ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕಾಡೆಮ್ಮೆ ಕಿತ್ತು ತಿಂದ ವ್ಯಾಘ್ರ: ಬೆಚ್ಚಿಬಿದ್ದ ಭಕ್ತರು
ಚಾಮರಾಜನಗರ, ಜುಲೈ 27: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿ ಘರ್ಜನೆ ಜೋರಾಗಿದೆ. ಬೆಟ್ಟದ ಹುಲಿ ಕಾಡೆಮ್ಮೆಯ ಮಾಂಸವನ್ನು ಕಿತ್ತು ತಿಂದ ದೃಶ್ಯ ಕಂಡ ಭಕ್ತರು ಬೆಚ್ಚಿಬಿದ್ದಿದ್ದು, ಇನ್ನು ಕೆಲ ಪ್ರವಾಸಿಗರು ಈ ದೃಶ್ಯ ಕಂಡು ರೋಮಾಂಚಿತರಾಗಿದ್ದಾರೆ.
ಗೋಪಾಲಸ್ವಾಮಿ ಬೆಟ್ಟದಿಂದ ಹಿಂತಿರುಗುವಾಗ ಗುಡ್ಡವೊಂದರಲ್ಲಿ ಕಾಡೆಮ್ಮೆಯ ತಲೆ ಭಾಗವನ್ನು ಕಿತ್ತು ಹುಲಿ ಎಳೆದೊಯ್ದ ದೃಶ್ಯ ಸೆರೆಯಾಗಿದೆ. ಬಸ್ಸಿನಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವಾಗ ಈ ಹುಲಿ ಆಗಾಗ ಭಕ್ತರಿಗೆ ಕಾಣಿಸಿಕೊಳ್ಳುತ್ತಿದ್ದು, ಬೆಟ್ಟದ ಹುಲಿ ಎಂದೇ ಫೇಮಸ್ ಆಗಿದೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಸದಾ ಹಿಮದಿಂದ ಆವೃತವಾಗಿರಲಿದ್ದು, ಕರ್ನಾಟಕದ ಕಾಶ್ಮೀರದಂತೆ ಭಾಸವಾಗಲಿದೆ. ಪ್ರಕೃತಿ ಸೌಂದರ್ಯದ ಜೊತೆಗೆ ಹುಲಿ ದರ್ಶನವೂ ಆಗಿರುವುದು ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಡಬಲ್ ಧಮಾಕಾ ಸಿಕ್ಕಂತಾಗಿದೆ.
ಬಂಡೀಪುರ: ಸುರಿಯುವ ಮಳೆ ನೀರು ಕುಡಿದು ದಣಿವಾರಿಸಿಕೊಂಡ ವ್ಯಾಘ್ರ
ಚಾಮರಾಜನಗರ: ಚಾಮರಾಜನಗರ ಜಿಲ್ಲಾಯಲ್ಲಿ ಕಳೆದ ಕೆಲ ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶದಲ್ಲೂ ಬಿರುಸಿನ ಮಳೆಯಾಗಿದೆ. ಧೋ ಎಂದು ಸುರಿಯುವ ಮಳೆ ನೀರನ್ನು ಕುಡಿದು ಹುಲಿಯೊಂದು ದಣಿವಾರಿಸಿಕೊಂಡ ದೃಶ್ಯ ಬಂಡೀಪುರ ಸಫಾರಿಗೆ ತೆರಳಿದ್ದ ವೇಳೆ ಸೆರೆಯಾಗಿದ್ದು, ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಡೀಪುರ ಸಫಾರಿಗೆ ತೆರಳಿದ್ದವರು ರಸ್ತೆ ಸಮೀಪದಲ್ಲೇ ಹುಲಿಯನ್ನು ಕಂಡು ರೋಮಾಂಚಿತಗೊಂಡಿದ್ದಾರೆ. ವೈರಲ್ ಆಗುತ್ತಿರುವ ಹುಲಿಯ ವಿಡಿಯೋ ಬಂಡೀಪುರ ಸಫಾರಿಯಲ್ಲಿ ತೆಗೆದಿರುವುದಾಗಿ ಸಿಎಫ್ಒ ರಮೇಶ್ ಕುಮಾರ್ ದೃಢಪಡಿಸಿದ್ದಾರೆ.

ಚಾಮರಾಜನಗರ: ಯಳಂದೂರಲ್ಲಿ ಬಾಲಕನ ಮೇಲೆ ಚಿರತೆ ದಾಳಿ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಮಲ್ಲಿಗೆಹಳ್ಳಿ ಗ್ರಾಮದ ಹರ್ಷಿತ್(09) ದಾಳಿಗೊಳಗಾದ ಬಾಲಕ. ಗ್ರಾಮದ ಪ್ರಾಥಮಿಕ ಶಾಲೆ ಮುಂಭಾಗದಿಂದ ಮನೆಗೆ ತೆರಳುವಾಗ ಅವಿತು ಕುಳಿತಿದ್ದ ಚಿರತೆ ಬಾಲಕನ ಮೇಲೆ ದಾಳಿ ಮಾಡಿದೆ.
ಬಾಲಕನನ್ನು ಚಿರತೆಯಿಂದ ತಪ್ಪಿಸಲು ಸ್ಥಳದಲ್ಲಿದ್ದ ಜನರು ಕಿರುಚಾಡಿದ್ದಾರೆ. ಜನರ ಕಿರುಚಾಟಕ್ಕೆ ಬೆದರಿದ ಚಿರತೆ ಬಾಲಕನ್ನು ಬಿಟ್ಟು ಗದ್ದೆಗಳತ್ತ ಓಡಿದೆ. ಘಟನೆಯಲ್ಲಿ ಹರ್ಷಿತ್ನ ಮುಖ, ಗಂಟಲು, ಕಾಲು, ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು, ಯಳಂದೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications