ಗುಂಡ್ಲುಪೇಟೆ: ಕಾದಾಟದಲ್ಲಿ ತೀವ್ರ ಗಾಯಗೊಂಡ ಸ್ಥಿತಿಯಲ್ಲಿ "ಹುಲಿ"ರಾಯ ಪತ್ತೆ
ಚಾಮರಾಜನಗರ, ನವೆಂಬರ್, 24: ಸರಹದ್ದಿನ ಕಾದಾಟದಲ್ಲಿ ಹುಲಿಯೊಂದು ತೀವ್ರವಾಗಿ ಗಾಯಗೊಂಡು ಮೇಲಕ್ಕೆ ಏಳಲಾರದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಸಮೀಪ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಜನವಸತಿ ಸಮೀಪವೇ ಗಾಯಗೊಂಡ ಹುಲಿ ತೀರಾ ನಿತ್ರಾಣದ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ.

ಹುಲಿಗೆ 4 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು, ಮತ್ತೊಂದು ಗಂಡು ಹುಲಿ ಜೊತೆಗಿನ ಸರಹದ್ದಿನ ಕಾದಾಟದಲ್ಲಿ ಗಾಯಗೊಂಡಿದೆ. ಹುಲಿ ಈಗಾಗಲೇ ನಿತ್ರಾಣಗೊಂಡಿರುವುದರಿಂದ ಚುಚ್ಚುಮದ್ದು ಕೊಟ್ಟು ಸೆರೆ ಹಿಡಿಯಲಾಗಲ್ಲ. ಬೋನಿನ ಮೂಲಕ ಸೆರೆ ಹಿಡಿಯಲು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಬಂಡೀಪುರ ಸಿಎಫ್ಒ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಾವೇರಿ ಮಡಿಲಲ್ಲಿ ಮಿಂದೆದ್ದ "ಗಜ"ಗ್ಯಾಂಗ್
ಇನ್ನು ಇತ್ತೀಚೆಗಷ್ಟೇ ಭೋರ್ಗರೆದು ಹರಿಯುವ ಕಾವೇರಿ ನದಿಯನ್ನು ಬರೋಬ್ಬರಿ 19ಕ್ಕೂ ಅಧಿಕ ಆನೆಗಳು ದಾಟಿರುವ ವೀಡಿಯೋಯೊಂದನ್ನು ಯುವಕ ಸೆರೆ ಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಹನೂರು ತಾಲೂಕಿನ ಗಡಿಯಲ್ಲಿರುವ ಹೊಗೆನಕಲ್ ಜಲಪಾತದಲ್ಲಿ ಈ ಘಟನೆ ನಡೆದಿತ್ತು.
3 ಮರಿಗಳು ಸೇರಿದಂತೆ 19ಕ್ಕೂ ಹೆಚ್ಚು ಆನೆಗಳು ಕಾವೇರಿ ದಂಡೆಯನ್ನು ದಾಟಿ ಅಲ್ಲೇ ಓಡಾಡಿ ದಣಿವು ತಣಿಸಿಕೊಳ್ಳುತ್ತಾ ಮೇಯುತ್ತಾ ರಿಲಾಕ್ಸ್ನಲ್ಲಿರುವ ವೀಡಿಯೋವನ್ನು ಗೋಪಿನಾಥಂ ಎಂಬ ಯುವಕ ಸೆರೆ ಹಿಡಿದಿದ್ದಾನೆ. ಅರಣ್ಯ ಪ್ರದೇಶದ ಭಾಗದಲ್ಲಿ ನೀರಿನ ಕೊರತೆ ಇರುವುದರಿಂದ ಒಂದು ನದಿ ಭಾಗದಲ್ಲಿ ಬಂದು ಬೀಡು ಬಿಡಲಿದ್ದು, ಸದ್ಯ 19ಕ್ಕೂ ಅಧಿಕ ಆನೆಗಳ ಗುಂಪು ಕಾವೇರಿ ದಂಡೆಯಲ್ಲಿ ವಿಹರಿಸುತ್ತಿವೆ.
ನಾಡಿನತ್ತ ಬಂದ ಕಾಡಾನೆ
ಇನ್ನು ಇತ್ತೀಚೆಗಷ್ಟೇ ನೀರಿನ ಅಭಾವ ಕೇವಲ ನಾಡಲ್ಲಿ ಮಾತ್ರವಲ್ಲದೇ ಕಾಡಲ್ಲೂ ಕಾಣಿಸಿಕೊಂಡಿದೆ ಎಂಬುದಕ್ಕೆ ರಸ್ತೆಬದಿ ನಿಂತಿದ್ದ ನೀರು ಕುಡಿದ ಈ ಆನೆಯೇ ಸಾಕ್ಷಿ. ಹನೂರು ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆ ಜಮೀನಿನಲ್ಲಿ ಹಾಕಿರುವ ಫೈರುಗಳು ಒಣಗಿರುವುದು ಒಂದೆಡೆಯಾದರೆ, ಅರಣ್ಯದಲ್ಲಿ ಕೆರೆಕಟ್ಟೆಗಳು ಖಾಲಿಯಾಗಿರುವುದರಿಂದ ವನ್ಯ ಪ್ರಾಣಿಗಳು ನಾಡಿನತ್ತ ಬರಲು ಪ್ರಾರಂಭಿಸಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್ ಕಡೆಗೆ ತೆರಳುವ ರಸ್ತೆಯಲ್ಲಿ ಕಾಡಿನಿಂದ ಹೊರಬಂದ ಆನೆಯೊಂದು ರಸ್ತೆಬದಿ ನಿಂತಿದ್ದ ಹಳ್ಳದ ನೀರನ್ನು ಕುಡಿದು ದಣಿವಾರಿಸಿಕೊಂಡಿತ್ತು. ಇನ್ನು ಆನೆ ನೀರು ಕುಡಿಯುವುದನ್ನು ವಾಹನ ಸವಾರರೋರ್ವ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿತ್ತು.
ಆಗೊಮ್ಮೆ ಈಗೊಮ್ಮೆ ಕಾಣಸಿಗುತ್ತವೆ ಅಚ್ಚರಿಗಳು
ಚಾಮರಾಜನಗರ ಜಿಲ್ಲೆಯಲ್ಲಿರುವ ಅರಣ್ಯಗಳು ವಿಭಿನ್ನವಾಗಿದ್ದು, ಇಲ್ಲಿ ಆಗೊಮ್ಮೆ ಈಗೊಮ್ಮೆ ನಮಗೆ ಅಚ್ಚರಿಗಳು ಲಭ್ಯವಾಗುತ್ತಲೇ ಇರುತ್ತವೆ. ಇಲ್ಲಿ ಹಲವು ಬಗೆಯ ಜೀವರಾಶಿಗಳಿದ್ದು, ಅವು ಎಲ್ಲ ಸಂದರ್ಭದಲ್ಲಿ ನಮ್ಮ ಗಮನಕ್ಕೆ ಬಾರದಿದ್ದರೂ ಅವುಗಳನ್ನು ಹುಡುಕಿ ಹೋಗುವವರಿಗೆ ಮಾತ್ರ ವಿಸ್ಮಯ ಕಾದಿರುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ ಅಡ್ಡಾಡಿದರೆ ನಮಗೆ ಇಲ್ಲಿನ ಅರಣ್ಯ ಮತ್ತು ಅದರೊಳಗಿನ ವನ್ಯ ಜೀವಿ ಸಂಪತ್ತಿನ ಅರಿವಾಗುತ್ತದೆ. ಈ ಅರಣ್ಯದೊಳಗೆ ಒಂದು ಸುತ್ತು ಬಂದರೆ ಇಲ್ಲಿರುವ ಅಪರೂಪದ ಜೀವಗಳು ನಮ್ಮ ಗಮನಸೆಳೆಯುತ್ತವೆ. ಬಂಡೀಪುರ, ಮಲೆಮಹದೇಶ್ವರ ಬೆಟ್ಟ, ಬಿಳಿಗಿರಿರಂಗನಬೆಟ್ಟ, ಹಿಮವದ್ ಗೋಪಾಲ ಸ್ವಾಮಿ ಬೆಟ್ಟಗಳು ಹಸಿರು ಅರಣ್ಯದ ಬೆಟ್ಟಗುಡ್ಡಗಳ ಸಿರಿಸಂಪತ್ತಿನೊಂದಿಗೆ ನಮ್ಮನ್ನು ಸೆಳೆಯುತ್ತವೆ.
ಇನ್ನು ಈ ವನ್ಯಪ್ರದೇಶದಲ್ಲಿ ಕರಡಿ, ಹುಲಿ, ಚಿರತೆ, ಕಾಡುಕೋಣಗಳು, ಅಪರೂಪದ ಚಿಟ್ಟೆ, ಜಿಂಕೆ, ಸಾರಂಗಿಗಳು ಸೇರಿದಂತೆ ಹಲವು ಜೀವ ಸಂಕುಲಗಳು ಇಲ್ಲಿದ್ದು, ಇವುಗಳಿಗೆಲ್ಲ ಆಸರೆ ನೀಡಿರುವುದು ಇಲ್ಲಿನ ಅರಣ್ಯ ಪ್ರದೇಶಗಳಾಗಿವೆ. ಅದರಲ್ಲೂ ಬಂಡೀಪುರ, ಬಿಳಿಗಿರಿರಂಗನಬೆಟ್ಟ, ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶಗಳು ನಿಸರ್ಗ ಪ್ರೇಮಿಗಳಿಗೆ ಮತ್ತು ವನ್ಯಜೀವಿಗಳ ಕುರಿತಂತೆ ಅಧ್ಯಯನ ಮಾಡುವವರಿಗೆ ಸೂಕ್ತಪ್ರದೇಶವಾಗಿದೆ. ಅಧ್ಯಯನ ಮಾಡುವಾಗಲೆಲ್ಲ ಅಪರೂಪದ ಜೀವರಾಶಿಗಳು ಪತ್ತೆಯಾಗಿರುವುದು ಇಲ್ಲಿನ ವಿಶೇಷತೆಯಾಗಿದೆ..
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications