ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರವಾಸಿಗರ ಸೆಳೆದ ಮೂರು ಹುಲಿಗಳು!
ಚಾಮರಾಜನಗರ, ಫೆಬ್ರವರಿ 10: ಬಂಡೀಪುರದಂತೆ ಇದೀಗ ಬಿಳಿಗಿರಿರಂಗನ ಬೆಟ್ಟದ ಅರಣ್ಯದಲ್ಲಿಯೂ ಹುಲಿಗಳು ಕಾಣಿಸಿಕೊಳ್ಳುತ್ತಿರುವುದು ಪ್ರಾಣಿಪ್ರಿಯರ ಮನವನ್ನು ಮುದಗೊಳಿಸಿದೆ.
ಬಂಡೀಪುರ ಸಫಾರಿಯ ವೇಳೆ ಹುಲಿಗಳು ಕಾಣಿಸುವುದು ಮಾಮೂಲಿ. ಆದರೆ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ಸಫಾರಿ ಪ್ರದೇಶದಲ್ಲಿ ಮೂರು ಹುಲಿಗಳು ಜೊತೆಯಾಗಿ ದರ್ಶನ ನೀಡಿರುವುದು ಪ್ರವಾಸಿಗರನ್ನು ಪುಳಕಗೊಳಿಸಿದೆ.

ಮೂರು ಹುಲಿಗಳ ಅಪರೂಪದ ದರ್ಶನ
ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಅರಣ್ಯದಲ್ಲಿದ್ದ ಕುರುಚಲು ಕಾಡುಗಳು ಒಣಗಿವೆ. ಬಹುತೇಕ ಮರಗಳ ಎಲೆಗಳು ಉದುರಿ ಬೋಳು ಬೋಳಾಗಿದೆ. ಹೀಗಾಗಿ ಮಳೆಗಾಲದಲ್ಲಿ ಒತ್ತೊತ್ತಾಗಿ ಹಸಿರಿನಿಂದ ಕಂಗೊಳಿಸುತ್ತಿದ್ದ ಅರಣ್ಯ ಪ್ರದೇಶ ಸಡಿಲಗೊಂಡಂತೆ ಭಾಸವಾಗುತ್ತಿದೆ. ಪ್ರಾಣಿಗಳು ಆಹಾರ ಮತ್ತು ನೀರನ್ನು ಅರಸುತ್ತಾ ಅರಣ್ಯದಲ್ಲಿ ಓಡಾಡುತ್ತಿವೆ. ಈ ನಡುವೆ ಹುಲಿಗಳು ಕೂಡ ನೀರು ಮತ್ತು ಬೇಟೆಗೆ ಒಂದೆಡೆಯಿಂದ ಮತ್ತೊಂದೆಡೆ ಸಂಚಾರ ಹೊರಟಿವೆ. ಹೀಗಾಗಿ ಹುಲಿಗಳ ಅಪರೂಪದ ದೃಶ್ಯ ಮಂಗಳವಾರ ಕೆ.ಗುಡಿ ಸಫಾರಿಗೆ ತೆರಳಿದವರಿಗೆ ನೋಡಲು ಸಿಕ್ಕಿದೆ. ಸಾಮಾನ್ಯವಾಗಿ ಹುಲಿಗಳು ಏಕಾಂಗಿಯಾಗಿ ಅಡ್ಡಾಡುವ ದೃಶ್ಯಗಳು ಆಗಾಗ್ಗೆ ಕಾಣುತ್ತಿರುತ್ತವೆ. ಆದರೆ ಇಲ್ಲಿ ಮೂರು ಹುಲಿಗಳು ಜತೆಯಾಗಿ ತೆರಳುತ್ತಿದ್ದದ್ದು ವಿಶೇಷವಾಗಿತ್ತು.

ಯಳಂದೂರಿನಿಂದ ಸುಮಾರು 15 ಕಿ.ಮೀ ದೂರ
ಹಾಗೆ ನೋಡಿದರೆ ಬಿಳಿಗಿರಿರಂಗನ ಬೆಟ್ಟವು ಪ್ರಾಣಿ, ಪಕ್ಷಿ ಮತ್ತು ಸಸ್ಯ ಸಂಕುಲ, ಬೆಟ್ಟಗುಡ್ಡಗಳಿಂದ ಆವೃತವಾದ ನಿಸರ್ಗ ಸುಂದರ ಅರಣ್ಯವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15 ಕಿ.ಮೀ ದೂರದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು 1552 ಮೀಟರ್ ಎತ್ತರದಲ್ಲಿದ್ದು, ಸುಮಾರು 750 ಚದರ ಕಿ.ಮೀ. ವಿಸ್ತಾರವನ್ನು ಹೊಂದಿದೆ. ಇಲ್ಲಿನ ಮುಖ್ಯ ವಿಶೇಷತೆ ಏನೆಂದರೆ ಬಿಳಿಪಟ್ಟೆಗಳ ಹುಲಿಗಳ ಹಾಗೂ ಏಷ್ಯಾದ ಆನೆಗಳ ವಾಸಕ್ಕೆ ಇದು ಯೋಗ್ಯ ತಾಣವಾಗಿದೆ. ಅರಣ್ಯದಲ್ಲಿ ಶ್ರೀಗಂಧ, ಹೊನ್ನೆ, ಮತ್ತಿ, ಬೂರುಗ, ಬೀಟೆ, ಬನ್ನಿ, ಮೊದಲಾದ ಅಮೂಲ್ಯ ಮರಗಳಲ್ಲದೆ ಐತಿಹಾಸಿಕ ದೊಡ್ಡ ಮತ್ತು ಚಿಕ್ಕ ಸಂಪಿಗೆ ಇಲ್ಲಿನ ಆಕರ್ಷಣೆಯಾಗಿದೆ. ಹುಲಿ, ಚಿರತೆ, ಕರಡಿ, ಆನೆ, ಕಾಡೆಮ್ಮೆ, ಜಿಂಕೆ ಸೇರಿದಂತೆ ಕಾಡು ಪ್ರಾಣಿಗಳು, 420ಕ್ಕೂ ಅಧಿಕ ಪಕ್ಷಿ ಸಂಕುಲಗಳಿವೆ ಎಂದು ಹೇಳಲಾಗುತ್ತಿದೆ.

ಬಿಳಿಗಿರಿರಂಗನ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ
ವನ್ಯಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಲಾಗಿದ್ದು, ಇದು ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಕೊಂಡಿಯಾಗಿದೆ. ಈ ಅರಣ್ಯದಲ್ಲಿ ಬಹಳ ಹಿಂದಿನಿಂದಲೂ ಸೋಲಿಗರು ವಾಸ ಮಾಡುತ್ತಾ ಬಂದಿದ್ದು, ಇಲ್ಲಿ ಸಿಗುವ ಅರಣ್ಯ ಉತ್ಪನ್ನವೇ ಅವರ ಬದುಕಿಗೆ ಆಸರೆಯಾಗಿದೆ. ಬೆಟ್ಟದ ಮೇಲ್ಭಾಗದಲ್ಲಿ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ಅಭಿವೃದ್ಧಿ ಕಾರ್ಯ ಇದೀಗ ನಡೆಯುತ್ತಿದೆ. ಇನ್ನು ಬಿಳಿಗಿರಿರಂಗನ ಬೆಟ್ಟ ವ್ಯಾಪ್ತಿಗೆ ಸೇರುವ ಬೇಡಗುಳಿ, ಹೊನ್ನಮೇಟಿ, ಅತ್ತಿಖಾನಿ ಮೊದಲಾದ ಅರಣ್ಯ ಪ್ರದೇಶಗಳು ನಿಸರ್ಗ ಸುಂದರ ಪ್ರದೇಶಗಳಾಗಿವೆ.
Recommended Video

ಅಲ್ಲಲ್ಲಿ ಕಾಣಸಿಗುವ ಸೋಲಿಗರ ಜೋಪಡಿ
ಇದುವರೆಗೆ ಬಿಳಿಗಿರಿರಂಗನ ಬೆಟ್ಟದ ಅರಣ್ಯದಲ್ಲಿ ಸಂಚರಿಸುವ ಪ್ರವಾಸಿಗರಿಗೆ ಕಾಡಿನ ನಡುವೆ ಅಲ್ಲಲ್ಲಿ ಕಾಣಸಿಗುವ ಸೋಲಿಗರ ಜೋಪಡಿಗಳು, ಅದರಾಚೆಗೆ ಕಾಫಿ, ಕಿತ್ತಳೆ, ಬಾಳೆ, ಹಿಪ್ಪನೇರಳೆ ಬೆಳೆಯ ತೋಟಗಳು, ಕಾಡಿನ ನಡುವಿನ ಅಂಕುಡೊಂಕಿನ ರಸ್ತೆಗಳಲ್ಲಿ ತಲೆ ಮೇಲೆ ಅರಣ್ಯ ಉತ್ಪನ್ನಗಳ ಹೊರೆ ಹೊತ್ತು ಸಾಗುವ ಸೋಲಿಗರು, ನೆಗೆದು ಓಡುವ ಜಿಂಕೆಗಳು, ಘೀಳಿಡುವ ಆನೆಗಳು ಕಾಣಿಸುತ್ತಿದ್ದವು. ಇದೀಗ ಕೆ.ಗುಡಿ ಸಫಾರಿ ಪ್ರದೇಶದಲ್ಲಿ ಹುಲಿಗಳು ಕಂಡು ಬಂದಿರುವುದು ಪ್ರಾಣಿಪ್ರಿಯರನ್ನು ಅತ್ತ ಸುಳಿಯುವಂತೆ ಮಾಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications