ಸಾಮರಸ್ಯಕ್ಕೊಂದು ಅರ್ಥ: ಚಾಮರಾಜನಗರದಲ್ಲಿ ಮುಸ್ಲಿಂ ವ್ಯಕ್ತಿಯಿಂದ ಗಣೇಶ ದೇವಸ್ಥಾನ ನಿರ್ಮಾಣ
ಚಾಮರಾಜನಗರ, ಏಪ್ರಿಲ್ 8: ಸಮಾಜದಲ್ಲಿ ಧಾರ್ಮಿಕ ಸೌಹಾರ್ದತೆಯ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿಜಾಬ್, ಹಲಾಲ್, ಅಜಾನ್ ಮತ್ತಿತರ ವಿವಾದಗಳ ನಡುವೆ ಚಾಮರಾಜನಗರ ತಾಲೂಕಿನ ಚಿಕ್ಕಹೊಳೆ ಅಣೆಕಟ್ಟೆ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಸಾಮರಸ್ಯ ಸಂದೇಶ ಸಾರಿದ್ದಾರೆ.
ಜಲಸಂಪನ್ಮೂಲ ಇಲಾಖೆಯ ನಿವೃತ್ತ ನೌಕರ ಪಿ. ರೆಹಮಾನ್ ಎಂಬುವರು ಚಿಕ್ಕಹೊಳೆ ಅಣೆಕಟ್ಟೆ ಬಳಿ ಗಣೇಶನ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ನಿತ್ಯ ಪೂಜೆ ನಡೆಸಲು ಒಬ್ಬ ಅರ್ಚಕರನ್ನೂ ನೇಮಿಸಿದ್ದಾರೆ. ರೆಹಮಾನ್ ಸದ್ಯ ಸುವರ್ಣಾವತಿ ಮತ್ತು ಚಿಕ್ಕಹೊಳೆ ಅಣೆಕಟ್ಟುಗಳಲ್ಲಿ ಗೇಟ್ ಆಪರೇಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅರ್ಚಕನಿಗೆ ಮಾಸಿಕ ಸಂಬಳ ಕೊಡುತ್ತಿದ್ದು, ದೇವಸ್ಥಾನದಲ್ಲಿ ಪ್ರತಿ ಸೋಮವಾರ ಮತ್ತು ಶುಕ್ರವಾರ ವಿಶೇಷ ಪೂಜೆಗಳು ನಡೆಯುತ್ತವೆ ಮತ್ತು ಗ್ರಾಮಸ್ಥರು ಈ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ.

ಪಿ. ರೆಹಮಾನ್ ಅವರು 2018ರಲ್ಲಿ ಜಲಸಂಪನ್ಮೂಲ ಇಲಾಖೆಯಿಂದ ನಿವೃತ್ತರಾಗಿದ್ದರು. ಅವರು ನಿವೃತ್ತರಾಗುವ ಒಂದೆರಡು ತಿಂಗಳ ಮೊದಲು ಚಿಕ್ಕಹೊಳೆ ಅಣೆಕಟ್ಟಿನ ಬಳಿಯ ಉದ್ಯಾನವನದಿಂದ ಗಣೇಶನ ಮೂರ್ತಿಯನ್ನು ಕಳವು ಮಾಡಲಾಗಿದೆ ಎಂದು ಹೇಳಿದರು.
"ಗಣೇಶನ ಮೂರ್ತಿ ಕಳವು ಸುದ್ದಿ ಕೇಳಿ ನನಗೆ ಬೇಸರವಾಗಿತ್ತು. ನಂತರ ಶೀಘ್ರದಲ್ಲೇ ನನಗೆ ಮರುಕಳಿಸುವ ಕನಸುಗಳು ಬಿದ್ದವು, ಅದರಲ್ಲಿ ದೇವರು ನನಗೆ ದೇವಾಲಯವನ್ನು ನಿರ್ಮಿಸಲು ಹೇಳಿದನು. ಹೀಗಾಗಿ ನಾನು ಗಣೇಶನ ದೇವಾಲಯವನ್ನು ನಿರ್ಮಿಸಿದೆ," ಎಂದು ಪಿ. ರೆಹಮಾನ್ ಹೇಳಿದರು.
"ನಾವು ಅಲ್ಲಾನನ್ನು ಪೂಜಿಸುವಂತೆ, ಹಿಂದೂಗಳು ಈಶ್ವರನನ್ನು ಪೂಜಿಸುತ್ತಾರೆ. ರಕ್ತದ ಬಣ್ಣವು ಹಿಂದೂ ಮತ್ತು ಮುಸ್ಲಿಂ ಇಬ್ಬರಿಗೂ ಒಂದೇ ಆಗಿರುತ್ತದೆ. ಎಲ್ಲಾ ದೇವರುಗಳು ಒಂದೇ ಎಂದು ನಾನು ಭಾವಿಸುತ್ತೇನೆ ಮತ್ತು ನಾನು ಬಹಳ ಸಮಯದಿಂದ ಗಣೇಶನನ್ನು ಪೂಜಿಸುತ್ತಿದ್ದೇನೆ. ನನಗೆ ಸಂತೋಷವಾಗಿದೆ," ಎಂದು ಪಿ. ರೆಹಮಾನ್ ಹೇಳಿದ್ದಾರೆ.
Recommended Video
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications