ವೈಕುಂಠ ಏಕಾದಶಿ 2023: ಚಾಮರಾಜನಗರ ಜಿಲ್ಲೆಯ ಬಿಆರ್ ಹಿಲ್ಸ್ಗೆ ಕೇಂದ್ರ ಅರಣ್ಯ ಸಚಿವ ಭೇಟಿ
ಚಾಮರಾಜನಗರ, ಜನವರಿ, 02: ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಸೋಮವಾರ (ಜನವರಿ 02) ಯಳಂದೂರು ತಾಲೂಕಿನ ಬಿಳಿಗಿರಿರಂಗನನಾಥ ದೇವಾಲಯಕ್ಕೆ ಭೇಟಿ ಕೊಟ್ಟಿದ್ದರು.
ವೈಕುಂಠ ಏಕಾದಶಿ ಹಿನ್ನೆಲೆ ವಿಷ್ಣು ದೇವಾಲಯವಾದ ಬಿಳಿಗಿರಿಬನಕ್ಕೆ ಭೇಟಿ ಕೊಟ್ಟು ರಂಗನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಇದಕ್ಕೂ ಮೊದಲು ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಅರಣ್ಯ ಸಚಿವರು ಸಫಾರಿ ನಡೆಸಿದ್ದಾರೆ. ಹಾಗೆಯೇ ಮಂಗಳವಾರ ಬಂಡೀಪುರದಲ್ಲಿ ನಡೆಯುವ ಎನ್ಟಿಸಿಎ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ದೇವಾಲಯಕ್ಕೆ ಹರಿದುಬಂದ ಭಕ್ತ ಸಾಗರ
ಚಾಮರಾಜನಗರ ಜಿಲ್ಲೆಯ ವಿಷ್ಣು ದೇವಾಲಯಗಳಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ಚಾಮರಾಜನಗರದ ಕಾಡು ನಾರಾಯಣಸ್ವಾಮಿ ದೇವಾಲಯ, ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಯಳಂದೂರಿನ ಬಿಳಿಗಿರಿರಂಗನಾಥನ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಚಾಮರಾಜನಗರದಲ್ಲಿನ ಕಾಡು ನಾರಾಯಣಸ್ವಾಮಿ ದೇವಾಲಯದಲ್ಲಿ ಸಪ್ತದ್ವಾರಗಳನ್ನು ನಿರ್ಮಾಣ ಮಾಡಲಾಗಿದ್ದು, ದ್ವಾರಗಳನ್ನು ದಾಟಿ ದೇವರ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬಂದಿತ್ತು. ಭಕ್ತರು ವೈಕಂಠ ದ್ವಾರದ ಮೂಲಕ ಶ್ರೀದೇವಿ, ಭೂದೇವಿ ಸಮೇತ ನಾರಾಯಣಸ್ವಾಮಿ ದೇವರ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸುತ್ತಲೇ ಇದ್ದಾರೆ. ಹಾಗೆಯೇ ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪ್ರಮುಖ ತಾಣಗಳಲ್ಲಿ ಪ್ರವಾಸಿಗರದೇ ದರ್ಬಾರ್
2023ರ ವರ್ಷ ಕಾಲಿಟ್ಟ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾದ್ಯಂತ ಸಂಭ್ರಮಾಚರಣೆಗಳು ಜೋರಾಗಿ ನಡೆದಿದ್ದು, ಪ್ರವಾಸಿ ತಾಣಗಳು ಇನ್ನು ತುಂಬಿ ತುಳುಕುತ್ತಿವೆ. ವರ್ಷಾರಂಭ ಭಾನುವಾರವೇ ಬಂದ ಹಿನ್ನೆಲೆಯಲ್ಲಿ ರಜೆ ಜೊತೆಗೆ, ಹೊಸವರ್ಷದ ಸಂಭ್ರಮಾಚರಣೆಗೆ ಹೊಸ ಕಳೆ ಬಂದಂತಿತ್ತು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಯಳಂದೂರಿನ ಬಿಳಿಗಿರಿರಂಗನನಾಥ ದೇವಾಲಯ, ಚಾಮರಾಜನಗರ ತಾಲೂಕಿನ ಕೆ.ಗುಡಿ, ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಜನಸಾಗರವೇ ಹರಿದುಬಂದಿದೆ.
ವರ್ಷದ ಕೊನೆಯ ದಿನವಾದ ಶನಿವಾರ ಮಲೆಮಹದೇಶ್ವರ ಬೆಟ್ಟದಲ್ಲಿ ನೂರಾರು ಭಕ್ತರು ಚಿನ್ನದ ರಥ ಎಳೆದು ಪುನೀತರಾಗಿದ್ದು, ನೂತನ ವರ್ಷಕ್ಕೆ ವಿವಿಧ ಪ್ರಾರ್ಥನೆಗಳನ್ನು ಸಲ್ಲಿಸಿ ಮಲೆ ಮಹದೇಶ್ವರನಿಗೆ ಮಧ್ಯರಾತ್ರಿ ಜೈಕಾರ ಹಾಕಿದ್ದರು. ಇನ್ನು, ಬಿಳಿಗಿರಿರಂಗನನಾಥ ದೇವಾಲಯ ಹಾಗೂ ಗೋಪಾಲಸ್ವಾಮಿ ಬೆಟ್ಟಕ್ಕಂತೂ ಬೈಕ್ ರೈಡರ್ಗಳು, ಕುಟುಂಬ ಹಾಗೂ ಸ್ನೇಹಿತರ ಗುಂಪುಗಳೇ ಸೇರಿ ನೂತನ ವರ್ಷವನ್ನು ಪ್ರಕೃತಿ ಮಡಿಲಲ್ಲಿ ಕಳೆಯುತ್ತಿದ್ದಾರೆ. ಹಾಗೆಯೇ ಕೆ.ಗುಡಿಗೂ ಸಹ ಪ್ರವಾಸಿಗರು ಇನ್ನು ಹರಿದು ಬರುತ್ತಲೇ ಇದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications