ಬಾಂಡಲಿ, ಮಾವುಟಿ ಹಿಡಿದು ವಾಟಾಳ್ ನಾಗರಾಜ್ ಪ್ರತಿಭಟನೆ
ಚಾಮರಾಜನಗರ, ಸೆಪ್ಟೆಂಬರ್ 1: ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಾಂಡಲಿ-ಮಾವುಟಿ ಹಿಡಿದು, ಗೋಣಿ ತಾಟು ಹಾಸಿ ಅದರ ಮೇಲೆ ಕುಳಿತು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸತ್ಯಾಗ್ರಹ ನಡೆಸಿದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಜಿಲ್ಲೆಯ ರಸ್ತೆಗಳು ಹದಗೆಟ್ಟಿದೆ. ಗರ್ಭಿಣಿಯರು ಹೆರಿಗೆಗೆಂದು ವಾಹನದಲ್ಲಿ ತೆರಳಿದರೆ ಆಸ್ಪತ್ರೆಗೆ ತಲುಪುವ ಮುನ್ನ ಮಾರ್ಗಮಧ್ಯದಲ್ಲಿ ಹೆರಿಗೆಯಾಗುತ್ತದೆ. ಚಾಮರಾಜನಗರದ ಎಲ್ಲ ಬೀದಿಯ ರಸ್ತೆಗಳು ಹಾಳಾಗಿ ಹಳ್ಳ-ಗುಂಡಿಗಳಾಗಿವೆ ಎಂದು ದೂರಿದರು.

ರಸ್ತೆ ವಿಸ್ತರಣೆಯಿಂದ ಮನೆಯನ್ನು ಕಳೆದುಕೊಂಡಿರುವ ನಿವಾಸಿಗಳಿಗೆ ಕೂಡಲೇ ನಿವೇಶನ ನೀಡಬೇಕು, ನಗರದಲ್ಲಿ 90 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು, ತಕ್ಷಣವೇ ಕಾವೇರಿ ಕುಡಿಯುವ ನೀರಿನ ಎರಡನೇ ಹಂತ ಜಾರಿ ಆಗಬೇಕು. ಒಳಚರಂಡಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಬೇಗ ಮುಗಿಸಬೇಕು ಎಂದು ಆಗ್ರಹಿಸಿದರು.
ಚಾಮರಾಜನಗರವನ್ನು ಜಿಲ್ಲೆಯನ್ನಾಗಿ ಮಾಡಿದವನು ನಾನೇ. ಕುಡಿಯಲು ಕಾವೇರಿ ನೀರು ತಂದವನು ನಾನೇ. ಜೋಡಿರಸ್ತೆ, ಖಾಸಗಿ ಬಸ್ ನಿಲ್ದಾಣ, ಆಟದ ಮೈದಾನ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ ಎಂದು ತಿಳಿಸಿದ ವಾಟಾಳ್ ನಾಗರಾಜ್, ಇನ್ನು 15 ದಿನಗಳ ಒಳಗಾಗಿ ನಗರ ಪ್ರದೇಶವನ್ನು ಅಭಿವೃದ್ಧಿ ಪಡಿಸದಿದ್ದರೆ ನಡು ಬೀದಿಯಲ್ಲಿ ಮಲಗಿ ಉರುಳು ಸೇವೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications