ಗಾಂಜಾ ಹಣಕ್ಕಾಗಿ ವ್ಯಕ್ತಿಯನ್ನು ಹತೈಗೈದಿದ್ದ ಹಂತಕರ ಬಂಧನ
ಚಾಮರಾಜನಗರ, ಜುಲೈ 2: ಗಾಂಜಾ ವಿಚಾರಕ್ಕಾಗಿ ವ್ಯಕ್ತಿಯೊಬ್ಬನನ್ನು ಹತ್ಯೆಗೈದು ಪರಾರಿಯಾಗಿದ್ದ ಹಂತಕರಿಬ್ಬರನ್ನು ಹನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಣಗಳ್ಳಿ ಗ್ರಾಮದ ಶಫೀವುಲ್ಲಾ ಶರೀಫ್, ಬಂಡಳ್ಳಿ ಗ್ರಾಮದ ಫರ್ಹತ್ ಖಾನ್ ಬಂಧಿತ ಹಂತಕರು.
ಇವರಿಂದ ಮಣಗಳ್ಳಿ ಗ್ರಾಮದ ವೆಂಕಟಯ್ಯ ಎಂಬಾತ ಗಾಂಜಾ ಪಡೆದು ಅದರ ಐವತ್ತು ಸಾವಿರ ರೂಪಾಯಿಗಳನ್ನು ಕೊಟ್ಟಿರಲಿಲ್ಲ. ಕಳೆದ ಆರು ತಿಂಗಳಿನಿಂದ ಈ ಸಂಬಂಧ ಇವರ ನಡುವೆ ಜಗಳಗಳು ನಡೆಯುತ್ತಿತ್ತು ಎನ್ನಲಾಗಿದೆ. ಅಲ್ಲದೆ ಇವರಿಗೆ ಸಿಗದಂತೆ ವೆಂಕಟಯ್ಯ ತಲೆ ತಪ್ಪಿಸಿಕೊಂಡು ಓಡಾಡುತ್ತಿದ್ದನು.
ಕಳೆದ ಜೂನ್ 18ರಂದು ಆಕಸ್ಮಿಕವಾಗಿ ಸಿಕ್ಕ ವೆಂಕಟಯ್ಯ ಅವರನ್ನು ಶಫೀವುಲ್ಲ ಮತ್ತು ಫರ್ಹತ್ ಖಾನ್ ಸೇರಿ ಕತ್ತು ಕೊಯ್ದು ಕೊಲೆ ಮಾಡಿ ಮಣಗಳ್ಳಿ-ಅಲಗುಮೂಲೆ ನಡುವೆ ಇರುವ ಸೋಲಾರ್ ಪ್ಲಾಂಟ್ ಹತ್ತಿರದ ಜಮೀನಿನಲ್ಲಿ ಎಸೆದು ಹೋಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಎಸ್ಪಿ ಎಚ್.ಡಿ.ಆನಂದ ಕುಮಾರ್ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್, ಕೊಳ್ಳೇಗಾಲ ಡಿ.ಎಸ್.ಪಿ ಪುಟ್ಟಮಾದಯ್ಯ ರವರ ಮಾರ್ಗದರ್ಶನದಲ್ಲಿ ಹನೂರು ಠಾಣೆಯ ಸಬ್ ಇನ್ಸ್ ಪೆಕ್ಟರ್ ಮೋಹಿತ್ ಸಹದೇವ್, ಪಿ.ಎಸ್.ಐ ನಾಗೇಶ್ ಹಾಗೂ ಸಿಬ್ಬಂದಿ ಸಿದ್ದೇಶ್ ಕುಮಾರ್, ಮಲ್ಲಿಕಾರ್ಜುನ, ವೀರಭದ್ರಸ್ವಾಮಿ, ಪ್ರದೀಪ್ ಕುಮಾರ್, ಶೆಹೆನ್ ಷಾ ಮುಖಂದರ್, ರಾಜು, ಭಗೀರಥ ಅವರನ್ನೊಳಗೊಂಡ ತಂಡ ರಚಿಸಿ ತನಿಖೆಗೆ ಸೂಚಿಸಿದ್ದರು. ತನಿಖೆ ಆರಂಭಿಸಿದ ತಂಡ ಆರೋಪಿಗಳಾದ ಶಫೀವುಲ್ಲ ಮತ್ತು ಫರ್ಹತ್ ಖಾನ್ ಎಂಬಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications