ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್ಗೆ ಹೋದ ಬಾಲಕ ಕಟ್ಟಡದಿಂದ ಬಿದ್ದು ಸಾವು
ಚಾಮರಾಜನಗರ, ಜನವರಿ 02: ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿದ್ಯಾರ್ಥಿನಿಯರ ಕಾಲೇಜು ವಸತಿ ನಿಲಯದ ಕಟ್ಟಡದಿಂದ ವಿದ್ಯಾರ್ಥಿಯೊಬ್ಬ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್(17) ಮೃತ ದುರ್ದೈವಿ.
ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದ ಮಣಿತ್ ಇಂದು(ಜನವರಿ 02) ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮಧ್ಯರಾತ್ರಿ 2 ಗಂಟೆಯಲ್ಲಿ ಬಿದ್ದ ಮಣಿತ್ನನ್ನು ಬೆಳಗ್ಗೆ 8 ಗಂಟೆಯಲ್ಲಿ ಸಹ ವಿದ್ಯಾರ್ಥಿಗಖು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಬಂದ ಬಾಲಕ ಸಾವು
ಒಂದೇ ಆವರಣದಲ್ಲಿ ವಿದ್ಯಾರ್ಥಿನಿಯರ ಹಾಗೂ ವಿದ್ಯಾರ್ಥಿಗಳ ಪದವಿ ಪೂರ್ವ ಕಾಲೇಜಿನ ಪ್ರತ್ಯೇಕ ವಸತಿ ನಿಲಯಗಳಿವೆ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಮಣಿತ್ ಹೋದ ಉದ್ದೇಶವೇನು ಗೊತ್ತಿಲ್ಲ, ವಿದ್ಯಾರ್ಥಿನಿಯೋರ್ವಳ ಕೊಠಡಿಯ ಕಿಟಕಿ ಬಳಿಯಿಂದ ಮಣಿತ್ ಬಿದ್ದಿದ್ದಾನೆ. ಮಧ್ಯರಾತ್ರಿಯಲ್ಲಿ ಮಣಿತ್ಗೆ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಕೆಲಸವೇನಿತ್ತು..? ಮಧ್ಯರಾತ್ರಿ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಅಕ್ರಮವಾಗಿ ಪ್ರವೇಶಿಸಿದ್ದು ಹೇಗೆ?
ವಾಚ್ ಮೆನ್ಗಳು ಗಮನಿಸಲಿಲ್ಲವೇ? ಪ್ರಿನ್ಸಿಪಾಲ್ ಮುನ್ನೆಚ್ಚರಿಕೆ ತೆಗೆದುಕೊಂಡಿರಲಿಲ್ಲವೇ? ಯಾರು ಬೇಕಾದರೂ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಮಧ್ಯರಾತ್ರಿ ಪ್ರವೇಶಿಸಬಹುದೇ? ಹಾಗಿದ್ದಲ್ಲಿ ಇಲ್ಲಿ ತಂಗಿರುವ ವಿದ್ಯಾರ್ಥಿಗಳ ರಕ್ಷಣೆ ಹೇಗೆ? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.
ವಿದ್ಯಾರ್ಥಿನಿಯರನ್ನ ಮಧ್ಯರಾತ್ರಿ ನೋಡುವ ಕೆಟ್ಟ ಚಟವೇ?
ಮಧ್ಯರಾತ್ರಿ ಬಿದ್ದು ನರಳಾಡುತ್ತಿದ್ದರೂ ಯಾರ ಗಮನಕ್ಕೂ ಬಂದಿಲ್ಲವೆಂದರೆ ಅಲ್ಲಿನ ವ್ಯವಸ್ಥೆ ಹೇಗಿದೆ ಎಂಬ ಅನುಮಾನಗಳು ಕಾಡುತ್ತಿವೆ. ಎರಡನೇ ಮಹಡಿ ಏರಿ ವಿದ್ಯಾರ್ಥಿನಿ ಕೊಠಡಿ ಬಳಿ ತಲುಪಿದ ಕಾರಣಾವಾದ್ರೂ ಏನು? ವಿದ್ಯಾರ್ಥಿನಿಯರನ್ನ ಮಧ್ಯರಾತ್ರಿ ನೋಡುವ ಕೆಟ್ಟ ಚಟವೇ? ಅಥವಾ ಪ್ರೇಮ ಪ್ರಸಂಗವೇ? ತನ್ನಿಷ್ಟದಂತೆ ನಡೆಯಲಿಲ್ಲವೆಂದು ಬಿದ್ದು ಆತ್ಮಹತ್ಯೆ ಮಾಡಿಕೊಂಡನೇ? ಅಥವಾ ಆಕಸ್ಮಿಕವಾಗಿ ಜಾರಿ ಬಿದ್ದನೇ? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಘಟನೆ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎನ್ನುವುದು ಸ್ಥಳೀಯರ ಹಾಗೂ ಪೋಷಕರ ಆಗ್ರಹವಾಗಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications