ತಮಿಳುನಾಡು ಭಕ್ತನಿಂದ ಚಾಮಂಡೇಶ್ವರಿಗೆ ಚಿನ್ನ ಲೇಪಿತ ಕವಚ ಅರ್ಪಣೆ
ಚಾಮರಾಜನಗರ, ಫೆಬ್ರವರಿ 04: ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ತಾಯಿಗೆ ತಮಿಳುನಾಡಿನಲ್ಲಿರುವ ಭಕ್ತರಾದ ಶ್ರೀಕಂಠಸ್ವಾಮಿ ತಮ್ಮ ತಾಯಿ ತಂದೆಯ ಸ್ಮರಣಾರ್ಥ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ಅರ್ಪಿಸಿದ್ದಾರೆ.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆವರಣಲ್ಲಿ ಕವಚಗಳನ್ನು ಇಟ್ಟು ಹೋಮ ಹವನ ಫಲಗಳನ್ನಿಟ್ಟು ಪೂಜೆ ಸಲ್ಲಿಸಿ, ನಂತರ ಚಾಮುಂಡೇಶ್ವರಿ ತಾಯಿಗೆ ಕವಚಗಳನ್ನು ತೊಡಿಸಿ, ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಇದಕ್ಕೂ ಮುನ್ನ ಚಿನ್ನ ಲೇಪಿತ ಕವಚಗಳನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಕಂಠಸ್ವಾಮಿ, ನನ್ನ ತಂದೆ ಹಿಂದೆ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ನಂತರ ನಾವು ತಮಿಳುನಾಡಿಗೆ ಹೋಗಿ ನೆಲೆಸಿದವು. ಭಗವಂತ ನಮಗೆ ಸಕಲವನ್ನು ಕೊಟ್ಟು ಕಾಪಾಡುತ್ತಿದ್ದು, ನಮ್ಮ ತಂದೆ ತಾಯಿಯ ಸ್ಮರಣೆಗಾಗಿ ಈಗಾಗಲೇ ಶ್ರೀ ಚಾಮರಾಜೇಶ್ವರ ಉತ್ಸವ ಮೂರ್ತಿಗೆ ಚಿನ್ನಾಭರಣ ಮಾಡಿಸಿಕೊಟ್ಟಿದ್ದೇವೆ. ಈಗ ಚಾಮುಂಡೇಶ್ವರಿ ತಾಯಿಗೆ ಚಿನ್ನ ಲೇಪಿತ ಕವಚಗಳನ್ನು ಎರಡೂವರೆ ಲಕ್ಷ ವೆಚ್ಚದಲ್ಲಿ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ನೀಡುತ್ತಿದ್ದೇವೆ. ಎಲ್ಲವೂ ಭಗವಂತನ ಇಚ್ಛೆ ಎಂದು ಸಂತಸ ವ್ಯಕ್ತಪಡಿಸಿದರು.
ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅರ್ಚಕ ಡಾ. ನಾಗರಾಜ ದೀಕ್ಷಿತ್ ಮಾತನಾಡಿ, ಇದು ಮಾಘ ಮಾಸ ಈ ಸಂದರ್ಭದಲ್ಲಿ ದೇವಿಯು ತನ್ನ ವಿರಾಟ ರೂಪದಲ್ಲಿ ಭಕ್ತರಿಗೆ ದರ್ಶನ ನೀಡಿ ಆಶೀರ್ವದಿಸುತ್ತಾಳೆ. ಇದು ಸುದಿನ. ಈ ಹಿಂದೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಎಚ್.ವಿ ವಿಶ್ವೇಶ್ವರ ಪಂಡಿತ ಅವರ ಪುತ್ರ ಶ್ರೀಕಂಠಸ್ವಾಮಿ ದೇವರಿಗೆ ವಜ್ರಾಂಗಿ ಆಭರಣ ನೀಡಿದ್ದಾರೆ. ತಾಯಿ ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದರು.

ಇನ್ನು ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಎಚ್.ವಿ ವಿಶ್ವೇಶ್ವರ ಪಂಡಿತ ಅವರು ಕಳೆದ ಕೆಲವು ವರ್ಷಗಳ ಹಿಂದೆ ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಪ್ರದಾನ ಅರ್ಚಕರಾಗಿ ಸೇವೆಸಲ್ಲಿದ್ದರು. ಬಳಿಕ ಅವ ಕುಟುಂಬ ತಮಿಳುನಾಡಿಗೆ ವಲಸೆ ಹೋಗಿದ್ದು, ಇದೀಗ ತಮ್ಮ ಜೀವನಕ್ಕೆ ಸರ್ವವನ್ನೂ ಕೊಟ್ಟ ತಾಯಿಗೆ ಎಚ್.ವಿ ವಿಶ್ವೇಶ್ವರ ಪಂಡಿತ ಅವರ ಪುತ್ರ ಚಿನ್ನ ಲೇಪಿತ ಕವಚ ಅರ್ಪಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಕಂಠಸ್ವಾಮಿ ಹಾಗೂ ಅವರ ಕುಟುಂಬ, ಚಾಮರಾಜನಗರ ತಹಸೀಲ್ದಾರ್ ಗಿರಿಜಾ, ಹಿರಿಯರಾದ ಗಣೇಶ್ ದೀಕ್ಷಿತ್, ಆಗಮಿಕರಾದ ದರ್ಶನ್, ಅನಿಲ್, ಪ್ರದೀಪ್ ಕುಮಾರ್ ದೀಕ್ಷಿತ್, ರಮೇಶ್ ಸೇರಿದಂತೆ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications