ಗುಂಡ್ಲುಪೇಟೆ: ಅಮ್ಮನ ಮಡಿಲು ಸೇರಲಾಗದೆ ಸಾವನ್ನಪ್ಪಿದ ಮರಿಯಾನೆ!
ಗುಂಡ್ಲುಪೇಟೆ (ಚಾಮರಾಜನಗರ), ಜನವರಿ 3: ಸಾರ್ವಜನಿಕರ ಗದ್ದಲದಿಂದ ತಾಯಿಯಿಂದ ಬೇರ್ಪಟ್ಟಿದ್ದ ಎಂಟು ತಿಂಗಳ ಮರಿಯಾನೆ ಕೊನೆಗೂ ತಾಯಿಯ ಮಡಿಲು ಸೇರಲಾಗದೆ ಸಾವನ್ನಪ್ಪಿದ ಘಟನೆ ಬಂಡೀಪುರದ ಓಂಕಾರ್ ಅರಣ್ಯವಲಯ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ ಎಂಟು ತಿಂಗಳ ಮರಿಯಾನೆ ತನ್ನ ತಾಯಿಯೊಂದಿಗೆ ಬಂಡೀಪುರ ಹುಲಿ ಯೋಜನೆಯ ಓಂಕಾರ್ ವಲಯದಿಂದ ಹೊರಬಂದಿತ್ತು. ತಾಯಿ ಆನೆ ಆಹಾರ ಅರಸಿ ಬಂದಿದ್ದರಿಂದ ಅದರೊಂದಿಗೆ ಈ ಮರಿಯೂ ಬಂದಿತ್ತು. ಕುರುಬರಹುಂಡಿ ಗ್ರಾಮದ ಸಮೀಪಕ್ಕೆ ಬಂದ ವೇಳೆ ಸಾರ್ವಜನಿಕರು ಅವುಗಳನ್ನು ನೋಡಿ ಮತ್ತೆ ಅರಣ್ಯಕ್ಕೆ ಓಡಿಸಿದ್ದಾರೆ. ಈ ವೇಳೆ ಆನೆ ಮತ್ತು ಮರಿಯಾನೆ ಬೇರ್ಪಟ್ಟಿದ್ದವು.

ಅರಣ್ಯದತ್ತ ಓಡಲುತಾಯಿ ಆನೆ ತನ್ನ ಮರಿಯನ್ನು ಕರೆದೊಯ್ಯುವ ಯತ್ನ ಮಾಡಿದೆ. ಆದರೆ ಜನ ಅವುಗಳನ್ನು ಬೆದರಿಸಿದ್ದಾರೆ. ಇದರಿಂದ ಗಾಬರಿಗೊಂಡ ತಾಯಿ ಆನೆ ಅರಣ್ಯದೊಳಕ್ಕೆ ಓಡುವ ವೇಳೆ ಮರಿಯಾನೆ ಬೇರ್ಪಟ್ಟಿದೆ. ಇದರಿಂದ ಮರಿಯಾನೆ ಅಲ್ಲಿಯೇ ಉಳಿದುಕೊಂಡಿತ್ತಲ್ಲದೆ ಹಾಲು ಸಿಗದೆ ನಿತ್ರಾಣಗೊಂಡಿತ್ತು
ವಿಷಯ ತಿಳಿದು ಸ್ಥಳಕ್ಕೆ ಬಂದ ಓಂಕಾರ್ ಅರಣ್ಯ ವಲಯದ ಸಿಬ್ಬಂದಿ ಅದನ್ನು ತಮ್ಮ ಜೀಪಿನಲ್ಲಿ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಚಿಕಿತ್ಸೆ ನೀಡಿ ಮತ್ತೆ ಅದರ ತಾಯಿಯ ಬಳಿಗೆ ಸೇರಿಸಲು ಪ್ರಯತ್ನ ನಡೆಸಿದ್ದಾರೆ.

ಆದರೆ, ಎಲ್ಲಿಯೂ ತಾಯಿ ಆನೆ ಇರುವ ಬಗ್ಗೆ ಸುಳಿವು ಸಿಕ್ಕಿಲ್ಲ. ಮರಿಯಾನೆಗೆ ಜ್ವರ ಜಾಸ್ತಿಯಾಗಿ ಸಾವನ್ನಪ್ಪಿದೆ. ಕೊನೆಗೂ ಸಾರ್ವಜನಿಕರ ಗದ್ದಲಕ್ಕೆ ತಾಯಿಯಿಂದ ಬೇರ್ಪಟ್ಟ ಮರಿಯಾನೆ ಅಮ್ಮನ ಮಡಿಲು ಸೇರಲಾಗಲಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಯತ್ನವೂ ಫಲಕೊಡಲಿಲ್ಲ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications