ಕೆ.ಜಿ. ಟೊಮೆಟೋಗೆ 4 ರೂ.! ರೈತರ ಗೋಳು ಕೇಳೋರ್ಯಾರು?!
ಚಾಮರಾಜನಗರ, ಫೆಬ್ರವರಿ 20: ಈ ಬಾರಿ ಉತ್ತಮ ಹಿಂಗಾರು ಮಳೆಯಾದ ಕಾರಣ ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯಲ್ಲಿ ರೈತರು ಹುಮ್ಮಸ್ಸಿನಿಂದ ಟೊಮೆಟೋ ಬೆಳೆ ಬೆಳೆದಿದ್ದರು. ಆದರೆ ಫಸಲು ಬರುವ ಹೊತ್ತಿಗೆ ನಿರೀಕ್ಷೆಗೂ ಮೀರಿ ರೈತರು ಬೆಳೆ ಬೆಳೆದಿದ್ದರಿಂದ ಬೇಡಿಕೆ ಕಡಿಮೆಯಾಗಿ ದರ ಪಾತಾಳಕ್ಕೆ ಕುಸಿದಿದೆ. ಇದರಿಂದ ರೈತರು ಆತಂಕ ಪಡುವಂತಾಗಿದೆ.
ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತವಾದ್ದರಿಂದ ರೈತರಿಂದ ಟೊಮೆಟೋ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ. ಇದರಿಂದಾಗಿ ಒಂದು ಕೆಜಿಗೆ 2ರಿಂದ 4 ರೂ.ಗೆ ಮಾರುವಂತಾಗಿದೆ. ರೈತರಿಗೆ ಮಾಡಿದ ಖರ್ಚು ಇರಲಿ ಕೊಯ್ಲು ಮಾಡಿದ ಖರ್ಚು ಕೂಡ ಬರದಂತಾಗಿದೆ.
ರೈತರು ಕೃಷಿ ಮಾಡುವ ಸಂದರ್ಭ ಅಂದರೆ ಎರಡು ತಿಂಗಳ ಹಿಂದೆ ಕೆಜಿಗೆ 40 ರೂ. ಇತ್ತು. ಹೀಗಾಗಿ ಹುರುಪಿನಿಂದ ರೈತರು ಸಾವಿರಾರು ರೂಪಾಯಿ ಬಂಡವಾಳ ಹಾಕಿ ಕೃಷಿ ಮಾಡಿದ್ದರು. ಆದರೆ ಫಸಲು ಬರುವ ವೇಳೆಗೆ ಎಲ್ಲವೂ ಉಲ್ಟಾ ಆಗಿದೆ. ರೈತರ ನಿರೀಕ್ಷೆ ಹುಸಿಯಾಗಿದೆ. ಗುಂಡ್ಲುಪೇಟೆ ತಾಲೂಕುವೊಂದರಲ್ಲೇ ಸುಮಾರು 1000 ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೋ ಬೆಳೆಯಲಾಗಿದೆ. ರೈತರಿಗೆ ಒಂದು ಎಕರೆ ಟೊಮೆಟೋ ಬೆಳೆಯಲು ಸುಮಾರು 40ಸಾವಿರ ರೂ. ಖರ್ಚಾಗುತ್ತದೆ.

ರೈತರು ಕೊಯ್ಲು ಮಾಡಿ ಅದನ್ನು ಮಾರುಕಟ್ಟೆಗೆ ಸಾಗಿಸುವ ವೇಳೆಗೆ ಸಾಕಷ್ಟು ಖರ್ಚು ಬೀಳುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಕೇಳುತ್ತಿರುವುದರಿಂದ ಸಾಗಣೆ ವೆಚ್ಚವೇ ಸಿಗದೆ ರೈತರು ಖಾಲಿ ಕೈಯ್ಯಲ್ಲಿ ಮರಳುವಂತಾಗಿದೆ. ಇದೀಗ ಟೊಮೆಟೋ ಬೆಳೆದ ರೈತರು ಕಣ್ಣೀರು ಹಾಕುತ್ತಿದ್ದಾರೆ. ಕೆಲವರು ಕೊಯ್ಲು ಮಾಡಿ ಮಾರುಕಟ್ಟೆಗೆ ತಂದು ಉತ್ತಮ ಬೆಲೆ ಸಿಗದ ಕಾರಣ ರಸ್ತೆ ಬದಿಗೆ ಸುರಿಯುತ್ತಿದ್ದಾರೆ. ಮತ್ತೆ ಕೆಲವರು ಕೊಯ್ಲು ಮಾಡದೆ ದನಗಳನ್ನು ಬಿಟ್ಟು ಮೇಯಿಸುತ್ತಿದ್ದಾರೆ. ಒಟ್ಟಾರೆ ಟೊಮೆಟೋ ಬೆಳೆದ ಬೆಳೆಗಾರನ ಬದುಕು ಮಾತ್ರ ಕಣ್ಣೀರಾಗುತ್ತಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications