ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಂಡ್ಲುಪೇಟೆ ಬಳಿ ಅರಣ್ಯ ಸಿಬ್ಬಂದಿ ಕೈ ಕಚ್ಚಿ ಪರಾರಿಯಾದ ಹುಲಿ

|
Google Oneindia Kannada News

ಚಾಮರಾಜನಗರ, ಫೆಬ್ರವರಿ 02 : ಹುಲಿ ಸೆರೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಕೈಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಯೋಜನೆಯ ಗೋಪಾಲಸ್ವಾಮಿಬೆಟ್ಟ ವಲಯದ ಹಿರೀಕೆರೆ ಸಮೀಪ ಹುಲಿಯೊಂದು ಕಾಣಿಸಿಕೊಂಡಿತ್ತಲ್ಲದೆ, ಮುದುಕಪ್ಪ ಎಂಬುವರ ಮೇಲೆ ದಾಳಿ ಮಾಡಲು ಮುಂದಾಗಿತ್ತು. ಈ ಸಂದರ್ಭ ಅಕ್ಕಪಕ್ಕದ ಜಮೀನುಗಳ ರೈತರು ಕಲ್ಲು ತೂರಿ ಹುಲಿಯನ್ನು ಓಡಿಸಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಎಚ್.ಡಿ.ಕೋಟೆಯಲ್ಲಿ ಮೂವರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆ ಎಚ್.ಡಿ.ಕೋಟೆಯಲ್ಲಿ ಮೂವರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆ

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಪಟಾಕಿ ಸಿಡಿಸಿ ಹುಲಿಯ ಹುಡುಕಾಟ ನಡೆಸಿದ್ದು, ಈ ವೇಳೆ ಹುಲಿ ಸುಳಿವು ಪತ್ತೆಯಾಗಲಿಲ್ಲ. ಹೀಗಾಗಿ ಅದರ ಸೆರೆಗೆ ಬೋನು ಅಳವಡಿಸಲು ಹೆಜ್ಜೆಯ ಜಾಡು ಹುಡುಕುವ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ ಮುಂದಾಗಿತ್ತು.

Tiger prowling in Gundlupet injures forest personnel

ಸೆರೆ ಹಿಡಿಯುವ ಸಲುವಾಗಿ, ಹುಲಿ ಕಾಡಿಗೆ ಹಿಂದಿರುಗಿರುವ ಬಗ್ಗೆ ಖಚಿತಪಡಿಸಿಕೊಂಡು, ಬೋನು ಅಳವಡಿಸಿ ವಾಪಸ್ ತೆರಳುತ್ತಿದ್ದಾಗ ಅರಣ್ಯ ವೀಕ್ಷಕ ರಾಮು ಎಂಬುವರ ಮೇಲೆ ಎರಗಿದ್ದು ಈ ಸಂದರ್ಭ ಅವರು ಜೋರಾಗಿ ಕಿರುಚಿದ್ದಾರೆ. ಆಗ ಅವರ ಕೈಯನ್ನು ಕಚ್ಚಿ ಪೊದೆಗಳತ್ತ ಓಡಿಹೋಗಿದೆ.

ಎಚ್.ಡಿ.ಕೋಟೆ ತಾಲೂಕಿನಲ್ಲಿ ಹುಲಿ ದಾಳಿಗೆ ಮೂರನೇ ಬಲಿ : ಕಂಡಲ್ಲಿ ಗುಂಡಿಕ್ಕಲು ಆದೇಶ ಎಚ್.ಡಿ.ಕೋಟೆ ತಾಲೂಕಿನಲ್ಲಿ ಹುಲಿ ದಾಳಿಗೆ ಮೂರನೇ ಬಲಿ : ಕಂಡಲ್ಲಿ ಗುಂಡಿಕ್ಕಲು ಆದೇಶ

ಕೂಡಲೇ ಗಾಯಾಳುವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸುತ್ತಮುತ್ತಲಿನ ಜನ ಆಗಮಿಸಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸ್ ರಕ್ಷಣೆ ಪಡೆಯಲಾಯಿತು. ಹುಲಿ ಗ್ರಾಮದ ವ್ಯಾಪ್ತಿಯಲ್ಲೇ ಅಡಗಿ ಕುಳಿತಿರುವ ಸಾಧ್ಯತೆ ಇರುವುದರಿಂದ ಸೆರೆ ಹಿಡಿಯಲು ನಾಗರಹೊಳೆಯಿಂದ ಸಾಕಾನೆಗಳನ್ನು ಕರೆಯಿಸಿ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಗುಂಡುಮೇಟ್ಲು ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಹುಲಿ ದಾಳಿ:ವ್ಯಕ್ತಿ ಸಾವು ಗುಂಡುಮೇಟ್ಲು ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಹುಲಿ ದಾಳಿ:ವ್ಯಕ್ತಿ ಸಾವು

Tiger prowling in Gundlupet injures forest personnel

ಸ್ಥಳಕ್ಕೆ ಅರಣ್ಯ ಇಲಾಖೆಯ ಪಶುವೈದ್ಯ ಡಾ.ನಾಗರಾಜು, ಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯಾಧಿಕಾರಿ ಪುಟ್ಟಸ್ವಾಮಿ ಸೇರಿದಂತೆ ಹುಲಿ ಸಂರಕ್ಷಣಾ ವಿಶೇಷ ದಳದ ಸಿಬ್ಬಂದಿ ತೆರಳಿದ್ದರು.

Tiger prowling in Gundlupet injures forest personnel

ಮೈಸೂರು ಜಿಲ್ಲೆಯಲ್ಲಿ ಕೂಡ ಹುಲಿಯ ಉಪಟಳ ಹೆಚ್ಚಾಗಿದ್ದು, ಮೂವರನ್ನು ಸಾಯಿಸಿದ್ದ ಹುಲಿಯನ್ನು ಹೆಗ್ಗಡೆ ದೇವನ ಕೋಟೆಯ ಬಳಿ ಶುಕ್ರವಾರ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹುಲಿ ಜೀವಂತ ಸೆರೆ ಸಿಗದಿದ್ದರೆ ಗುಂಡಿಟ್ಟು ಕೊಲ್ಲುವಂತೆ ಜಿಲ್ಲಾಡಳಿತ ಆದೇಶಿಸಿತ್ತು.

English summary
Tiger on prowl in Hangala village in Gundlupet taluk in Chamarajanagar district has injured a forest personnel when they had gone to capture the beast. In Mysuru another Tiger which had killed 3 people has been captured by forest department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X