ಪ್ರಾಮಾಣಿಕತೆ ಮೆರೆದ ಹೆಪ್ಸಿಬಾ ರಾಣಿ ಎತ್ತಂಗಡಿ
ಚಾಮರಾಜನಗರ, ಫೆಬ್ರವರಿ 11: ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಮುಂದಾದ ಮಹಿಳಾ ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಅವರನ್ನು ಒಂಬತ್ತು ತಿಂಗಳಲ್ಲೇ ವರ್ಗಾವಣೆ ಮಾಡಲಾಗಿದೆ.
ಚಾಮರಾಜನಗರ ಜಿಲ್ಲಾ ಪಂಚಾಯತ್ ಸಿಇಓ ಆಗಿ ಅಧಿಕಾರ ಸ್ವೀಕರಿಸಿದ್ದ ಹೆಪ್ಸಿಬಾ ರಾಣಿ ಕೊರ್ಲಾಪಟಿ ಅವರನ್ನು 9 ತಿಂಗಳಲ್ಲೇ ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರನ್ನಾಗಿಸಿ ಆದೇಶ ಹೊರಡಿಸಿ ವರ್ಗಾವಣೆ ಮಾಡಲಾಗಿದೆ.[ಕೂಡ್ಲಗಿ ಡಿವೈಎಸ್ಪಿ ಅನುಪಮಾ ಶೆಣೈ ದಿಢೀರ್ ರಾಜೀನಾಮೆ]
ಹೆಪ್ಸಿಬಾ ಅವರು ನರೇಗಾ ಕೆಲಸದ ಬಿಲ್ ಗಳನ್ನು ಕ್ಲಿಯರ್ ಮಾಡಲು ನಿರಾಕರಿಸಿದ್ದರಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ. ಯೋಜನೆಯ ನಿಗದಿತ ಮಟ್ಟದಲ್ಲಿ ಕೆಲಸಗಳನ್ನು ಪೂರೈಸಿರಲಿಲ್ಲ, ಜೊತೆಗೆ ಕೂಲಿ ಕೆಲಸಗಾರರ ಬದಲು ಯಂತ್ರಗಳನ್ನು ಉಪಯೋಗಿಸಿ ಕೆಲಸ ಮಾಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ನರೇಗಾ ಯೋಜನೆಯ ಬಿಲ್ ಗಳನ್ನು ಕ್ಲಿಯರ್ ಮಾಡಲು ನಿರಾಕರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಜಿಲ್ಲಾ ಪಂಚಾಯತ್ ಸಭೆಗಳಿಗೆ ಮಹಿಳಾ ಸದಸ್ಯರ ಬದಲು ಅವರ ಪತಿಯರು ಹಾಜರಾಗುತ್ತಿದ್ದರು. ಇದಕ್ಕೆ ಸಿಇಓ ವಿರೋಧಿಸಿದ್ದಲ್ಲದೇ ಸದಸ್ಯರೇ ಸಭೆಗೆ ಹಾಜರಾಗಬೇಕೆಂದು ಆದೇಶಿಸಿದ್ದರು, ಇದಕ್ಕೆ ಮಹಿಳಾ ಸದಸ್ಯರು ಬಹಿರಂಗವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದರು.
ಗುತ್ತಿಗೆದಾರರು ಹಾಗೂ ರಾಜಕಾರಣಿಗಳು ಪ್ರಾಮಾಣಿಕ ಅಧಿಕಾರಿಯ ಕೈಕೆಳಗೆ ಕೆಲಸ ಮಾಡಲು ಒಪ್ಪದೇ, ತಮ್ಮ ಪ್ರಭಾವ ಬಳಸಿ ಐಎಎಸ್ ಅಧಿಕಾರಿಣಿಯನ್ನು ವರ್ಗಾವಣೆ ಮಾಡಿಸಿದ್ದಾರೆ, ಇನ್ನು ಜನ ಪ್ರತಿನಿಧಿಗಳನ್ನು ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದೇ ಹಪ್ಸಿಬಾ ಅವರ ಎತ್ತಂಗಡಿಗೆ ಕಾರಣ ಎಂದು ಹೇಳಲಾಗುತ್ತಿದೆ.[ಬಳ್ಳಾರಿಯಿಂದ ಭಟ್ಕಳಕ್ಕೆ ಹೊರಟ ಅನುಪಮಾ ಶೆಣೈ]
ಹಪ್ಸಿಬಾ ಅವರ ವರ್ಗಾವಣೆಯಿಂದ ಚಾಮರಾಜನಗರ ಜಲ್ಲೆಯ ಜನತೆಗೆ ಬೇಸರ ವ್ಯಕ್ತಪಡಿಸಿದ್ದು, ಗ್ರಾಮಗಳಲ್ಲಿ ಶೌಚಾಲಯ ನಿರ್ಮಿಸುವುದು ಹಾಗೂ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸುಧಾರಣೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು ಎಂದು ಆಶಾ ಕಾರ್ಯಕರ್ತೆ ಲಕ್ಷ್ಮಿ ಹೇಳುತ್ತಾರೆ, ಇನ್ನು ಎರಡು ತಿಂಗಳಲ್ಲಿ 10 ಸಾವಿರ ಶೌಚಾಲಯ ನಿರ್ಮಿಸಲು ಪಣ ತೊಟ್ಟಿದ್ದರು ಎಂದು ಗ್ರಾಮಸ್ಥರು ಹಪ್ಸಿಬಾ ಅವರ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications