Get Updates
Get notified of breaking news, exclusive insights, and must-see stories!

ಬಂಡೀಪುರ: ಕೆರೆಯಲ್ಲಿ ಹಾಯಾಗಿ ಮಲಗಿದ್ದ ಹುಲಿಯನ್ನು ಅಟ್ಟಾಡಿಸಿದ ಗಜರಾಜ-ವಿಡಿಯೋ ಭಾರೀ ವೈರಲ್‌

ಚಾಮರಾಜನಗರ, ಜೂನ್‌, 27: ಕೆರೆಯಲ್ಲಿ ಮಲಗಿ ಕೂಲ್ ಕೂಲ್ ಆಗುತ್ತಿದ್ದ ಹುಲಿಯು ಆನೆಯನ್ನು ಕಂಡು ಕಂಗೆಟ್ಟು ಓಡಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ಬುಧವಾರ (ಜೂನ್‌ 27) ಸಂಜೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಗಜರಾಜನ ನೋಡಿ ಹುಲಿರಾಯ ಕಾಲ್ಕಿತ್ತಿದ್ದನ್ನು ಕಂಡ ಸಫಾರಿಗರು ರೋಮಾಂಚಿತರಾಗಿದ್ದಾರೆ. ಬಂಡೀಪುರದಲ್ಲಿ‌ ಕೆರೆಯಲ್ಲಿ ಬಿಸಿಲಿನ ತಾಪಕ್ಕೆ ಹುಲಿಯೊಂದು ಕೆರೆಗೆ ಇಳಿದು ರಿಲ್ಯಾಕ್ಸ್ ಮೂಡಿಗೆ ಜಾರಿತ್ತು.‌ ದಾಹ ತಣಿಸಿಕೊಳ್ಳಲು ಬಂದ ಗಜರಾಜ ಹುಲಿಯನ್ನು ಕಂಡ ಕೂಡಲೇ ದಾಳಿ ಮಾಡುವಂತೆ ಮುನ್ನುಗ್ಗಿ ಹುಲಿಯನ್ನು ಅಟ್ಟಾಡಿಸಿ ಓಡಿಸಿದ್ದು, ಸದ್ಯ, ವೀಡಿಯೋ ಭಾರೀ ಸದ್ದು ಮಾಡುತ್ತಿದೆ.

Tiger-elephant fight In Bandipur lake video viral

ಆತಂಕಗೊಂಡ ಜನ: ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಜೂನ್‌ 13ರಂದು ಬೆಳ್ಳಂಬೆಳಗ್ಗೆ ಆನೆ ಓಡಾಡಿ ಜನರನ್ನು ಆತಂಕಕ್ಕೆ ಈಡು ಮಾಡಿರುವ ಘಟನೆ ನಡೆದಿದೆ‌‌‌.

ಬಿಳಿಗಿರಿರಂಗನ ಬೆಟ್ಟದ ಮುಖ್ಯರಸ್ತೆ, ಬಂಗಲೆ ಪೋಡಿನ ನಡುವೆ ನೀಳದಂತದ ಕಾಡಾನೆಯೊಂದು ಓಡಾಡಿ ಅಲ್ಲಿನ ಜನರನ್ನು, ಭಕ್ತರನ್ನು ಪರದಾಡುವಂತೆ ಮಾಡಿದೆ.

ಬೆಳ್ಳಂಬೆಳಗ್ಗೆಯೇ ಗಜರಾಜ ದಾದಾಗಿರಿಗೆ ಜನರು ಅವಾಕ್ಕಾಗಿದ್ದು, ಎದುರಿಗೆ ಬಂದ ಕೆಎಸ್ಆರ್‌ಟಿ ಬಸ್, ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ. ಇನ್ನು ಕಳೆದ ಎರಡು ತಿಂಗಳಿನಿಂದಲೂ ಪೋಡುಗಳತ್ತ ಈ ಆನೆ ಧಾವಿಸುತ್ತಿದೆ ಎಂದು ತಿಳಿದುಬಂದಿದೆ‌. ಮಾವಿನ ಹಣ್ಣು‌ ಹಾಗೂ ಹಲಸಿನ ಹಣ್ಣಿಗಾಗಿ ಪೋಡುಗಳತ್ತ ಬರುತ್ತಿದೆ ಎನ್ನಲಾಗಿದೆ.

ಎರಡು ಪ್ರಾಣಿಗಳ ನಡುವೆ ಕಾಳಗ: ಇತ್ತೀಚಿನ ದಿನಗಳಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಪ್ರಾಣಿಗಳ ರಸ್ತೆಗಿಳಿಯುವುದು ಹೆಚ್ಚಾಗಿಬಿಟ್ಟಿದೆ. ಅಷ್ಟೇ ಅಲ್ಲದೆ, ಕಾಳಗಕ್ಕೆ ಇಳಿದಿರುವ ಘಟನೆಗಳು ಸಹ ನಡೆದಿವೆ. ಹಾಗೆಯೇ ಮೇ 30ರ ಬೆಳ್ಳಂಬೆಳಗ್ಗೆ ಎರಡು ಪ್ರಾಣಿಗಳ ನಡುವೆ ಕಾಳಗ ನಡೆದಿದ್ದು, ಈ ವೇಳೆ ಪಾಪದ ಪ್ರಾಣಿಯೊಂದು ಮೃತಪಟ್ಟ ಘಟನೆ ಪಡಗೂರು-ಕಲ್ಲಹಳ್ಳಿ ಮಾರ್ಗ ಮಧ್ಯದಲ್ಲಿ ನಡೆದಿದೆ.

ಹುಲಿ ದಾಳಿ ನಡೆಸಿ ಜಿಂಕೆಯೊಂದನ್ನು ಕೊಂದು ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು-ಕಲ್ಲಹಳ್ಳಿ ಮಾರ್ಗ ಮಧ್ಯದ ಜಮೀನೊಂದರಲ್ಲಿ ಗುರುವಾರ (ಮೇ 30) ಬೆಳಗ್ಗೆ ನಡೆದಿದೆ.

ಪಡಗೂರು ಅಡವಿ ಮಠದ ಶ್ರೀಗಳಿಗೆ ಸೇರಿದ ಜಮೀನಿನ ಪಕ್ಕದ ಬಯಲಲ್ಲಿ ಗುರುವಾರ ಬೆಳಗ್ಗೆ ಮೇವು ಮೇಯುತ್ತಿದ್ದ ಜಿಂಕೆಯ ಮೇಲೆ ಹುಲಿ ಏಕಾಏಕಿ ದಾಳಿ ನಡೆಸಿ ಕುತ್ತಿಗೆ ಭಾಗಕ್ಕೆ ಬಲವಾಗಿ ಕಚ್ಚಿದೆ. ಈ ವೇಳೆ ರೈತರು ಕೂಗಿಕೊಂಡ ಪರಿಣಾಮ ಜಿಂಕೆ ಬಿಟ್ಟು ಓಡಿ ಹೋಗಿದೆ. ನಂತರ ಜಿಂಕೆಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಕೆಲಕಾಲ ಒದ್ದಾಡಿ ಸಾವನ್ನಪ್ಪಿದೆ ಎಂದು ಸ್ಥಳೀಯ ರೈತರು ಮಾಹಿತಿ ನೀಡಿದರು‌. ಅಲ್ಲದೆ, ಜಿಂಕೆ ಒದ್ದಾಟದ ವೀಡಿಯೋವನ್ನು ರೈತರು ಸೆರೆ ಹಿಡಿದು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+