ಅರಣ್ಯದಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ಡಿಆರ್ ಎಫ್ಒಗಳ ವಿಶೇಷ ತಂಡ ರಚನೆ
ಚಾಮರಾಜನಗರ, ಅಕ್ಟೋಬರ್ 27: ಅರಣ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಮತ್ತು ಕ್ಷಿಪ್ರ ಕಾರ್ಯಾಚರಣೆ ನಡೆಸಲು ಆರು ಉಪ ವಲಯ ಅರಣ್ಯ ಅಧಿಕಾರಿಗಳನ್ನೊಳಗೊಂಡ (ಡಿಆರ್ ಎಫ್ಒ) ತಂಡವನ್ನು ಅರಣ್ಯ ಇಲಾಖೆಯು ರಚಿಸಿದೆ.
ಮೊದಲ ಬಾರಿಗೆ ಚಾಮರಾಜನಗರದ ಪ್ರಾದೇಶಿಕ ವೃತ್ತದಲ್ಲಿ ಇಂತಹ ಒಂದು ತಂಡವನ್ನು ರಚಿಸಲು ಅರಣ್ಯ ಇಲಾಖೆ ಅನುಮತಿ ನೀಡಿದೆ. ಕ್ಷಿಪ್ರ ಕಾರ್ಯ ಪಡೆ ಮಾದರಿಯಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಮನೋಜ್ ಕುಮಾರ್ ಅವರು ತಿಳಿಸಿದರು. ಈಗಾಗಲೇ ಅರಣ್ಯ ಇಲಾಖೆಯು ಕೊಡಗಿನಲ್ಲಿ ಆನೆಗಳನ್ನು ಕಾಡಿಗೆ ಅಟ್ಟಲು, ಕಳ್ಳ ಬೇಟೆ ತಡೆಯಲು ಕ್ಷಿಪ್ರ ಕಾರ್ಯ ಪಡೆಯನ್ನು ರಚಿಸಿದ್ದು, ಅದೇ ಮಾದರಿಯಲ್ಲಿ ಇದು ಕಾರ್ಯ ನಿರ್ವಹಿಸಲಿದೆ.
ಸದ್ಯಕ್ಕೆ ಅದು ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ (ಬಿಆರ್ ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾರ್ಯನಿರ್ವಹಿಸಲಿದ್ದು, 'ಆರು ಡಿಆರ್ ಎಫ್ಒಗಳನ್ನು ಸೇರಿಸಿ ಪ್ರತ್ಯೇಕ ತಂಡವೊಂದನ್ನು ಮಾಡಲಾಗಿದೆ. ಸದ್ಯಕ್ಕೆ ಈ ತಂಡ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೆಲಸ ಮಾಡಲಿದ್ದು, ನಂತರ ಮಲೆ ಮಹದೇಶ್ವರ ವನ್ಯಧಾಮ ಹಾಗೂ ಕಾವೇರಿ ವನ್ಯಧಾಮದವರೂ ಅರಣ್ಯ ಸಂರಕ್ಷಣೆ ಕಾರ್ಯಕ್ಕೆ ತಂಡ ಬಳಸಿಕೊಳ್ಳಬಹುದು' ಎಂದು ಮನೋಜ್ ಕುಮಾರ್ ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ಮೀಸಲು ಪಡೆ ಇರುವಂತೆ, ಈ ತಂಡವೂ ಮೀಸಲು ಕಾರ್ಯಕ್ಕೆ ಸೀಮಿತ. ತುರ್ತು ಪರಿಸ್ಥಿತಿಯಲ್ಲಿ ಆಯಾ ಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ತಂಡ ನೆರವಾಗಲಿದೆ.
'ತುರ್ತು ಸಂದರ್ಭದಲ್ಲಿ ಇಲಾಖೆಯು ಈ ತಂಡದ ನೆರವು ಪಡೆಯಬಹುದು. ಉದಾಹರಣೆಗೆ, ಕಾಳ್ಗಿಚ್ಚು ಉಂಟಾದ ಸಂದರ್ಭದಲ್ಲಿ ಅಥವಾ ಕಳ್ಳಬೇಟೆ ಪ್ರಕರಣಗಳಲ್ಲಿ ತನಿಖೆ ವೇಳೆ... ಹೀಗೆ ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕೆಲಸಕ್ಕೆ ಈ ತಂಡ ನೆರವಾಗಲಿದೆ' ಎಂದು ಮನೋಜ್ ಕುಮಾರ್ ಅವರು ವಿವರಿಸಿದರು.
'ಸದ್ಯಕ್ಕೆ ತಂಡವನ್ನು ಮಾತ್ರ ರಚಿಸಲಾಗಿದೆ. ಇದಕ್ಕೆ ಪ್ರತ್ಯೇಕ ವಾಹನ ಹಾಗೂ ಉಪಕರಣಗಳ ಅಗತ್ಯವಿದೆ. ಅದನ್ನು ಶೀಘ್ರದಲ್ಲಿ ಕೊಡಿಸಲಾಗುವುದು. ಇಲಾಖೆಗೆ ಪತ್ರ ಬರೆದು, ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುತ್ತಿದೆ' ಎಂದು ಅವರು ಮಾಹಿತಿ ನೀಡಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications