ಚಾಮರಾಜನಗರ: ಮೆಂದರೆ ಸೋಲಿಗರಿಗೆ ಪುನರ್ವಸತಿಗಾಗಿ ಸರ್ವೇ ಕಾರ್ಯ
ಚಾಮರಾಜನಗರ, ಮೇ, 27: ಮೆಂದರೆ ಹಾಡಿಯ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಸರ್ವೆ ಕಾರ್ಯ ನಡೆಸಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಂದಾರೆ ಬುಡಕಟ್ಟು ಸೋಲಿಗ ಸಮುದಾಯದ ಒತ್ತಾಯಿಸಿದ್ದರು.
ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಆದೇಶದ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಗ್ರಾಮದಲ್ಲಿ ಇಂದು (ಮೇ 27) ಮನೆ ಮನೆಗೆ ಭೇಟಿ ನೀಡಿ ಸಮಗ್ರ ಮಾಹಿತಿಯೊಂದಿಗೆ ಸಮೀಕ್ಷೆ ನಡೆಸಲು ಸರ್ವೆ ಕಾರ್ಯ ನಡೆಸಿದ್ದಾರೆ.

ಏಪ್ರಿಲ್ 26ರಂದು ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ ಪ್ರಕರಣ ಹಾಗೂ ಮೆಂದರೆ ನಿವಾಸಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆಯಿಂದ ಭಯಭೀತರಾಗಿ ತಮಗೆ ಬೇರೆ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಿಕೊಡಿ ಎಂದು ಒತ್ತಾಯಿಸಿದ್ದರು.
ಸೋಲಿಗರ ಒತ್ತಾಯದ ಮೇರೆಗೆ ಅಧಿಕಾರಿಗಳ ತಂಡ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮನೆ ಮನೆ ಭೇಟಿ ನೀಡಿ ಅವಶ್ಯವಿರುವ ಮಾಹಿತಿ, ವಿಸ್ತೃತವಾದ ವರದಿ ತಯಾರಿಸುತ್ತಿದ್ದಾರೆ.
ಭಯಭೀತರಾಗಿ ಕಾಡಿನಲ್ಲಿ ಅವಿತಿದ್ದ ಜನ: ಮತಗಟ್ಟೆ ಧ್ವಂಸ ಪ್ರಕರಣದಿಂದ ಭಯಭೀತರಾಗಿ ಕಾಡಿನಲ್ಲಿ ಅವಿತಿದ್ದ ಇಂಡಿಗನತ್ತ ಗ್ರಾಮಸ್ಥರಿಗೆ ಜಿಲ್ಲಾಡಳಿತವು ಧೈರ್ಯ ತುಂಬಿ ಮರಳಿ ಗ್ರಾಮಕ್ಕೆ ಕರೆತಂದಿದ್ದಾರೆ.
ಬಂಧನ ಭೀತಿಯಲ್ಲಿದ್ದ ಜನರನ್ನು ಊರಿಗೆ ಮರಳಿ ಕರೆತಂದು ಶಾಂತಿ ಸಭೆ ನಡೆಸಲಾಗಿದೆ. ಕಳೆದ ಏಪ್ರಿಲ್ 26ರ ಲೋಕಸಭಾ ಚುನಾವಣಾ ಮತದಾನ ದಿನದಂದು ಇಂಡಿಗನತ್ತ ಗ್ರಾಮಸ್ಥರು ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮತಗಟ್ಟೆ ದ್ವಂಸ ಮಾಡಿದ್ದರು. ಈ ವೇಳೆ ಚುನಾವಣಾ ಅಧಿಕಾರಿ, ಸಿಬ್ಬಂದಿ ಹಾಗೂ ಮತ ಚಲಾಯಿಸಲು ಆಗಮಿಸಿದ್ದ ಮೆಂದಾರೆ ಗ್ರಾಮದ ಜನರ ಮೇಲೆ ಹಲ್ಲೆ ಮಾಡಿದ್ದರು.
ಬಳಿಕ ಬಂಧನಕ್ಕೆ ಒಳಗಾಗುವ ಭೀತಿಯಿಂದ ಗ್ರಾಮದ ಬಹುಪಾಲು ಮಂದಿ ಗ್ರಾಮ ತೊರೆದಿದ್ದರು. ಇದೀಗ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾರ್ಗದರ್ಶನದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಂಡಿಗನತ್ತ ಗ್ರಾಮಸ್ಥರಿಗೆ ಧೈರ್ಯ ತುಂಬಿ ಊರಿಗೆ ಕರೆತರುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಘಟನೆಗೆ ಕಾರಣವೇನು?: ಮಲೆ ಮಹದೇಶ್ವರ ಗ್ರಾಮ ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ ,ತುಳಿಸಿಕರೆ, ತೇಕಣೆ, ಪಡಸಲನತ್ತ ಈ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸದೆ ಮತದಾರರು ದೂರ ಉಳಿದಿದ್ದರು.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು, ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರ ಉಳಿದಿದ್ದರು. ತಮಗೆ ಮೂಲಸೌಕರ್ಯ ಕೊಡಬೇಕು ಇಲ್ಲದಿದ್ದರೇ ತಾವು ಮತ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ವಿಚಾರ ಅರಿತ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಮತದಾರರನ್ನು ಮನವೊಲಿಸಲು ತೆರಳಿದ್ದರು. ಈ ವೇಳೆ ಕೆಲವರನ್ನು ಮತದಾನಕ್ಕೆ ಮನವೊಲಿಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಧ್ಚಂಸ ಮಾಡಿ, ಇವಿಎಂ ಹೊಡೆದು ಹಾಕಿ, ಕಲ್ಲು ತೂರಿದ್ದಾರೆ. ಈ ವೇಳೆ ಅಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಲ್ಲದೆ, ಮತಗಟ್ಟೆಯ ಬಾಗಿಲು, ಮೇಜು-ಕುರ್ಚಿ, ಇವಿಎಂ ಯಂತ್ರ ಇತರೆ ಪರಿಕರಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚುವ ಯತ್ನ ಮಾಡಿದ್ದಾರೆ. ಇನ್ನು ಈ ಘಟನೆ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಎಸ್ಪಿ ಉದೇಶ್ ಭೇಟಿ ಕೊಟ್ಟಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications