ಗುಂಡ್ಲುಪೇಟೆ: ಶ್ರೀಗಂಧ ಮಾರಿ ಶ್ರೀಮಂತನಾಗಲು ಯತ್ನಿಸಿದಾತ ಅಂದರ್
ಗುಂಡ್ಲುಪೇಟೆ, ಜುಲೈ 11 : ಶ್ರೀಗಂಧ ಮರವನ್ನು ಕಡಿದು ತುಂಡು ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಸಂದರ್ಭ ದಾಳಿ ಮಾಡಿದ ಚಾಮರಾಜನಗರ ಜಿಲ್ಲಾ ಅರಣ್ಯ ಸಂಚಾರಿ ದಳ ಸಿಬ್ಬಂದಿ ಮಾಲು ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಬನ್ನಿತಾಳಪುರ ಗ್ರಾಮದ ನಿವಾಸಿ ರಂಗಸ್ವಾಮಿ (34) ಬಂಧಿತ ಆರೋಪಿ. ಈತ ಇಂಗಲವಾಡಿ ಗ್ರಾಮದ ಕರಿಯಪ್ಪ ಎಂಬುವರ ಜಮೀನಿನಲ್ಲಿ ಶ್ರೀಗಂಧ ಮರವನ್ನು ಕಡಿದು ಸಾಗಿಸುತ್ತಿದ್ದಾಗ ಅರಣ್ಯ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಕರಿಯಪ್ಪ ಅವರ ಜಮೀನಿನಲ್ಲಿ ಗಂಧಮರ ಇರುವುದನ್ನು ಅರಿತಿದ್ದ ರಂಗಸ್ವಾಮಿ, ಅದನ್ನು ಕಡಿದು ಸಾಗಿಸಲು ಬಹಳ ದಿನಗಳಿಂದ ಹೊಂಚು ಹಾಕಿದ್ದು, ಸಮಯ ಸಾಧಿಸಿ ಮರವನ್ನು ಕಡಿದು ತುಂಡುಗಳನ್ನಾಗಿ ಮಾಡಿ ಅದನ್ನು ಸಾಗಿಸುವ ತಯಾರಿ ನಡೆಸಿದ್ದನು.
ಈ ಬಗ್ಗೆ ಖಚಿತ ಮಾಹಿತಿ ಅರಣ್ಯ ಸಂಚಾರಿ ದಳಕ್ಕೆ ದೊರೆತಿದ್ದರಿಂದ ತಕ್ಷಣ ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿ ರಂಗಸ್ವಾಮಿ ಸುಮಾರು 15 ಕೆಜಿ ಮಾಲು ಸಹಿತ ಸಿಕ್ಕಿ ಬಿದ್ದಿದ್ದಾನೆ.
ಕಾರ್ಯಾಚರಣೆಯಲ್ಲಿ ಆರ್ಎಫ್ಓಗಳಾದ ನವೀನಕುಮಾರ, ಮುಂಕುದ್ ಅರಣ್ಯ ಸಂಚಾರಿ ದಳದ ಮುಖ್ಯಪೇದೆ ರಾಜಶೇಖರ ಇನ್ನಿತರರು ಪಾಲ್ಗೊಂಡಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications