ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರದಲ್ಲಿ ಅಪಘಾತ; ಸ್ಥಳದಲ್ಲೇ ಮೂವರ ಸಾವು, 15 ಮಂದಿಗೆ ಗಾಯ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂನ್ 15: ಮದುವೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಬೊಲೆರೋ ಪಿಕ್ ಅಪ್ ವಾಹನ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಹದಿನೈದು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೊರಮನಕತ್ತರಿ ಜೆ.ವಿಲೇಜ್ ಬಳಿ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಿಕ್ಕಸಿದ್ದಮ್ಮ (55), ನಂಜುಂಡಯ್ಯ (60), ಸೀಮೆಎಣ್ಣೆ ನಾಗ (55) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಾಮರಾಜನಗರ: ಕರ್ತವ್ಯ ಲೋಪದಿಂದಾಗಿ ಸಿಪಿಐ, ಪಿಎಸ್ಐ ಅಮಾನತು ಚಾಮರಾಜನಗರ: ಕರ್ತವ್ಯ ಲೋಪದಿಂದಾಗಿ ಸಿಪಿಐ, ಪಿಎಸ್ಐ ಅಮಾನತು

ಇವರೆಲ್ಲ ಹನೂರು ತಾಲೂಕಿನ ಹುಣಸೇಪಾಳ್ಯ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಮಧುವನಹಳ್ಳಿಯಲ್ಲಿ ಇವರೆಲ್ಲ ಮದುವೆಗೆ ಹೋಗಿದ್ದು, ಹುಣಸೇಹಳ್ಳಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಗಾಯಗೊಂಡ ಹದಿನೈದು ಮಂದಿಯನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Three Killed And 15 Injured In Accident At Chamarajanagar

ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎನ್ನಲಾಗಿದೆ. ವೇಗವಾಗಿ ಚಾಲನೆ ಮಾಡಿದ್ದರಿಂದ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಾಹನ ಉರುಳಿಬಿದ್ದಿದೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

English summary
Three died on spot and 15 people injured in an accident near hanuru of chamarajanagar district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X