ಪ್ರಸಾದಕ್ಕೆ ವಿಷ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ: ಪರಮೇಶ್ವರ್
ಚಾಮರಾಜನಗರ, ಡಿಸೆಂಬರ್ 15: ಜಿಲ್ಲೆಯ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಪ್ರಸಾದದಲ್ಲಿ ವಿಷ ಬೆರೆಸಿ ಹನ್ನೊಂದು ಪ್ರಾಣಗಳ ಜೀವಕ್ಕೆ ಎರವಾದ ಪ್ರಕರಣದಲ್ಲಿ ಚಾಮರಾಜನಗರ ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.
ವಿಷಯುಕ್ತ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆಯುತ್ತಿರುವವನ್ನು ಕಟ್ಟಿಹಾಕಿದ್ದಾರೆ ವೈದ್ಯರು! ಏಕೆ?
ಈ ಬಗ್ಗೆ ಗೃಹಮಂತ್ರಿಗಳು ಮಾಹಿತಿ ನೀಡಿದ್ದು, ಇದೊಂದು ನೀಚ ಕೃತ್ಯ. ಈ ಕಾರ್ಯ ಎಸಗಿದ ಯಾರೇ ಆಗಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ತನಿಖೆ ಈಗಾಗಲೇ ನಡೆಯುತ್ತಿದ್ದು, ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ವಿಷಪ್ರಸಾದ ಸೇವಿಸಿ ಮೃತರಾದವರ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್ನಿಂದ 1 ಲಕ್ಷ
ತನಿಖೆ ಪ್ರಾಥಮಿಕ ಹಂತದಲ್ಲಿರುವ ಕಾರಣ ವಶಕ್ಕೆ ಪಡೆದವರ ಹೆಸರುಗಳನ್ನು ಪ್ರಕಟಿಸಲು ಪೊಲೀಸರು ನಿರಾಕರಿಸಿದ್ದಾರೆ. ಆದರೆ ವಶಪಡಿಸಿಕೊಂಡಿರುವ ಇಬ್ಬರಲ್ಲಿ ಒಬ್ಬರು ದೇವಾಲಯದ ಪ್ರಧಾನ ಪೂಜಾರಿ ಹಾಗೂ ಮತ್ತೊಬ್ಬರು ಪ್ರಸಾದದ ಅಡುಗೆ ಮಾಡಿದ ವ್ಯಕ್ತಿ ಎಂದು ಹೇಳಲಾಗಿದೆ.
ದೇವಾಲಯದ ಆಡಳಿತದ ಸಂಬಂಧ ದ್ವೇಷದಿಂದಲೇ ಈ ಕೃತ್ಯ ನಡೆದಿದೆ ಎಂದು ಸ್ಥಳೀಯರು ಹೇಳುತ್ತಿದ್ದು, ದೇವಾಲಯದ ಆಡಳಿತಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿ ಸೋತು, ಹತಾಶೆ ಅನುಭವಿಸಿದ್ದ ತಮಿಳುನಾಡು ಮೂಲದ ಕಾಳಪ್ಪ ಎಂಬುವರೇ ಈ ಕೃತ್ಯ ಮಾಡಿದ್ದಾರೆ ಎಂದು ಸ್ಥಳೀಯರು ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ.
ಕಿಚ್ಚುಗುತ್ತಿ ಮಾರಮ್ಮ ದೇಗುಲದ ಅಭಿವೃದ್ಧಿಯೇ ಭಕ್ತರ ಜೀವಕ್ಕೆ ಕುತ್ತಾಯಿತಾ?
ಈ ಪ್ರಕರಣದ ಸಂಬಂಧ ಉನ್ನತ ಮಟ್ಟದ ತನಿಖೆ ಮಾಡಲಾಗುತ್ತದೆ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಗೃಹ ಸಚಿವರು ಸಹ ಅದನ್ನೇ ಹೇಳಿದ್ದಾರೆ. ಅದರಂತೆ ಇಂದು ಬೆಳಿಗ್ಗೆ ಗುಪ್ತಚರ ಇಲಾಖೆ ಅಧಿಕಾರಿಗಳು ದೇವಾಲಯಕ್ಕೆ ಬಂದು ಬಹು ಸಮಯ ಪರಿಶೀಲನೆ ನಡೆಸಿ, ಸ್ಥಳೀಯರೊಂದಿಗೂ ಮಾಹಿತಿ ಪಡೆದುಕೊಂಡರು.