ಅಪಾಯಕ್ಕೆ ಆಹ್ವಾನ ಈ ವಿದ್ಯುತ್ ತಂತಿ!
ಚಾಮರಾಜನಗರ: ಅಪಾಯ ಬಂದ ಮೇಲೆ ನೋಡಿಕೊಳ್ಳೋಣ ಎನ್ನುವ ಜನಪ್ರತಿನಿಧಿಗಳ ಮನಸ್ಥಿತಿಗೆ ಒಂದು ಉತ್ತಮ ಉದಾಹರಣೆ ಈ ವಿದ್ಯುತ್ ತಂತಿ!
ಗುಂಡ್ಲುಪೇಟೆಯ ಬೇಗೂರು ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೆಯ ಗಣೇಶ ಚಿತ್ರಮಂದಿರದ ಮುಂಭಾಗದ ವಿದ್ಯುತ್ ಕಂಬದಲ್ಲಿನ ತಂತಿಗಳು ತುಂಡಾಗಿ ನೆಲಕ್ಕೆ ಬೀಳುವಂತಿದ್ದರೂ ಚೆಸ್ಕಾಂನ ಸಿಬ್ಬಂದಿ ಇತ್ತ ಅಪ್ಪಿ ತಪ್ಪಿಯೂ ಕಣ್ಣು ಹಾಯಿಸಿಲ್ಲ!

ಇದು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದ್ದರೂ ಚೆಸ್ಕಾಂ ಸಿಬ್ಬಂದಿಗಳ ಕಣ್ಣಿಗೆ ಬೀಳದಿರುವುದು ಅಚ್ಚರಿಯೇ ಸರಿ. ಈಗಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅನಾಹುತ ಸಂಭವಿಸಿರುವ ಘಟನೆಗಳು ಹಲವೆಡೆ ನಡೆದಿವೆ. ಅಲ್ಲದೆ ನಾವು ಹಲವು ಬಾರಿ ಚೆಸ್ಕಾಂ ಗೆ ದೂರು ನೀಡಿದ್ದರೂ ಚೆಸ್ಕಾಂ ಏಕೆ ಮೌನಕ್ಕೆ ಶರಣಾಗಿದೆ ಎಂಬುದು ಸ್ಥಳೀಯರ ಪ್ರಶ್ನೆ.
ತುಂಡಾಗುವಂತೆ ಇರುವ ವಿದ್ಯುತ್ ತಂತಿ ಹಾದುಹೋಗಿರುವ ಕಂಬದ ಬಳಿ ಬಸ್ ನಿಲ್ದಾಣವಿದ್ದರೆ, ಪಕ್ಕದಲ್ಲೇ ಟ್ಯಾಕ್ಸಿ ನಿಲ್ದಾಣವಿದೆ. ಇಲ್ಲಿ ಹಲವು ವಾಹನಗಳು ನಿಂತಿರುತ್ತವೆ. ಅಷ್ಟೇ ಅಲ್ಲ ಜನರು ಕೂಡ ಈ ತಂತಿ ಹಾದುಹೋಗಿರುವ ಸ್ಥಳದಲ್ಲೇ ನಡೆದಾಡುತ್ತಿರುತ್ತಾರೆ.
ಅಕಸ್ಮಾತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದರೆ ಆಗುವ ಪ್ರಾಣಹಾನಿ, ಅಗ್ನಿಅನಾಹುತಗಳಿಗೆ ಚೆಸ್ಕಾಂ ಹೊಣೆಯಾಗುತ್ತಾ ಎಂಬ ಪ್ರಶ್ನೆಯನ್ನು ಜನ ಮುಂದಿಡುತ್ತಿದ್ದಾರೆ. ಇನ್ನಾದರೂ ಚೆಸ್ಕಾಂನ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ, ವಿದ್ಯುತ್ ತಂತಿಯನ್ನು ಶೀಘ್ರವಾಗಿ ಬದಲಾಯಿಸಿ ಮುಂದೆ ಆಗಲಿರುವ ಅನಾಹುತವನ್ನು ತಪ್ಪಿಸಬೇಕಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications