಹೀಗಿರುವಾಗಲೇ ಮಹದೇವಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಠದ ಜಮೀನನ್ನು ತನ್ನ ಹೆಸರಿಗೆ ಮಾಡಿಸಿಕೊಳ್ಳುವ ಮೂಲಕ ತನ್ನ ಕರಾಮತ್ತು ತೋರಿಸಿದ್ದನು. ಇದೀಗ ಈತನೊಂದಿಗೆ ಶಾಮೀಲಾಗಿರುವ ಕಂದಾಯ ಇಲಾಖೆ ಮೂವರು ನೌಕರರು ಅಮಾನತಾಗಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ










Click it and Unblock the Notifications