ಚಾಮರಾಜನಗರ: ಹುಲಿ ದಾಳಿಯಿಂದ ವ್ಯಕ್ತಿಯೋವರ್ನಿಗೆ ಗಂಭೀರ ಗಾಯ
ಚಾಮರಾಜನಗರ, ಜೂನ್, 10: ಚಾಮರಾಜನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿಬಿಟ್ಟಿದೆ. ಹಾಗೆಯೇ ಇದೀಗ ಹುಲಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ ಘಟನೆ ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿ ಸಮೀಪದ ರಾಮಯ್ಯನ ಪೋಡಿ ಎಂಬ ಸ್ಥಳದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾ.ಪಂ. ವ್ಯಾಪ್ತಿಯ ಬೇಡಗುಳಿಯ ರಾಮಯ್ಯನ ಪೋಡಿಯಲ್ಲಿ ಸೋಮವಾರ ಸಂಜೇ ವೇಳೆಗೆ ರವಿ(34) ಎಂಬುವವರ ಮೇಲೆ ಹುಲಿ ದಾಳಿ ನಡೆಸಿದ್ದು, ಇದರಿಂದ ರವಿ ಅವರ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಘಟನೆ ವಿಚಾರ ತಿಳಿದ ಅರಣ್ಯ ಇಲಾಖೆಯ ಚಾಮರಾಜನಗರ ವೃತ್ತ ಅರಣ್ಯಾಧಿಕಾರಿ ಹಿರಲಾಲ್, ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಸ್ಥಳಕ್ಕೆ ಆಗಮಿಸಿ ರವಿ ಅವರನ್ನು ಚಾಮರಾಜನಗರ ಸರ್ಕಾರಿ ಭೋದನಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಹುಲಿ ದಾಳಿ ನಡೆಸಿದ ಸ್ಥಳದ ಸುತ್ತಮುತ್ತ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಅಲ್ಲದೆ ಈಗಾಗಲೇ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಆರಂಭಿಸಿದೆ. ಇನ್ನು ಇಲ್ಲಿ ವಾಸ ಮಾಡುವ ಕುಟುಂಬಗಳಿಗೆ ಹುಲಿ ಸೆರೆಯಾಗುವವರೆಗೂ ತಾತ್ಕಾಲಿಕವಾಗಿ ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ.
ಭಯ ಹುಟ್ಟಿಸಿದ ಚಿರತೆ: ಇತ್ತೀಚಿಗೆ ಬೆಂಗಳೂರಿನ ತಲಘಟ್ಟಪುರ ಮತ್ತು ಮಲ್ಲಸಂದ್ರ ಸುತ್ತಮುತ್ತ ಕಾಣಿಸಿಕೊಂಡಿತ್ತು. ಚಿರತೆ ಓಡಾಡಿರುವುದರ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದರು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ಕೈದು ಕಡೆ ಕ್ಯಾಮರಾ ಅಳವಡಿಕೆ ಮಾಡಿದ್ದರು.
ಇದೇ ಮೊದಲೇನಲ್ಲ ಈ ಹಿಂದೆಯೂ ಸಗ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಕಾರಣವಾಗಿತ್ತು. ಈ ಸಂಬಂಧ ಅರಣ್ಯ ಇಲಾಖೆ ಚಿರತೆಗಳ ಸೆರೆ ಹಿಡಿದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ರವಾನಿಸಿತ್ತು.
ನಗರದಲ್ಲಿ ಸುಮಾರು 80ಕ್ಕೂ ಹೆಚ್ಚು ಚಿರತೆಗಳು ಕಾಣಿಸಿಕೊಂಡಿರುವ ಅಂಶ ಅಧ್ಯಯನವೊಂದರಲ್ಲಿ ಬಹಿರಂಗಗೊಂಡಿದೆ. ಈ ಅಧ್ಯಯನ ವರದಿಯ ನಗರದ ಸುತ್ತಮುತ್ತಲ ಕಿರು ಅರಣ್ಯಗಳು ಚಿರತೆಗಳಿರುವುದು ಗೊತ್ತಾಗಿದೆ. ಒಂದು ವರ್ಷಕ್ಕೂ ಹೆಚ್ಚಿನ ಕಾಲದಿಂದ ವನ್ಯ ಜೀವಿ ತಜ್ಞರಾದ ಡಾ.ಸಂಜಯ್ ಗುಬ್ಬಿ ನೇತೃತ್ವದ ಹೊಳೆಮತ್ತಿ ನೇಚರ್ ಫೌಂಡೇಶನ್ನ ತಂಡದವರು ನಡೆಸಿದ ಅಧ್ಯಯನದ ಪ್ರಕಾರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಸೇರಿ ಬೆಂಗಳೂರಿನ ಸುತ್ತಮುತ್ತ ಸುಮಾರು 80ರಿಂದ 85 ಚಿರತೆಗಳಿರಬಹುದು ಎಂದು ಅಂದಾಜು ಮಾಡಿದೆ ಎಂದು ತಿಳಿದುಂದಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications