ಬಂಡೀಪುರ ಅರಣ್ಯದಲ್ಲಿ ಇಬ್ಬರು ಪ್ರಾಣಿ ಬೇಟೆಗಾರರ ಬಂಧನ
ಚಾಮರಾಜನಗರ, ಜೂನ್ 08 : ಪ್ರಾಣಿ, ಪಕ್ಷಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದಲ್ಲಿ ಸಿಕ್ಕಿ ಬಿದ್ದಿದ್ದಾರೆ.
ಬಂಡೀಪುರ ಅರಣ್ಯದಲ್ಲಿ ಬೇಟೆಯಾಡುವಾಗ ಕೂತನೂರು ಗ್ರಾಮದ ಸಿದ್ದರಾಜು( 28) ಭೀಮನಬೀಡು ಮಹೇಶ್ (28) ಎನ್ನುವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಬ್ಬರು ಸೇರಿದಂತೆ ಒಟ್ಟು ಎಂಟು ಮಂದಿ ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿ ಹೊಂಚು ಹಾಕಿ ಕುಳಿತು ಜಿಂಕೆ, ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ.[ಗೋಪಿನಾಥಂ ಅರಣ್ಯ ವಲಯದಲ್ಲಿ ಜಿಂಕೆ ಬೇಟೆಗಾರರ ಬಂಧನ]

ಈಗಾಗಲೇ ನವಿಲು, ಕೌಜಲ ಹಕ್ಕಿ, ಕಾಡುಕೋಳಿ ಮುಂತಾದವುಗಳನ್ನು ಬೇಟೆಯಾಡಿದ್ದ ಆರೋಪಿಗಳು ಬಂಡೀಪುರ ಮುಂಟೀಪುರ ಸಸ್ಯ ಕ್ಷೇತ್ರದ ಅರಣ್ಯ ವ್ಯಾಪ್ತಿಯಲ್ಲಿ ಬೇಟೆಯಾಡಲು ಪ್ರಾಣಿಗಳು ಬರುವುದನ್ನೇ ಕಾಯುತ್ತಿದ್ದರು.
ಈ ವಿಷಯ ಅರಣ್ಯ ಇಲಾಖೆಯ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಎಸಿಎಫ್ ಪೂವಯ್ಯ ಮಾರ್ಗದರ್ಶನದಲ್ಲಿ ತಂಡವನ್ನು ರಚಿಸಿ ಕಾರ್ಯಾಚರಣೆಗೆ ಆದೇಶಿಸಿದ್ದರು.
ಅದರಂತೆ ಆರ್ಎಫ್ಓ ಮುಕುಂದ, ಅರಣ್ಯ ರಕ್ಷಕರಾದ ದಿಲೀಪ್ಕುಮಾರ್, ರವಿಕುಮಾರ್, ಹರೀಶ್, ರಕ್ಷಿತ್, ಪುಟ್ಟರಾಜು, ಹನೀಫ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಆರು ಮಂದಿ ತಪ್ಪಿಸಿಕೊಂಡಿದ್ದು, ಸಿದ್ದರಾಜು ಮತ್ತು ಮಹೇಶ್ ಸಿಕ್ಕಿಬಿದ್ದಿದ್ದಾರೆ.
ಬಂಧಿತರಿಂದ (ಕೆ.ಎ.10.ಕೆ.6307), ತಲೆ ಬ್ಯಾಟರಿ, ಬಲೆ, ಕೊಡಲಿಗಳನ್ನು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications