ಸ್ಥಳೀಯರಿಗೆ 100% ಟಿಕೆಟ್: ಚಾಮರಾಜನಗರದಲ್ಲಿ ವಿಜಯೇಂದ್ರ ಅಪ್ತನಿಗೆ ವಿ.ಶ್ರೀನಿವಾಸಪ್ರಸಾದ್ ಪ್ರಸಾದ್ ಠಕ್ಕರ್
ಸ್ಥಳೀಯರಿಗೆ 100% ಟಿಕೆಟ್ ಸಿಗಲಿದೆ ಕಾದು ನೋಡಿ ಎಂದು ವಿ.ಶ್ರೀನಿವಾಸಪ್ರಸಾದ್ ಚಾಮರಾಜನಗರದಲ್ಲಿ ಭವಿಷ್ಯ ನುಡಿದರು.
ಚಾಮರಾಜನಗರ, ಫೆಬ್ರವರಿ, 23: ಮುಂಬರುವ ಚುನಾವಣೆಯಲ್ಲಿ ಸ್ಥಳೀಯರಿಗೆ ಹಾಗೂ ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡಲಾಗುತ್ತದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಚಾಮರಾಜನಗರದಲ್ಲಿ ಹೇಳಿದ್ದಾರೆ. ಹೀಗೆ ಹೇಳುವ ಮೂಲಕ ವಿಜಯೇಂದ್ರ ಆಪ್ತ ಕೆಆರ್ಐಡಿಎಲ್ ಅಧ್ಯಕ್ಷ ರುದ್ರೇಶ್ಗೆ ಠಕ್ಕರ್ ಕೊಟ್ಟಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಭಾಗಿಯಾಗಿದ್ದು, ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚಾಮರಾಜನಕ್ಕೆ ಬಂದು ಯಾರಾದರೂ ಓಡಾಡಲಿ, ಪ್ರಜಾಪ್ರಭುತ್ವದಲ್ಲಿ ಅದನ್ನು ತಡೆಯಲಾಗುವುದಿಲ್ಲ. ಈ ಬಗ್ಗೆ ಬಿ.ಎಲ್.ಸಂತೋಷ್ ಸ್ಪಷ್ಟವಾಗಿ ತಿಳಿಸಿದ್ದು, ನಮ್ಮ ಅಭಿಪ್ರಾಯಕ್ಕೆ ಮನ್ನಣೆ ಕೊಟ್ಟಿದ್ದಾರೆ. ಸ್ಥಳೀಯರಿಗೆ 100% ಟಿಕೆಟ್ ಸಿಗಲಿದೆ ಕಾದು ನೋಡಿ ಎಂದು ಭವಿಷ್ಯ ನುಡಿದರು.

ಹಾಲಿ ಶಾಸಕರಿಗೆ ಟಿಕೆಟ್
ಸಂಸದರು ಇದೇ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಕೊಡಲಾಗುತ್ತದೆ ಎಂದರು. ಹೀಗೆ ಹೇಳುವ ಮೂಲಕ ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹಾಗೂ ಗುಂಡ್ಲುಪೇಟೆಗೆ ಸಿ.ಎಸ್.ನಿರಂಜನ ಕುಮಾರ್ ಹೆಸರು ಫೈನಲ್ ಆಗಿರುವ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟರು.
ಸಿದ್ದರಾಮಯ್ಯ ಪಲಾಯನವಾದಿ
ಸರ್ವೇ ಪ್ರಕಾರ ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರದಲ್ಲಿದ್ದವರು ಸೋತು 141 ಸ್ಥಾನ ಎಂದು ಹೇಳುತ್ತಿರುವುದು ಕಾಂಗ್ರೆಸ್ನ ಆಶಾವಾದಿತನವಾಗಿದೆ. ಕ್ಷೇತ್ರದಿಂದ ಕ್ಷೇತ್ರಕ್ಕೆ ಪಲಾಯನ ಮಾಡುತ್ತಿರುವ ಸಿದ್ದರಾಮಯ್ಯ ಹಾಗೂ ಅವರ ಪಕ್ಷದವರು 141 ಸ್ಥಾನ ಗೆಲ್ಲುತ್ತದೆ ಎಂದು ಹೇಳಿದ್ದಾರೆ. ಇನ್ನು ನಾವು ಸರ್ಕಾರದಲ್ಲಿರುವವರು ಎಷ್ಟು ಧೈರ್ಯದಿಂದ, ಆತ್ಮವಿಶ್ವಾಸದಿಂದ ಹೇಳಬಹುದು. ನಮಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದರು.

ಕಾಡಾ ಅಧ್ಯಕ್ಷರ ಆಕ್ರೋಶ
ಇನ್ನು ಕಾಡಾ ಅಧ್ಯಕ್ಷ ಹಾಗೂ ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಜಗುಣರಾಜು ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಸ್ಥಳೀಯರಿಗೆ ಟಿಕೆಟ್ ಎಂದು ಹೇಳಿದ್ದಾರೆ. ಕಾಸು ಇದ್ದವರು ಬಂದು ಇಲ್ಲಿ ನಾಟಕ ಮಾಡಿಸಬಹುದು, ಹಣ ಕೊಡಬಹುದು ಎಂದು ರುದ್ರೇಶ್ ವಿರುದ್ಧ ಆಕ್ರೋಶ ಹೊರಹಾಕಿದರು.
ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರಿಗೆ ರುದ್ರೇಶ್ ಓಡಾಡುತ್ತಿರುವ ಬಗ್ಗೆ ಗಮನಕ್ಕೆ ತಂದ ವೇಳೆ ನಾವು ಯಾರನ್ನೂ ಕಳುಹಿಸಿಲ್ಲ. ತಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಸುಮ್ಮನೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಹೆಸರು ದುರ್ಬಳಕೆ ಆಗುತ್ತಿದೆ ಎಂದರು.
ವಿಜಯೇಂದ್ರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರುದ್ರೇಶ್ ಕಳೆದ 6-7 ತಿಂಗಳುಗಳಿಂದ ಚಾಮರಾಜನಗರದಲ್ಲಿ ಓಡಾಡುತ್ತಿದ್ದು ತಾವು ಕೂಡ ಟಿಕೆಟ್ ಆಕಾಂಕ್ಷಿ ಎಂದು ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದಲ್ಲಿ ಸುಸಜ್ಜಿತ ಮನೆ ಹಾಗೂ ಕಚೇರಿಯನ್ನು ತೆರೆದು ತಮ್ಮದೇ ಅನುಯಾಯಿಗಳ ಮೂಲಕ ಓಡಾಡುತ್ತಿದ್ದಾರೆ.
ಒಟ್ಟಿನಲ್ಲಿ ಚುನಾವಣಾ ಸಮಯ ಹತ್ತಿರವಾಗುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಹಗ್ಗಜಗ್ಗಾಟ, ಬೇರೆ ಪಕ್ಷಗಳೊಂದಿಗೆ ಸಂಪರ್ಕ, ಓಡಾಟ ಜೋರಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications