ಚಾಮರಾಜನಗರ: ಮೆಂದರೆ ಸೋಲಿಗರಿಗೆ ಪುನರ್ವಸತಿಗಾಗಿ ಸರ್ವೇ ಕಾರ್ಯ
ಚಾಮರಾಜನಗರ, ಮೇ, 27: ಮೆಂದರೆ ಹಾಡಿಯ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಸರ್ವೆ ಕಾರ್ಯ ನಡೆಸಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಂದಾರೆ ಬುಡಕಟ್ಟು ಸೋಲಿಗ ಸಮುದಾಯದ ಒತ್ತಾಯಿಸಿದ್ದರು.
ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಆದೇಶದ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಗ್ರಾಮದಲ್ಲಿ ಇಂದು (ಮೇ 27) ಮನೆ ಮನೆಗೆ ಭೇಟಿ ನೀಡಿ ಸಮಗ್ರ ಮಾಹಿತಿಯೊಂದಿಗೆ ಸಮೀಕ್ಷೆ ನಡೆಸಲು ಸರ್ವೆ ಕಾರ್ಯ ನಡೆಸಿದ್ದಾರೆ.

ಏಪ್ರಿಲ್ 26ರಂದು ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ ಪ್ರಕರಣ ಹಾಗೂ ಮೆಂದರೆ ನಿವಾಸಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆಯಿಂದ ಭಯಭೀತರಾಗಿ ತಮಗೆ ಬೇರೆ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಿಕೊಡಿ ಎಂದು ಒತ್ತಾಯಿಸಿದ್ದರು.
ಸೋಲಿಗರ ಒತ್ತಾಯದ ಮೇರೆಗೆ ಅಧಿಕಾರಿಗಳ ತಂಡ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮನೆ ಮನೆ ಭೇಟಿ ನೀಡಿ ಅವಶ್ಯವಿರುವ ಮಾಹಿತಿ, ವಿಸ್ತೃತವಾದ ವರದಿ ತಯಾರಿಸುತ್ತಿದ್ದಾರೆ.
ಭಯಭೀತರಾಗಿ ಕಾಡಿನಲ್ಲಿ ಅವಿತಿದ್ದ ಜನ: ಮತಗಟ್ಟೆ ಧ್ವಂಸ ಪ್ರಕರಣದಿಂದ ಭಯಭೀತರಾಗಿ ಕಾಡಿನಲ್ಲಿ ಅವಿತಿದ್ದ ಇಂಡಿಗನತ್ತ ಗ್ರಾಮಸ್ಥರಿಗೆ ಜಿಲ್ಲಾಡಳಿತವು ಧೈರ್ಯ ತುಂಬಿ ಮರಳಿ ಗ್ರಾಮಕ್ಕೆ ಕರೆತಂದಿದ್ದಾರೆ.
ಬಂಧನ ಭೀತಿಯಲ್ಲಿದ್ದ ಜನರನ್ನು ಊರಿಗೆ ಮರಳಿ ಕರೆತಂದು ಶಾಂತಿ ಸಭೆ ನಡೆಸಲಾಗಿದೆ. ಕಳೆದ ಏಪ್ರಿಲ್ 26ರ ಲೋಕಸಭಾ ಚುನಾವಣಾ ಮತದಾನ ದಿನದಂದು ಇಂಡಿಗನತ್ತ ಗ್ರಾಮಸ್ಥರು ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮತಗಟ್ಟೆ ದ್ವಂಸ ಮಾಡಿದ್ದರು. ಈ ವೇಳೆ ಚುನಾವಣಾ ಅಧಿಕಾರಿ, ಸಿಬ್ಬಂದಿ ಹಾಗೂ ಮತ ಚಲಾಯಿಸಲು ಆಗಮಿಸಿದ್ದ ಮೆಂದಾರೆ ಗ್ರಾಮದ ಜನರ ಮೇಲೆ ಹಲ್ಲೆ ಮಾಡಿದ್ದರು.
ಬಳಿಕ ಬಂಧನಕ್ಕೆ ಒಳಗಾಗುವ ಭೀತಿಯಿಂದ ಗ್ರಾಮದ ಬಹುಪಾಲು ಮಂದಿ ಗ್ರಾಮ ತೊರೆದಿದ್ದರು. ಇದೀಗ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾರ್ಗದರ್ಶನದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಂಡಿಗನತ್ತ ಗ್ರಾಮಸ್ಥರಿಗೆ ಧೈರ್ಯ ತುಂಬಿ ಊರಿಗೆ ಕರೆತರುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಘಟನೆಗೆ ಕಾರಣವೇನು?: ಮಲೆ ಮಹದೇಶ್ವರ ಗ್ರಾಮ ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ ,ತುಳಿಸಿಕರೆ, ತೇಕಣೆ, ಪಡಸಲನತ್ತ ಈ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸದೆ ಮತದಾರರು ದೂರ ಉಳಿದಿದ್ದರು.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು, ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರ ಉಳಿದಿದ್ದರು. ತಮಗೆ ಮೂಲಸೌಕರ್ಯ ಕೊಡಬೇಕು ಇಲ್ಲದಿದ್ದರೇ ತಾವು ಮತ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ವಿಚಾರ ಅರಿತ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಮತದಾರರನ್ನು ಮನವೊಲಿಸಲು ತೆರಳಿದ್ದರು. ಈ ವೇಳೆ ಕೆಲವರನ್ನು ಮತದಾನಕ್ಕೆ ಮನವೊಲಿಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಧ್ಚಂಸ ಮಾಡಿ, ಇವಿಎಂ ಹೊಡೆದು ಹಾಕಿ, ಕಲ್ಲು ತೂರಿದ್ದಾರೆ. ಈ ವೇಳೆ ಅಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಲ್ಲದೆ, ಮತಗಟ್ಟೆಯ ಬಾಗಿಲು, ಮೇಜು-ಕುರ್ಚಿ, ಇವಿಎಂ ಯಂತ್ರ ಇತರೆ ಪರಿಕರಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚುವ ಯತ್ನ ಮಾಡಿದ್ದಾರೆ. ಇನ್ನು ಈ ಘಟನೆ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಎಸ್ಪಿ ಉದೇಶ್ ಭೇಟಿ ಕೊಟ್ಟಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications