ಚಾಮರಾಜನಗರದಲ್ಲಿ ಹಸುಗಳ ನಿಗೂಢ ಸಾವು: ಕಂಗಾಲಾದ ರೈತ
ಚಾಮರಾಜನಗರ, ಅಕ್ಟೋಬರ್ 11: ಹಾಲು ಕರೆಯುತ್ತಿದ್ದ ಹಸುಗಳೆರಡು ನಿಗೂಢವಾಗಿ ಸಾವನ್ನಪ್ಪಿರುವ ಕಾರಣ ಮಾಲೀಕರು ಆತಂಕಗೊಂಡಿರುವ ಘಟನೆ ತಾಲೂಕಿನ ಚನ್ನಂಜಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.
ರೈತ ರಾಜಪ್ಪ ಎಂಬುವರು ಎರಡು ಹಸುಗಳನ್ನು ಸಾಕಿದ್ದು ಇವು ಹಾಲು ನೀಡುತ್ತಿದ್ದರಿಂದ ಅದನ್ನೇ ನಂಬಿ ಜೀವನ ಸಾಗಿಸುತ್ತಿದ್ದರು. ಆದರೆ ಇಂತಹ ಹಸುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪಿರುವುದು ಸಂಶಯಕ್ಕೆಡೆ ಮಾಡಿದೆ. ಈ ಹಸುಗಳು ಎಚ್ಎಫ್ ತಳಿಯದ್ದಾಗಿದ್ದು ಸುಮಾರು 50 ಸಾವಿರ ಬೆಲೆಬಾಳುತ್ತಿದ್ದವು.

ಮೂರು ಹಸುಗಳನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಬೆಳಗ್ಗೆ ಮೇಯಲು ಹೋಗಿದ್ದ ಹಸುಗಳು ಸಂಜೆ ಮನೆಗೆ ಮರಳಿದ್ದವು. ಆ ನಂತರ ಹಾಲು ಕರೆದು ಮೇವು ಹಾಕಿದ್ದರು. ಮುಂಜಾನೆ ನೋಡಿದಾಗ ಎರಡು ಹಸುಗಳು ಮೃತಪಟ್ಟಿದ್ದರೆ, ಮತ್ತೊಂದು ಹಸು ಗಂಭೀರವಾಗಿತ್ತು.
ಈ ಎರಡು ಹಸುಗಳು ಗರ್ಭಧರಿಸಿದ್ದವಲ್ಲದೆ, ಇನ್ನು ಕೆಲವೇ ತಿಂಗಳಲ್ಲಿ ಕರು ಹಾಕುವಂತಿದ್ದವು. ಸ್ಥಳಕ್ಕೆ ತೆರಳಿರುವ ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದು ಇದರ ವರದಿ ಬಂದ ಬಳಿಕವಷ್ಟೆ ಸಾವಿಗೆ ಕಾರಣ ತಿಳಿಯಲಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications