ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದೇ ದಿನ ಮೂರು ಚಿರತೆಗಳ ಸಾವು
ಚಾಮರಾಜನಗರ, ಜೂನ್ 23: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದೇ ದಿನ 3 ಚಿರತೆ ಶವಗಳು ಪತ್ತೆಯಾಗಿತುವ ಆತಂಕಕಾರಿ ಘಟನೆ ಇಂದು ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯ ವಲಯದ ಕಣಿಯನಪುರ ಗ್ರಾಮದ ಸಮೀಪ ಒಂದು ಚಿರತೆ ಹಾಗೂ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಮಂಗಲ ಗ್ರಾಮದಲ್ಲಿ ಮತ್ತೊಂದು ಚಿರತೆ ಶವ ಪತ್ತೆಯಾಗಿದ್ದು ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಏಕಾಏಕಿ ಚಿರತೆಗಳು ಸಾವನ್ನಪ್ಪಿರುವ ಕಣಿಯನಪುರ ಹಾಗೂ ಮಂಗಲ ಗ್ರಾಮಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ಕಣಿಯನಪುರದಲ್ಲಿ 5 ವರ್ಷದ ಗಂಡು ಚಿರತೆ ಮತ್ತು ಮಂಗಲ ಗ್ರಾಮದಲ್ಲಿ 2.5 ವರ್ಷದ ಹೆಣ್ಣು ಚಿರತೆ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ವಿಷಪೂರಿತ ಮಾಂಸ ತಿಂದು ಮತ್ತೊಂದು ಚಿರತೆ ಸಾವು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಬಫರ್ ವಲಯದ ಕೂತನೂರು ಗ್ರಾಮದ ಜಮೀನಿನಲ್ಲಿ ವಿಷಪೂರಿತ ಮಾಂಸ ತಿಂದು 3 ವರ್ಷದ ಚಿರತೆಯೊಂದು ಮೃತಪಟ್ಟಿದೆ. ಜಿ.ಆರ್.ಗೋವಿಂದರಾಜ ಎಂಬವರ ಜಮೀನಿನಲ್ಲಿ ಈ ಘಟನೆ ನಡೆದಿದೆ.

ಕೂತನೂರು ಗ್ರಾಮದ ಜಿ.ಆರ್.ಗೋವಿಂದರಾಜ ಅವರ ಸಾಕು ನಾಯಿಯನ್ನು ಚಿರತೆ ಬೇಟೆಯಾಡಿ ಹೋಗಿತ್ತು. ಹೀಗಾಗಿ ಉಳಿದ ಕಳೇಬರಕ್ಕೆ ಜಮೀನಿನ ಕಾವಲುಗಾರ ಸೋಮಶೇಖರ್ ಕೀಟನಾಶಕ ಸಿಂಪಡಿಸಿ ಇರಿಸಿದ್ದು, ತನ್ನ ಉಳಿದ ಬೇಟೆ ತಿನ್ನಲು ಬಂದ ಚಿರತೆ ವಿಷಪೂರಿತ ಮಾಂಸವನ್ನು ತಿಂದು ಸಾವನ್ನಪ್ಪಿದೆ.
ಮೃತ ಚಿರತೆ 3 ವರ್ಷದ ಹೆಣ್ಣು ಚಿರತೆ ಎಂದು ಬಂಡೀಪುರ ಸಿಎಫ್ಒ ರಮೇಶ್ ಕುಮಾರ್ ತಿಳಿಸಿದ್ದಾರೆ. ವಿಷ ಹಾಕಿದ್ದ ಕಾವಲುಗಾರ ಸೋಮಶೇಖರ್ನನ್ನು ಅರಣ್ಯಾಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಣಿಯನಪುರ ಹಾಗೂ ಮಂಗಲ ಗ್ರಾಮದ ಚಿರತೆಗಳ ದಿಢೀರ್ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications