ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಬಗ್ಗೆ ಸುಳ್ಳುಸುದ್ದಿ ಹಬ್ಬಿಸಿದ ಇಬ್ಬರ ಬಂಧನ

|
Google Oneindia Kannada News

ಚಾಮರಾಜನಗರ, ಮಾರ್ಚ್ 14: ಮಾರಕ ಕೊರೊನಾ ವೈರಸ್‌ ಆತಂಕ ರಾಜ್ಯದಲ್ಲಿ ಕಾಣಿಸಿಕೊಂಡಿದೆ. ಈ ಆತಂಕದ ನಡುವೆ, ಇಬ್ಬರಲ್ಲಿ ಕೊರೊನಾ ಸೋಂಕು ತಗುಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಇಬ್ಬರನ್ನು ಚಾಮರಾಜನಗರ ಪೋಲಿಸರು ಬಂಧಿಸಿದ್ದಾರೆ.

ಸಾಮಾಜಿಕ ತಾಣ ವಾಟ್ಸ್ ಆಪ್‌ ನಲ್ಲಿ ಗುಂಡ್ಲುಪೇಟೆ ಮತ್ತು ನಂಜನಗೂಡಿನ ವ್ಯಕ್ತಿಗಳಿಬ್ಬರಲ್ಲಿ ಕೊರೊನಾ ಸೋಂಕು ತಗುಲಿದೆ ಎಂದು ಈ ಇಬ್ಬರು ಪೋಸ್ಟ್‌ ಮಾಡಿದ್ದರು.

ಕೊರೊನಾ ವೈರಸ್: 4 ದಶಕಗಳ ಹಿಂದೆನೇ ನುಡಿದಿದ್ದ ಕರಾರುವಾಕ್ ಭವಿಷ್ಯಕೊರೊನಾ ವೈರಸ್: 4 ದಶಕಗಳ ಹಿಂದೆನೇ ನುಡಿದಿದ್ದ ಕರಾರುವಾಕ್ ಭವಿಷ್ಯ

ಗುಂಡ್ಲುಪೇಟೆಯ ಪುರುಷ ಹಾಗೂ ನಂಜನಗೂಡಿನ ಮಹಿಳೆಯೊಬ್ಬರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ವಾಟ್ಸ್ ಆಪ್‌ ಮತ್ತು ಫೇಸ್‌ ಬುಕ್‌ ನಲ್ಲಿ ಹಂಚಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹರಿದಾಡಿತ್ತು. ಈ ವಿಷಯ ಚಾಮರಾಜನಗರ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಕೂಡಲೇ ಪೋಲೀಸ್‌ ದೂರು ದಾಖಲಿಸುವಂತೆ ಸೂಚನೆ ನೀಡಿದ್ದರು.

Two Arrested For Spreading False News About Coronavirus In Chamarajanagar

ಆರೋಗ್ಯಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಕ್ಷಿಪ್ರ ಕ್ರಮ ಕೈಗೊಂಡ ಪೊಲೀಸರು ಚಾಮರಾಜನಗರ ತಾಲೂಕಿನ ಕಾವುದವಾಡಿಯ ನಿವಾಸಿ ಲೋಕೇಶ್ ಮತ್ತು ನಂಜನಗೂಡು ಪಟ್ಟಣದ ನೀಲಕಂಠನಗರದ ನಿವಾಸಿ ನಾಗೇಂದ್ರ ಎಂಬಿಬ್ಬರನ್ನು ಬಂಧಿಸಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

English summary
Police have arrested two persons for spreading false news on coronavirus. They have posted false news on social media,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X