ಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿ
ಕೊಳ್ಳೇಗಾಲ, ಜೂನ್ 10: ಗೆಳೆಯನ ಮದುವೆಗೆ ಬಂದಿದ್ದ ಮೂವರು ಸ್ನೇಹಿತರು ಮದುವೆ ಮುಗಿಸಿ ನದಿ ನೀರಿನಲ್ಲಿ ಆಡಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಸತ್ತೇಗಾಲ ಬಳಿಯ ವೆಸ್ಲೀ ಸೇತುವೆ ಸಮೀಪ ಕಾವೇರಿ ನದಿಯಲ್ಲಿ ಭಾನುವಾರ ನಡೆದಿದೆ.
ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿಗಳಾದ ಮನೋಜ್ಕುಮಾರ್ (23), ಲೋಕೇಶ್ (21) ಹಾಗೂ ವೀಣಾ (23) ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳು. ಈ ಮೂವರು ಸೇರಿ ಒಟ್ಟು ಆರು ಜನ ಸ್ನೇಹಿತರು ಸ್ನೇಹಿತನ ಮದುವೆಗೆಂದು ಶನಿವಾರ ರಾತ್ರಿ ಬಂದಿದ್ದರು.

ತಲಕಾಡು ಸಮೀಪದ ಮುಡುಕುತೊರೆಯಲ್ಲಿ ನಡೆದ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಂಡು ನಂತರ ತಿರುಗಾಡುವ ಸಲುವಾಗಿ ಸತ್ತೇಗಾಲ ಸಮೀಪ ಇರುವ ಭರಚುಕ್ಕಿ ಮತ್ತು ವೆಸ್ಲೀ ಸೇತುವೆ ಬಳಿ ಹರಿಯುವ ಕಾವೇರಿ ನದಿಗೆ ತೆರಳಿದ್ದರು. 6 ಮಂದಿ ಸ್ನೇಹಿತರಲ್ಲಿ ಈ ಮೂವರು ನೀರಿನಲ್ಲಿಳಿದು ಆಟವಾಡುತ್ತಿದ್ದಾಗ ಯುವತಿ ವೀಣಾ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ ಎನ್ನಲಾಗಿದೆ. ಈ ವೇಳೆ ಆಕೆಯನ್ನು ಕಾಪಾಡಲು ಮನೋಜ್ಕುಮಾರ್ ಹಾಗೂ ಲೋಕೇಶ್ ಸಹ ನೀರಿಗಿಳಿದಿದ್ದಾರೆ. ಆದರೆ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೂವರೂ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಕೂಡಲೇ ದಡ ಸೇರಿ ಸಾವಿನಿಂದ ಪಾರಾಗಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಹಾಗೂ ಪಿಎಸ್ ಐ ವಿ.ಸಿ.ವನರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮೇಲೆ ತೆಗೆದು ಮರಣೋತ್ತರ ಪರೀಕ್ಷೆಗೆ ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಲಾಯಿತು. ಘಟನೆ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications