ತಮಿಳುನಾಡು ಭಕ್ತನಿಂದ ಚಾಮಂಡೇಶ್ವರಿಗೆ ಚಿನ್ನ ಲೇಪಿತ ಕವಚ ಅರ್ಪಣೆ
ಚಾಮರಾಜನಗರ, ಫೆಬ್ರವರಿ 04: ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ತಾಯಿಗೆ ತಮಿಳುನಾಡಿನಲ್ಲಿರುವ ಭಕ್ತರಾದ ಶ್ರೀಕಂಠಸ್ವಾಮಿ ತಮ್ಮ ತಾಯಿ ತಂದೆಯ ಸ್ಮರಣಾರ್ಥ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ಅರ್ಪಿಸಿದ್ದಾರೆ.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆವರಣಲ್ಲಿ ಕವಚಗಳನ್ನು ಇಟ್ಟು ಹೋಮ ಹವನ ಫಲಗಳನ್ನಿಟ್ಟು ಪೂಜೆ ಸಲ್ಲಿಸಿ, ನಂತರ ಚಾಮುಂಡೇಶ್ವರಿ ತಾಯಿಗೆ ಕವಚಗಳನ್ನು ತೊಡಿಸಿ, ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಇದಕ್ಕೂ ಮುನ್ನ ಚಿನ್ನ ಲೇಪಿತ ಕವಚಗಳನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಕಂಠಸ್ವಾಮಿ, ನನ್ನ ತಂದೆ ಹಿಂದೆ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ನಂತರ ನಾವು ತಮಿಳುನಾಡಿಗೆ ಹೋಗಿ ನೆಲೆಸಿದವು. ಭಗವಂತ ನಮಗೆ ಸಕಲವನ್ನು ಕೊಟ್ಟು ಕಾಪಾಡುತ್ತಿದ್ದು, ನಮ್ಮ ತಂದೆ ತಾಯಿಯ ಸ್ಮರಣೆಗಾಗಿ ಈಗಾಗಲೇ ಶ್ರೀ ಚಾಮರಾಜೇಶ್ವರ ಉತ್ಸವ ಮೂರ್ತಿಗೆ ಚಿನ್ನಾಭರಣ ಮಾಡಿಸಿಕೊಟ್ಟಿದ್ದೇವೆ. ಈಗ ಚಾಮುಂಡೇಶ್ವರಿ ತಾಯಿಗೆ ಚಿನ್ನ ಲೇಪಿತ ಕವಚಗಳನ್ನು ಎರಡೂವರೆ ಲಕ್ಷ ವೆಚ್ಚದಲ್ಲಿ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ನೀಡುತ್ತಿದ್ದೇವೆ. ಎಲ್ಲವೂ ಭಗವಂತನ ಇಚ್ಛೆ ಎಂದು ಸಂತಸ ವ್ಯಕ್ತಪಡಿಸಿದರು.
ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅರ್ಚಕ ಡಾ. ನಾಗರಾಜ ದೀಕ್ಷಿತ್ ಮಾತನಾಡಿ, ಇದು ಮಾಘ ಮಾಸ ಈ ಸಂದರ್ಭದಲ್ಲಿ ದೇವಿಯು ತನ್ನ ವಿರಾಟ ರೂಪದಲ್ಲಿ ಭಕ್ತರಿಗೆ ದರ್ಶನ ನೀಡಿ ಆಶೀರ್ವದಿಸುತ್ತಾಳೆ. ಇದು ಸುದಿನ. ಈ ಹಿಂದೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಎಚ್.ವಿ ವಿಶ್ವೇಶ್ವರ ಪಂಡಿತ ಅವರ ಪುತ್ರ ಶ್ರೀಕಂಠಸ್ವಾಮಿ ದೇವರಿಗೆ ವಜ್ರಾಂಗಿ ಆಭರಣ ನೀಡಿದ್ದಾರೆ. ತಾಯಿ ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದರು.

ಇನ್ನು ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಎಚ್.ವಿ ವಿಶ್ವೇಶ್ವರ ಪಂಡಿತ ಅವರು ಕಳೆದ ಕೆಲವು ವರ್ಷಗಳ ಹಿಂದೆ ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಪ್ರದಾನ ಅರ್ಚಕರಾಗಿ ಸೇವೆಸಲ್ಲಿದ್ದರು. ಬಳಿಕ ಅವ ಕುಟುಂಬ ತಮಿಳುನಾಡಿಗೆ ವಲಸೆ ಹೋಗಿದ್ದು, ಇದೀಗ ತಮ್ಮ ಜೀವನಕ್ಕೆ ಸರ್ವವನ್ನೂ ಕೊಟ್ಟ ತಾಯಿಗೆ ಎಚ್.ವಿ ವಿಶ್ವೇಶ್ವರ ಪಂಡಿತ ಅವರ ಪುತ್ರ ಚಿನ್ನ ಲೇಪಿತ ಕವಚ ಅರ್ಪಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಕಂಠಸ್ವಾಮಿ ಹಾಗೂ ಅವರ ಕುಟುಂಬ, ಚಾಮರಾಜನಗರ ತಹಸೀಲ್ದಾರ್ ಗಿರಿಜಾ, ಹಿರಿಯರಾದ ಗಣೇಶ್ ದೀಕ್ಷಿತ್, ಆಗಮಿಕರಾದ ದರ್ಶನ್, ಅನಿಲ್, ಪ್ರದೀಪ್ ಕುಮಾರ್ ದೀಕ್ಷಿತ್, ರಮೇಶ್ ಸೇರಿದಂತೆ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications