ಬಸ್ ಹತ್ತುವಾಗ ಹುಡುಗಿ ಪಕ್ಕ ನಿಂತಿದ್ದ ವ್ಯಕ್ತಿಗೆ ಮನಬಂದಂತೆ ಥಳಿಸಿದ ಯುವಕರು: ದೂರು ದಾಖಲು
ಚಾಮರಾಜನಗರ, ಜೂನ್ 22: ಹುಡುಗಿ ಪಕ್ಕ ನಿಂತಿದ್ದೀಯಾ ಎಂದು ಆಕ್ರೋಶಗೊಂಡ ಯುವಕರ ದಂಡು ವ್ಯಕ್ತಿಯೊಬ್ಬರ ಬಟ್ಟೆ ಹರಿದು, ಚಪ್ಪಲಿಯಲ್ಲಿ ಹೊಡೆದು ಮನಬಂದಂತೆ ಮಾಡಿ ಹಲ್ಲೆ ನಡೆಸಿರುವ ಘಟನೆ ಗುಂಡ್ಲುಪೇಟೆ ಹಂಗಳ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ನಾಗೇಶ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಹಲ್ಲೆಯ ತೀವ್ರತೆಗೆ ಚಾಮರಾಜನಗರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಹಂಗಳ ಗ್ರಾಮದ ಸಿದ್ದರಾಜು, ನಾಗೇಶ್, ಗೋಪಾಲ ಹಾಗೂ ತೇಜು ಎನ್ನುವವರ ಮೇಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಲ ಗ್ರಾಮದ ನಾಗೇಶ್ ಮತ್ತು ಅವರ ತಾಯಿಗೆ ಹುಷಾರಿಲ್ಲದ ಕಾರಣ ತಾಲೂಕಿನ ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದ ಬಳಿಕ ಮಂಗಲದ ಬಸ್ಗೆ ಹೋಗಲು ಹಂಗಳ ಬಸ್ ನಿಲ್ಲುವ ಸ್ಥಳಕ್ಕೆ ಬಂದು ನಿಂತಿದ್ದಾರೆ. ನಾಗೇಶ್ ಮತ್ತು ಅವರ ತಾಯಿ ಬಸ್ ಹತ್ತಲು ನಿಂತ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನಾಗೇಶ್ ಪಕ್ಕ ನಿಂತಿದ್ದನ್ನು ಕಂಡು ಸಹಿಸಿದ ಯುವಕರು ರೊಚ್ಚಿಗೆದ್ದು ನಾಗೇಶ್ ಅವರ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ನಾಲ್ಕು ಆರೋಪಿಗಳೊಂದಿಗೆ ಇತರರು ನಾಗೇಶ್ ಮೇಲೆ ಹಲ್ಲೆಯ ಜೊತೆಗೆ ಚಪ್ಪಲಿಯಲ್ಲಿ ಹೊಡೆದಿದ್ದು, ಹಲ್ಲೆ ನಡೆಸುವ ವೇಳೆ ಯುವಕರ ಗುಂಪಿನಲ್ಲಿ ಓಬ್ಬಾತ ಬ್ಲೇಡ್ನಿಂದ ಮುಖಕ್ಕೆ ಚುಚ್ಚಲು ಮುಂದಾದಾಗ ನಾಗೇಶ್ ತನ್ನ ಕೈ ಅಡ್ಡ ಹಾಕಿದ್ದಾರೆ. ಈ ವೇಳೆ ಕೈ ಬೆರಳುಗಳಿಗೆ ಗಾಯಗಳಾಗಿವೆ.
ಹಾಡಹಗಲೇ ಯಾವುದೇ ಕಾರಣ ಇಲ್ಲದೇ ವ್ಯಕ್ತಿ ಮೇಲೆ ಯುವಕರು ಮನಬಂದಂತೆ ಹಲ್ಲೆ ಮಾಡಿರುವುದು ಆತಂಕಕಾರಿಯಾಗಿದೆ. ಹೀಗಾಗಿ ಗುಂಡ್ಲುಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಿದ್ದಾರೆ.

ಜಿಂಕೆ ಚರ್ಮ ಸಾಗಾಟ: ಆರೋಪಿಗಳ ಬಂಧನ
ಚಾಮರಾಜನಗರ: ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸಮೀಪ ಬಂಧಿಸಲಾಗಿದೆ. ಮಾದಯ್ಯ(40) ಹಾಗೂ ಮಹದೇವ ನಾಯಕ (51) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಜಿಂಕೆ ಚರ್ಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ ಜಿಂಕೆ ಚರ್ಮ, ಮೊಬೈಲ್, ಹಣ ವಶಪಡಿಸಿಕೊಂಡು ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications