ಚಾಮರಾಜನಗರದಲ್ಲಿ ವದಂತಿ ಕೇಳಿ ಮಕ್ಕಳ ಮನೆಗೆ ಕರೆದೊಯ್ದ ಪೋಷಕರು
ಚಾಮರಾಜನಗರ, ಫೆಬ್ರವರಿ 7: ಮಂಗಳವಾರ ಚಾಮರಾಜನಗರದ ಕೆಲವು ಶಾಲೆಗಳಲ್ಲಿ ರುಬೆಲ್ಲಾ, ದಡಾರ ಲಸಿಕೆ ಕಾರ್ಯಕ್ರಮ ದಿಢೀರ್ ಅಂತ ಅರ್ಧಕ್ಕೆ ನಿಂತುಹೋಯಿತು. ಲಸಿಕೆ ಹಾಕಿಸಿದರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಯಾರು ವದಂತಿ ಹಬ್ಬಿಸಿದರೋ ಗೊತ್ತಿಲ್ಲ, ಈ ಸುದ್ದಿಯಂತೂ ಕಾಳ್ಗಿಚ್ಚಿನಂತೆ ಹಬ್ಬಿತು.

ಈ ಸುದ್ದಿ ಒಬ್ಬರಿಂದ ಒಬ್ಬರ ಬಾಯಿಗೆ ಹರಡಿ, ಪೋಷಕರು ಎದ್ದೇವೋ ಬಿದ್ದೇವೋ ಎಂದು ಗಾಬರಿಯಲ್ಲಿ ಶಾಲೆಗೆ ತೆರಳಿ, ಮಕ್ಕಳನ್ನು ವಾಪಸ್ ಮನೆಗೆ ಕರೆದುಕೊಂಡು ಹೋದರು. ಇನನ್ನೇನು ಮಕ್ಕಳೇ ಮನೆಗೆ ಹೋದ ಲಸಿಕೆ ಯಾರಿಗೆ ಹಾಕಬೇಕು ಹೇಳಿ. ಇಡೀ ಅಭಿಯಾನವೇ ಅರ್ಧಕ್ಕೆ ನಿಂತು ಹೋಯಿತು.

ನಿಮ್ಮ ಮಗುವಿಗೆ ಏನೂ ಆಗುವುದಿಲ್ಲ. ಅವರ ಆರೋಗ್ಯದ ದೃಷ್ಟಿಯಿಂದ ಲಸಿಕೆ ಹಾಕಿಸುತ್ತಿದ್ದೇವೆ. ಯಾರೂ ಗಾಬರಿ ಅಗಬೇಡಿ. ಸಲ್ಲದ ವದಂತಿಗಳಿಗೆ ಕಿವಿಗೊಡಬೇಡಿ. ನಮ್ಮ ಸದುದ್ದೇಶಕ್ಕೆ ಮಕ್ಕಳ ಪೋಷಕರು ಸಹಕರಿಸಬೇಕು ಎಂದು ಆರೋಗ್ಯ ಅಧಿಕಾರಿಗಳೇನೋ ಮನವಿ ಮಾಡಿದ್ದಾರೆ. ಆದರೆ ಮಕ್ಕಳನ್ನು ಕರೆದುಕೊಂಡು ಲಸಿಕೆ ಹಾಕಿಸ್ತಾರಾ ಎಂದು ಕಾದು ನೋಡಬೇಕಷ್ಟೇ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications