ಕಿಚ್ಚುಗುತ್ತಿ ಮಾರಮ್ಮ ದೇಗುಲ ಸರ್ಕಾರಕ್ಕೊಪ್ಪಿಸಲು ಟ್ರಸ್ಟಿಗಳ ಒಪ್ಪಿಗೆ
ಚಾಮರಾಜನಗರ, ಡಿಸೆಂಬರ್ 26: ವಿಷ ಪ್ರಸಾದ ಸೇವನೆಯಿಂದ ಸುದ್ದಿಗೆ ಗ್ರಾಸವಾದ ಮತ್ತು17 ಮಂದಿಯ ಪ್ರಾಣ ಬಲಿ ಪಡೆದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಆಡಳಿತವನ್ನು ಸರ್ಕಾರ ಮುಜರಾಯಿ ಇಲಾಖೆಯ ಸುಪರ್ದಿಗೆ ವಹಿಸಲು ಮುಂದಾದ ಬೆನ್ನಲ್ಲೇ ಸರ್ಕಾರದ ವಶಕ್ಕೆ ನೀಡಲು ಟ್ರಸ್ಟಿಗಳು ಒಪ್ಪಿಗೆ ಸೂಚಿಸಿ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಸೂಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯತ್ತ ಸಾಗುತ್ತಿದ್ದು, ಇಲ್ಲಿಗೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಆದಾಯವೂ ಹೆಚ್ಚಾಗಿತ್ತು.
ಈ ಆದಾಯ ಹಲವರ ಕಣ್ಣನ್ನು ಕೆಂಪು ಮಾಡಿತ್ತಲ್ಲದೆ, ದೇವಾಲಯವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು ಹಣ ಲಪಟಾಯಿಸುವ ಸಂಚು ನಡೆಸಿದ್ದರು. ಈ ಸಂಬಂಧ ಆರಂಭವಾದ ಜಟಾಪಟಿ ಪ್ರಸಾದಕ್ಕೆ ವಿಷ ಬೆರೆಸುವಷ್ಟರ ಮಟ್ಟಿಗೆ ಬಂದು ನಿಂತಿತು. ಯಾವಾಗ ದುರಂತ ನಡೆಯಿತೋ ದೇವಾಲಯದ ಬಗೆಗಿನ ಮಾಹಿತಿಗಳು ಹೊರ ಬರತೊಡಗಿದ್ದವು.ಈ ದೇವಾಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತದೆ ಎಂಬುದು ಹೊರಬಂದಿತು.
ಇದೀಗ ಪ್ರಸಾದಕ್ಕೆ ವಿಷ ಬೆರೆಸಿ ಭಕ್ತರ ಸಾವಿಗೆ ಕಾರಣನಾದ ಕಿಚ್ಚುಗುತ್ತಿ ದೇವಾಲಯದ ಟ್ರಸ್ಟ್ ನ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ ಪ್ರಮುಖ ಆರೋಪಿಯಾಗಿ ಮೈಸೂರು ಕಾರಾಗೃಹದಲ್ಲಿದ್ದಾರೆ. ಇನ್ನುಳಿದ ಎಂಟು ಮಂದಿ ಟ್ರಸ್ಟಿಗಳು ಒಮ್ಮತದಿಂದ ಸಭೆ ನಡೆಸಿ, ದೇವಾಲಯದ ಆಡಳಿತವನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ತಮ್ಮದೇನು ತಕರಾರು ಆಕ್ಷೇಪ ಇಲ್ಲ ಎಂದು ಪತ್ರ ಬರೆದು ಹನೂರು ಶಾಸಕ ಆರ್. ನರೇಂದ್ರರವರ ಬಳಿ ನೀಡಿದ್ದಾರೆ ಎನ್ನಲಾಗಿದೆ.

ಖಚಿತಪಡಿಸಿದ ಶಾಸಕ ಆರ್. ನರೇಂದ್ರ
ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಟ್ರಸ್ಟಿಗಳು ದೇವಾಲಯ ಆಡಳಿತವನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ತಮ್ಮ ಸಮ್ಮತಿಯನ್ನು ಸೂಚಿಸಿರುವ ಪತ್ರ ಟ್ರಸ್ಟಿಗಳು ತಮಗೆ ನೀಡಿದ್ದನ್ನು ಖಚಿತ ಪಡಿಸಿದ ಹನೂರು ಶಾಸಕ ಆರ್. ನರೇಂದ್ರ ಖಚಿತ ಪಡಿಸಿದ್ದಾರೆ.

ಬ್ಯಾಂಕ್ ಖಾತೆಯಲ್ಲಿ 70 ಲಕ್ಷ
ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಆಡಳಿತ ನಡೆಸುತ್ತಿದ್ದ ಟ್ರಸ್ಟ್ ನವರ ಬ್ಯಾಂಕ್ ಖಾತೆಯಲ್ಲಿ ಸುಮಾರು 60 ರಿಂದ 70 ಲಕ್ಷ ರೂಪಾಯಿಗಳಿದ್ದು, ಅದನ್ನು ಸಹ ಸರ್ಕಾರವು ವಶಕ್ಕೆ ಪಡೆಯಲಿದ್ದು, ಇದರ ಜೊತೆಗೆ ದೇವಾಲಯದ ಚಿನ್ನಾಭರಣಗಳು ಟ್ರಸ್ಟ್ ಕಾರ್ಯದರ್ಶಿ ಹಾಗೂ ವಕೀಲ ಶಶಿಬಿಂಬರವರ ಬಳಿಯಿದ್ದು, ಅದನ್ನು ಅವರು ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿದ್ದಾರೆ, ಅದನ್ನು ಸಹ ಸರ್ಕಾರ ವಶಕ್ಕೆ ಪಡೆದುಕೊಂಡು ದೇವಾಲಯದ ಆಡಳಿತ ಮತ್ತು ಪೂಜಾ ಕೈಕಾರ್ಯಗಳು ನಡೆಸಲು ಮುಜರಾಯಿ ಇಲಾಖೆಗೆ ವಹಿಸುವ ಸಾಧ್ಯತೆಯಿದೆ.

ಚರ್ಚೆ ನಡೆದ ಬಳಿಕ ನಿರ್ಧಾರ
ಈ ನಡುವೆ ದೇವಾಲಯವನ್ನು ಈಗಾಗಲೇ ಜಿಲ್ಲಾಡಳಿತ ವಶಪಡಿಸಿಕೊಂಡಿದ್ದು, ಅದನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಬೇಕೋ ಆಥವಾ ಮುಜರಾಯಿ ಇಲಾಖೆಗೆ ನೀಡಬೇಕೋ ಎನ್ನುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದ ಬಳಿಕ ನಿರ್ಧಾರ ಕೈಗೊಳ್ಳಬೇಕಾಗಿದೆ.

ಇದೀಗ ಸರ್ಕಾರದ ವಶದಲ್ಲಿದೆ
ಸದ್ಯ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಆಡಳಿತ ಇದೀಗ ಸರ್ಕಾರದ ವಶದಲ್ಲಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ದೇವಾಲಯದ ನಿರ್ವಹಣೆ ಯಾರಿಗೆ ವಹಿಸಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications