Get Updates
Get notified of breaking news, exclusive insights, and must-see stories!

ತಮಿಳುನಾಡು ಭಕ್ತನಿಂದ ಚಾಮಂಡೇಶ್ವರಿಗೆ ಚಿನ್ನ ಲೇಪಿತ ಕವಚ ಅರ್ಪಣೆ

ಚಾಮರಾಜನಗರ, ಫೆಬ್ರವರಿ 04: ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ತಾಯಿಗೆ ತಮಿಳುನಾಡಿನಲ್ಲಿರುವ ಭಕ್ತರಾದ ಶ್ರೀಕಂಠಸ್ವಾಮಿ ತಮ್ಮ ತಾಯಿ ತಂದೆಯ ಸ್ಮರಣಾರ್ಥ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ಅರ್ಪಿಸಿದ್ದಾರೆ.

ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆವರಣಲ್ಲಿ ಕವಚಗಳನ್ನು ಇಟ್ಟು ಹೋಮ ಹವನ ಫಲಗಳನ್ನಿಟ್ಟು ಪೂಜೆ ಸಲ್ಲಿಸಿ, ನಂತರ ಚಾಮುಂಡೇಶ್ವರಿ ತಾಯಿಗೆ ಕವಚಗಳನ್ನು ತೊಡಿಸಿ, ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಮಾಡಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಇದಕ್ಕೂ ಮುನ್ನ ಚಿನ್ನ ಲೇಪಿತ ಕವಚಗಳನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಮಾಡಲಾಯಿತು.

Tamilnadu Devotee Offers Gold-Plated Armor to Chamarajanagar Chamundeshwari

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಕಂಠಸ್ವಾಮಿ, ನನ್ನ ತಂದೆ ಹಿಂದೆ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ನಂತರ ನಾವು ತಮಿಳುನಾಡಿಗೆ ಹೋಗಿ ನೆಲೆಸಿದವು. ಭಗವಂತ ನಮಗೆ ಸಕಲವನ್ನು ಕೊಟ್ಟು ಕಾಪಾಡುತ್ತಿದ್ದು, ನಮ್ಮ ತಂದೆ ತಾಯಿಯ ಸ್ಮರಣೆಗಾಗಿ ಈಗಾಗಲೇ ಶ್ರೀ ಚಾಮರಾಜೇಶ್ವರ ಉತ್ಸವ ಮೂರ್ತಿಗೆ ಚಿನ್ನಾಭರಣ ಮಾಡಿಸಿಕೊಟ್ಟಿದ್ದೇವೆ. ಈಗ ಚಾಮುಂಡೇಶ್ವರಿ ತಾಯಿಗೆ ಚಿನ್ನ ಲೇಪಿತ ಕವಚಗಳನ್ನು ಎರಡೂವರೆ ಲಕ್ಷ ವೆಚ್ಚದಲ್ಲಿ ಚಿನ್ನ ಲೇಪಿತ ಕವಚವನ್ನು ಕೊಡುಗೆಯಾಗಿ ನೀಡುತ್ತಿದ್ದೇವೆ. ಎಲ್ಲವೂ ಭಗವಂತನ ಇಚ್ಛೆ ಎಂದು ಸಂತಸ ವ್ಯಕ್ತಪಡಿಸಿದರು.

ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅರ್ಚಕ ಡಾ. ನಾಗರಾಜ ದೀಕ್ಷಿತ್ ಮಾತನಾಡಿ, ಇದು ಮಾಘ ಮಾಸ ಈ ಸಂದರ್ಭದಲ್ಲಿ ದೇವಿಯು ತನ್ನ ವಿರಾಟ ರೂಪದಲ್ಲಿ ಭಕ್ತರಿಗೆ ದರ್ಶನ ನೀಡಿ ಆಶೀರ್ವದಿಸುತ್ತಾಳೆ. ಇದು ಸುದಿನ. ಈ ಹಿಂದೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಎಚ್.ವಿ ವಿಶ್ವೇಶ್ವರ ಪಂಡಿತ ಅವರ ಪುತ್ರ ಶ್ರೀಕಂಠಸ್ವಾಮಿ ದೇವರಿಗೆ ವಜ್ರಾಂಗಿ ಆಭರಣ ನೀಡಿದ್ದಾರೆ. ತಾಯಿ ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದರು.

Tamilnadu Devotee Offers Gold-Plated Armor to Chamarajanagar Chamundeshwari

ಇನ್ನು ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಎಚ್.ವಿ ವಿಶ್ವೇಶ್ವರ ಪಂಡಿತ ಅವರು ಕಳೆದ ಕೆಲವು ವರ್ಷಗಳ ಹಿಂದೆ ಚಾಮರಾಜನಗರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಪ್ರದಾನ ಅರ್ಚಕರಾಗಿ ಸೇವೆಸಲ್ಲಿದ್ದರು. ಬಳಿಕ ಅವ ಕುಟುಂಬ ತಮಿಳುನಾಡಿಗೆ ವಲಸೆ ಹೋಗಿದ್ದು, ಇದೀಗ ತಮ್ಮ ಜೀವನಕ್ಕೆ ಸರ್ವವನ್ನೂ ಕೊಟ್ಟ ತಾಯಿಗೆ ಎಚ್.ವಿ ವಿಶ್ವೇಶ್ವರ ಪಂಡಿತ ಅವರ ಪುತ್ರ ಚಿನ್ನ ಲೇಪಿತ ಕವಚ ಅರ್ಪಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಕಂಠಸ್ವಾಮಿ ಹಾಗೂ ಅವರ ಕುಟುಂಬ, ಚಾಮರಾಜನಗರ ತಹಸೀಲ್ದಾರ್ ಗಿರಿಜಾ, ಹಿರಿಯರಾದ ಗಣೇಶ್ ದೀಕ್ಷಿತ್, ಆಗಮಿಕರಾದ ದರ್ಶನ್, ಅನಿಲ್, ಪ್ರದೀಪ್ ಕುಮಾರ್ ದೀಕ್ಷಿತ್, ರಮೇಶ್ ಸೇರಿದಂತೆ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+