ಚಾಮರಾಜನಗರ ಡಿಸಿಗೆ ಕರೆ ಮಾಡಿದ ಕೇಂದ್ರ ಆರೋಗ್ಯ ಸಚಿವ. ಕಾರಣ?
ಚಾಮರಾಜನಗರ, ಜೂನ್ 5: ಕೊರೊನಾ ವೈರಸ್ ಹಾಟ್ ಸ್ಪಾಟ್ ಗಳ ಮಧ್ಯೆ ಇದ್ದರೂ ಚಾಮರಾಜನಗರ ಜಿಲ್ಲೆಯಲ್ಲಿ ಈವರೆಗೂ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರಿಗೆ ದೂರವಾಣಿ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಅದರಲ್ಲೂ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಚಾಮರಾಜನಗರ ಜಿಲ್ಲೆ ಪಾತ್ರವಾಗಿದೆ. ವಿಶೇಷವೆಂದರೆ ಜಿಲ್ಲೆಯು ಕೊರೊನಾ ವೈರಸ್ ಹಾಟ್ ಸ್ಪಾಟ್ ಜಿಲ್ಲೆ ಹಾಗೂ ರಾಜ್ಯಗಳೊಂದಿಗೆ ತನ್ನ ಗಡಿ ಹಂಚಿಕೊಂಡಿದೆ. ತಮಿಳುನಾಡು, ಕೇರಳ ರಾಜ್ಯಗಳು ಒಂದೆಡೆಯಾದರೆ ಮೈಸೂರು, ಮಂಡ್ಯ ಇನ್ನೊಂದೆಡೆ ಇವೆ. ಹೀಗಿದ್ದರೂ ಜಿಲ್ಲೆಯಲ್ಲಿ ಈವರೆಗೂ ಒಂದೂ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ.
ಚಾಮರಾಜನಗರ ಜಿಲ್ಲಾಡಳಿತದ ಕಾರ್ಯವೈಖರಿಯ ಬಗ್ಗೆ ಸ್ವತಃ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಸುದ್ದಿಗಾರರ ಜೊತೆ ಹಂಚಿಕೊಂಡಿದ್ದಾರೆ.

""ಕೇಂದ್ರ ಆರೋಗ್ಯ ಸಚಿವರ ಕರೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಅವರು ಕರೆ ಮಾಡಿರುವುದರಿಂದ ಬಹಳ ಆಶ್ಚರ್ಯದ ಜೊತೆಗೆ ಹೆಮ್ಮೆಯಾಗಿದೆ. ಖುಷಿಯ ಜೊತೆಗೆ ನನ್ನ ಜವಾಬ್ದಾರಿಯೂ ಹೆಚ್ಚಾಗಿದೆ. ಕೇಂದ್ರ ಸಚಿವರೇ ಕರೆ ಮಾಡಿ ಅಭಿನಂದನೆ ಮಾಡಿದ್ದಾರೆ. ನಮ್ಮ ಇಡೀ ತಂಡಕ್ಕೆ ಹಾಗೂ ಜಿಲ್ಲೆಯ ಜನತೆಗೆ ಅಭಿನಂದನೆ ಸಲ್ಲಿಸಿದರು'' ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದರು.
""ಚಾಮರಾಜನಗರ ಜಿಲ್ಲೆಯು ಕೊರೊನಾ ವೈರಸ್ ಮುಕ್ತವಾಗಿರುವುದನ್ನು ಸ್ವತಃ ಆರೋಗ್ಯ ಸಚಿವರೇ ಖುದ್ದಾಗಿ ಗುರುತಿಸಿರುವುದು ಹೆಮ್ಮೆಯ ಸಂಗತಿ. ದೆಹಲಿಗೆ ಬಂದಾಗ ತಮ್ಮ ಕಚೇರಿಗೆ ಬಂದು ಹೋಗುವಂತೆ ಆರೋಗ್ಯ ಸಚಿವರಾದ ಡಾ.ಹರ್ಷವರ್ಧನ್ ಆವರು ತಿಳಿಸಿದ್ದಾರೆ" ಎಂದರು.

ಇದುವರೆಗೆ ಒಂದೇ ಒಂದು ಕೊರೊನಾ ಪ್ರಕರಣ ಇಲ್ಲದೆ ದಕ್ಷಿಣ ಭಾರತದಲ್ಲಿಯೇ ಏಕೈಕ ಕೊರೊನಾ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ ಜಿಲ್ಲೆಗಿದೆ. ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಹಸಿರು ವಲಯವಾಗಿ ಕೊರೊನಾ ಮುಕ್ತ ಜಿಲ್ಲೆಯಾಗಿಯೇ ಉಳಿದಿರುವುದು ಚಾಮರಾಜನಗರ ಎಂಬುದು Covid19india.org ನೀಡಿರುವ ಅಧಿಕೃತ ಅಂಕಿ ಅಂಶಗಳಿಂದ ಖಚಿತವಾಗಿದೆ.
ತೆಲಂಗಾಣದ ವಾರಂಗಲ್ ಗ್ರಾಮೀಣ ಹಾಗೂ ಕರ್ನಾಟಕದ ಚಾಮರಾಜನಗರ ಜಿಲ್ಲೆಗಳಲ್ಲಿ ಮಾತ್ರ ಕೊರೊನಾ ಕಂಡು ಬಂದಿರಲಿಲ್ಲ. ಆದರೆ ತೆಲಂಗಾಣದ ವಾರಂಗಲ್ ಗ್ರಾಮೀಣ ಜಿಲ್ಲೆಯಲ್ಲಿ ಮಂಗಳವಾರ ಕೊರೊನಾ ಪ್ರಕರಣ ಪತ್ತೆಯಾಗಿದೆ. ಹೀಗಾಗಿ ಚಾಮರಾಜನಗರ ದಕ್ಷಿಣ ಭಾರತದ ಕೊರೊನಾ ಮುಕ್ತ ಏಕೈಕ ಜಿಲ್ಲೆ ಎಂಬ ಹಿರಿಮೆಗೆ ಪಾತ್ರವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications