ವಿಷಪ್ರಸಾದ ಸೇವನೆ: ಹುಟ್ಟುಹಬ್ಬದಂದೇ ಸಾವನ್ನಪ್ಪಿದ ಬಾಲಕ
ಚಾಮರಾಜನಗರ, ಡಿಸೆಂಬರ್ 16: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗತ್ತಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಮಿಶ್ರಿತ ದೇವರ ಪ್ರಸಾದ ಸೇವಿಸಿ ಸಾವನ್ನಪ್ಪಿದವರನ್ನು ಕುಟುಂಬಸ್ಥರು ಮತ್ತು ಬಂಧುಗಳು ಸ್ವಗ್ರಾಮಗಳಲ್ಲಿ ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಿದರು.
ಬಿದರಹಳ್ಳಿ ಗ್ರಾಮದ ಗೋಪಿಯಮ್ಮ, ಶಾಂತರಾಜ್ ಗಾಡಸ್ಟ್ ನಗರದ ಪ್ರೀತಮ್ ಹಾಗೂ ವಡ್ಡರದೊಡ್ಡಿ ಗ್ರಾಮದ ಶಕ್ತಿವೇಲ್ ರ ಮೃತ ದೇಹವನ್ನು ಗ್ರಾಮದಲ್ಲಿ ಸ್ಮಶಾನ ಇಲ್ಲದ ಕಾರಣ ಬಿದರಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮಾಡಲಾಯಿತು.
ಇನ್ನು ದೂಡ್ಡಾಣೆ ಗ್ರಾಮದ ಅಣ್ಣೆಯಪ್ಪ ಎಂಬುವರು ಶುಕ್ರವಾರ ದೇವಸ್ಥಾನದಲ್ಲಿ ಪೂಜೆ ಪ್ರಸಾದ ಸೇವಿಸಿ ಸ್ವ ಗ್ರಾಮಕ್ಕೆ ಹಿಂದಿರುಗಿ ಹೋಗುತ್ತಿದ್ದಾಗ ಮಾರ್ಗ ಮದ್ಯದಲ್ಲಿ ಅಸ್ವಸ್ಥಗೂಂಡು ಬಿದ್ದಿದ್ದನ್ನು ಕಂಡ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಮಾಡಲಾಯಿತು.

ಹನೂರು ಸಮೀಪದ ತೋಮಿಯರ್ ಪಾಳ್ಯದ ರಾಚ್ಚಯ್ಯ ಕೊಳ್ಳೇಗಾಲದ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದು ಅವರನ್ನು ಶನಿವಾರ ಗ್ರಾಮದ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು. ತುಳಸಿಕೆರೆ ಗ್ರಾಮದ ದೊಡ್ಡ ಮಾದ್ದಯ್ಯನ ಶವವನ್ನು ಗ್ರಾಮದ ರುದ್ರ ಭೂಮಿಯಲ್ಲಿ ಅಂತ್ಯ ಕ್ರಿಯೆ ಮಾಡಲಾಯಿತು. ಅಲ್ಲದೇ ಹಳೇಯೂರಿನ ಗ್ರಾಮದ ಶಿವಕುಮಾರನನ್ನು ಕೂಡ ಗ್ರಾಮದ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲಾಯಿತು.

ಪ್ರಸಾದ ಸೇವಿಸಿ ಮೃತಪಟ್ಟವರ ಪೈಕಿ ಬಿದರಹಳ್ಳಿ ಗ್ರಾಮದಲ್ಲಿ ಸುಮಾರು 4ಕ್ಕಿಂತ ಹೆಚ್ಚು ಜನ ಮೃತಪಟ್ಟ ಹಿನ್ನಲೆಯಲ್ಲಿ ನೀರವಮೌನ ಆವರಿಸಿದೆ. ಜತೆಗೆ ತಮ್ಮವರನ್ನು ಕಳೆದುಕೊಂಡ ಕುಟಂಬದ ಸದಸ್ಯರು ಹಾಗೂ ಸಂಬಂಧಿಕರ ರೋದನ ಮಾತ್ರ ನಿಂತಿಲ್ಲ.

ತುಂಬಾ ನೋವಾಗುವ ವಿಷಯ ಏನೆಂದರೆ ಬಿದರಹಳ್ಳಿ ಶಾಲೆಯ 1ನೇ ತರಗತಿ ವಿದ್ಯಾರ್ಥಿ ಪ್ರೀತಮ್ ಓಂಶಕ್ತಿ ಮಾಲೆಧಾರಿಯಾಗಿದ್ದ ಹಿನ್ನಲೆಯಲ್ಲಿ ತನ್ನ ಕುಟಂಬದವರೊಂದಿಗೆ ಶುಕ್ರವಾರ ಸುಳ್ವಾಡಿಯ ಮಾರಮ್ಮನ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ಪ್ರಸಾದ ಸೇವಿಸಿದ್ದು ಇದರಿಂದ ಅಸ್ವಸ್ಥನಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಹುಟ್ಟುಹಬ್ಬದ ದಿನದಂದೇ ಮೃತಪಟ್ಟಿರುವುದು ಮಾತ್ರ ಹೃದಯ ವಿದ್ರಾವಕವಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications