ಚಾಮರಾಜನಗರ: ಸಿಡಿಲು ಬಡಿದು ಮೂವರಿಗೆ ಗಂಭೀರ ಗಾಯ
ಚಾಮರಾಜನಗರ, ಅಕ್ಟೋಬರ್, 30: ಗಾರೆ ಕೆಲಸ ಮಾಡಿ ವಾಪಸ್ ತೆರಳುತ್ತಿದ್ದ ವೇಳೆ ಮೂವರಿಗೆ ಸಿಡಿಲು ಹೊಡೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡು ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹನೂರಿನ ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಜರುಗಿದೆ.
ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಗುರು ( 33) ಮಂಜು (33) ಗುರುಸ್ವಾಮಿ (44) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು. ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದ ಜಮೀನೊಂದರಲ್ಲಿ ಗಾರೆ ಕೆಲಸ ಮುಗಿಸಿ ಸೋಮವಾರ ಸಂಜೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮಳೆ ಬಂದಿದೆ. ಈ ಸಂದರ್ಭದಲ್ಲಿ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆ ಸಮೀಪದ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಹೊಡೆದಿದೆ.

ಸಿಡಿಲು ಹೊಡೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡ ತಕ್ಷಣ ಇದನ್ನು ನೋಡಿದ ಸ್ಥಳೀಯರು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗುರು ಎನ್ನುವವರಿಗೆ ಕಾಲು, ಬೆರಳುಗಳಿಗೆ ಗಾಯಗಳಾಗಿದೆ. ಇನ್ನುಳಿದ ಇಬ್ಬರಿಗೆ ಶಾಕ್ ಆಗಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ. ಒಂದು ದಿನ ಚಿಕಿತ್ಸೆ ನೀಡಿದ ನಂತರ ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೋಲಿ ಕ್ರಾಸ್ ವೈದ್ಯಾಧಿಕಾರಿ ಡಾ.ಭಾರ್ಗವಿ ತಿಳಿಸಿದ್ದಾರೆ.
ಭಾರೀ ಮಳೆ, ಸಂಚಾರ ಅಸ್ತವ್ಯಸ್ತ
ಸತತವಾಗಿ ಎರಡು ತಿಂಗಳುಗಳಿಂದ ಬಿಸಿಲಿನ ಬೇಗೆಗೆ ಸೊರಗಿದ್ದ ಧಾರವಾಡ ಜನತೆಗೆ ಇಂದು ಸಂಜೆ ಮಳೆರಾಯ ತಂಪೆರೆದಿದ್ದಾನೆ. ಇಂದು ಸಂಜೆಯಾಗುತ್ತಿದ್ದಂತೆ ಧಾರವಾಡದಲ್ಲಿ ಸತತ ಅರ್ಧ ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಪರಿಣಾಮ ನಗರದ ಹಲವೆಡೆ ವಿದ್ಯುತ್ ಕಡಿತವಾಗಿದ್ದಲ್ಲದೆ, ರಸ್ತೆಗಳಲ್ಲಿ ನೀರು ಹರಿದು ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನು ಧಾರವಾಡ ನಗರ ಸೇರಿ ಅಕ್ಕಪಕ್ಕದ ಹಳ್ಳಿಗಳಲ್ಲೂ ಭಾರೀ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗೆಯೇ ಇಂದು (ಸೋಮವಾರ) ಸಂಜೆ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮಳೆರಾಯ ಆರ್ಭಟಿಸಿದ್ದಾರೆ. ನಗರದಲ್ಲಿ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಮಳೆರಾಯ ಇಂದು ಸಂಜೆ ದಿಢೀರನೇ ಆರ್ಭಟಿಸಿದ್ದಾರೆ. ಪರಿಣಾಮ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications